AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone Asani: ಮುಂದಿನವಾರ ಅಪ್ಪಳಿಸಲಿದೆ ಅಸನಿ ಚಂಡಮಾರುತ; ಹವಾಮಾನ ಇಲಾಖೆಯಿಂದ ಎಚ್ಚರಿಕೆ

ಚಂಡಮಾರುತ ಅಪಾಯ ಇರುವ ಹಿನ್ನೆಲೆಯಲ್ಲಿ ಬಂಗಾಳಕೊಲ್ಲಿಯ ದಕ್ಷಿಣ ಕರಾವಳಿ ಮತ್ತು ಅದಕ್ಕೆ ಹೊಂದಿಕೊಂಡಿರುವ ಹಿಂದೂ ಮಹಾಸಾಗರ ಸಮಭಾಜಕ ಪ್ರದೇಶಗಳ ಕರಾವಳಿಯಲ್ಲಿನ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚಿಸಿದೆ.

Cyclone Asani: ಮುಂದಿನವಾರ ಅಪ್ಪಳಿಸಲಿದೆ ಅಸನಿ ಚಂಡಮಾರುತ; ಹವಾಮಾನ ಇಲಾಖೆಯಿಂದ ಎಚ್ಚರಿಕೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Mar 17, 2022 | 8:26 AM

Share

ಹಿಂದೂ ಮಹಾಸಾಗರದ ನೈಋತ್ಯ ಭಾಗದಲ್ಲಿ (ಬಂಗಾಳ ಕೊಲ್ಲಿ) ಕಡಿಮೆ ಒತ್ತಡ ಸ್ಥಿತಿ ಉಂಟಾಗಿದ್ದು, ಮುಂದಿನ ವಾರದಷ್ಟೊತ್ತಿಗೆ ಇನ್ನಷ್ಟು ತೀವ್ರಗೊಳ್ಳಲಿದೆ. ಈ ಕಾರಣದಿಂದ ಅಸನಿ ಚಂಡಮಾರುತ (Cyclone Asani) ಏಳುವ ಸಾಧ್ಯತೆ ಹೆಚ್ಚಾಗಿದೆ. ಈ ಚಂಡಮಾರುತ ಬಾಂಗ್ಲಾದೇಶ ಮತ್ತು ಉತ್ತರ ಮ್ಯಾನ್ಮಾರ್​​ ಕಡೆಗೆ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.  ಸಾಗರದಲ್ಲಿ ಕಡಿಮೆ ಒತ್ತಡ ವಾತಾವರಣ ಪರಿಸ್ಥಿತಿ ಮಂಗಳವಾರ ರಚಿತಗೊಂಡಿದ್ದು, ಅದು ಶನಿವಾರದ ಹೊತ್ತಿಗೆ ಇನ್ನಷ್ಟು ತೀವ್ರಗೊಳ್ಳುತ್ತದೆ. ಹೀಗಾಗಿ ಗಾಳಿಯು ಪೂರ್ವ ಮತ್ತು ಈಶಾನ್ಯ ರಾಜ್ಯಗಳತ್ತ ಚಲಿಸಲಿದೆ. ಹಾಗೇ ದುರ್ಬಲ ಗೊಳ್ಳುವುದಕ್ಕೂ ಮೊದಲು ಅಂಡಮಾನ್​-ನಿಕೋಬಾರ್​ ಪ್ರವೇಶಿಸಲಿದೆ ಎಂದೂ ಐಎಂಡಿ ವಿವರಿಸಿದೆ.

ಸದ್ಯ ಕಡಿಮೆ ಒತ್ತಡ ಪ್ರದೇಶ ಸೃಷ್ಟಿಯಾಗಿದ್ದರೂ ಯಾವುದೇ ಚಂಡಮಾರುತ ಎದ್ದಿಲ್ಲ. ಆದರೆ ಈ ಸ್ಥಿತಿ ಇನ್ನಷ್ಟು ತೀವ್ರ ಆದರೆ ಚಂಡಮಾರುತವಾಗಿ ಪರಿವರ್ತನೆಗೊಳ್ಳಲಿದೆ. ಇದೇ ವಾತಾವರಣ ಮಾರ್ಚ್​ 21ರಂದು ತೀವ್ರಗೊಂಡು, ಚಂಡಮಾರುತವಾಗಿ ಪರಿವರ್ತನೆಯಾಗಲಿದ್ದು, ಮಾರ್ಚ್​ 22ರವರೆಗೂ ಉತ್ತರ, ವಾಯುವ್ಯದತ್ತ ಚಲಿಸಲಿದೆ. ಈ ಬಾರಿ ಏಳುವ ಚಂಡಮಾರುತಕ್ಕೆ ಅಸನಿ ಎಂದು ಹೆಸರಿಸಲಾಗಿದೆ. ಈ ಹೆಸರನ್ನು ಶ್ರೀಲಂಕಾ ದೇಶ ನಾಮಕರಣ ಮಾಡಿದ್ದು, ಹೀಗೆಂದರೆ ಸಿಡಿಲು ಎಂಬ ಅರ್ಥವೂ ಇದೆ.  ಚಂಡ ಮಾರುತ ಉತ್ತರ-ವಾಯುವ್ಯದ ಕಡೆಗೆ ಚಲಿಸಿ ಬಾಂಗ್ಲಾದೇಶದ ಸಮೀಪ ತಲುಪಲಿದೆ. ಮಾರ್ಚ್​ 23ರಷ್ಟರಲ್ಲಿ ಉತ್ತರ ಮ್ಯಾನ್ಮಾರ್​​ ಕರಾವಳಿ  ತಲುಪಲಿದೆ ಎಂದೂ ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಚಂಡಮಾರುತ ಅಪಾಯ ಇರುವ ಹಿನ್ನೆಲೆಯಲ್ಲಿ ಬಂಗಾಳಕೊಲ್ಲಿಯ ದಕ್ಷಿಣ ಕರಾವಳಿ ಮತ್ತು ಅದಕ್ಕೆ ಹೊಂದಿಕೊಂಡಿರುವ ಹಿಂದೂ ಮಹಾಸಾಗರ ಸಮಭಾಜಕ ಪ್ರದೇಶಗಳ ಕರಾವಳಿಯಲ್ಲಿನ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚಿಸಿದೆ. ಹಾಗೇ ಅಂಡಮಾನ್​ ದ್ವೀಪ, ಆಗ್ನೇಯ ಬಂಗಾಳ ಕೊಲ್ಲಿ  ಪ್ರದೇಶದ ಜನರಿಗೂ ಎಚ್ಚರವಾಗಿರುವಂತೆ ತಿಳಿಸಲಾಗಿದೆ. ಭಾನುವಾರದ ಸುಮಾರಿಗೆ ಅಂಡಮಾನ್​-ನಿಕೋಬಾರ್​ ದ್ವೀಪದಲ್ಲಿ ಜೋರಾದ ಗಾಳಿ ಇರಬಹುದು. ಅದು ತಾಸಿಗೆ 70-80 ಕಿಮೀ ವೇಗದಲ್ಲಿ ಬೀಸುವಷ್ಟು ವೇಗ ತಲುಪಿ, ಮರುದಿನ ಅಂದರೆ ಸೋಮವಾರದ ಹೊತ್ತಿಗೆ ಗಂಟೆಗೆ 90 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ ಎಂದೂ ಹೇಳಲಾಗಿದೆ.

ಇದನ್ನೂ ಓದಿ: Banana Disadvantages: ಅತಿ ಹೆಚ್ಚು ಬಾಳೆಹಣ್ಣು ಸೇವಿಸುತ್ತಿದ್ದೀರಾ? ಅಡ್ಡಪರಿಣಾಮಗಳ ಬಗ್ಗೆಯೂ ಇರಲಿ ನಿಮ್ಮ ಗಮನ

Published On - 8:23 am, Thu, 17 March 22

ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು