AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone Biparjoy: ಭೂಕುಸಿತದ ಆತಂಕಕ್ಕೆ ಗುಜರಾತ್‌ನ ಕಚ್‌ನಿಂದ 30,000 ಜನರ ಸ್ಥಳಾಂತರ

ಬಿಪರ್‌ಜೋಯ್‌ ಚಂಡಮಾರುತದಿಂದ ಭೂಕುಸಿತ ಸಂಭವಿಸುತ್ತದೆ ಎಂಬ ಕಾರಣಕ್ಕೆ ಎರಡು ದಿನಗಳ ಮೊದಲೇ ಅಧಿಕಾರಿಗಳಿಗೂ ಮಂಗಳವಾರ ಕರಾವಳಿ ಪ್ರದೇಶಗಳಿಂದ 30,000 ಜನರನ್ನು ತಾತ್ಕಾಲಿಕ ಆಶ್ರಯಕ್ಕೆ ಸ್ಥಳಾಂತರಿಸಿದ್ದಾರೆ

Cyclone Biparjoy: ಭೂಕುಸಿತದ ಆತಂಕಕ್ಕೆ ಗುಜರಾತ್‌ನ ಕಚ್‌ನಿಂದ 30,000 ಜನರ ಸ್ಥಳಾಂತರ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Jun 14, 2023 | 11:27 AM

ಗಾಂಧಿನಗರ: ಗುಜರಾತ್‌ನ ಕಚ್ ಜಿಲ್ಲೆಯ ಜಖೌ ಬಂದರಿನ ಬಳಿ ಬಿಪರ್‌ಜೋಯ್‌ ಚಂಡಮಾರುತದಿಂದ (Cyclone Biparjoy) ಭೂಕುಸಿತ ಸಂಭವಿಸುತ್ತದೆ ಎಂಬ ಕಾರಣಕ್ಕೆ ಎರಡು ದಿನಗಳ ಮೊದಲೇ ಅಧಿಕಾರಿಗಳಿಗೂ ಮಂಗಳವಾರ ಕರಾವಳಿ ಪ್ರದೇಶಗಳಿಂದ 30,000 ಜನರನ್ನು ತಾತ್ಕಾಲಿಕ ಆಶ್ರಯಕ್ಕೆ ಸ್ಥಳಾಂತರಿಸಿದ್ದಾರೆ ಎಂದು ತಿಳಿಸಿದ್ದಾರೆ. ಭಾರತದ ಉತ್ತರ ಮತ್ತು ದಕ್ಷಿಣ ಭಾರತಗಳನ್ನು ನಲುಗಿಸಿದ ಚಂಡಮಾರುತ ‘ಸೈಕ್ಲೋನ್ ಬೈಪರ್ಜೋಯ್’ ಭಾರತಕ್ಕೆ ಆತಂಕವನ್ನು ಸೃಷ್ಟಿ ಮಾಡಿದೆ. ಮಂಗಳವಾರ ಇದರ ತೀವ್ರತೆ ಇನ್ನೂ ಹೆಚ್ಚಾಗಿದ್ದು. ಇದು ಅತ್ಯಂತ ತೀವ್ರವಾದ ಚಂಡಮಾರುತವಾಗಿ ಮಾರ್ಪಟ್ಟಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಹವಾಮಾನ ಇಲಾಖೆಯ ಪ್ರಕಾರ, ಚಂಡಮಾರುತವು ಗಂಟೆಗೆ ಐದು ಕಿಲೋಮೀಟರ್ ವೇಗದಲ್ಲಿ ಉತ್ತರಾಭಿಮುಖವಾಗಿ ಚಲಿಸುತ್ತಿದೆ ಮತ್ತು ಗುಜರಾತ್‌ನ ಪೋರಬಂದರ್‌ನಿಂದ ಸುಮಾರು 290 ಕಿಮೀ ನೈಋತ್ಯಕ್ಕೆ ಅಪ್ಪಳಿಸಲಿದೆ. ಇದು ಗುರುವಾರ ಗುಜರಾತ್‌ನ ಸೌರಾಷ್ಟ್ರ ಮತ್ತು ಕಚ್ ಪ್ರದೇಶಗಳು ಹಾಗೂ ಪಕ್ಕದ ಪಾಕಿಸ್ತಾನದ ಕರಾವಳಿಯನ್ನು ದಾಟುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

1982ರಿಂದ ಯಾವುದೇ ಅರೇಬಿಯನ್ ಸಮುದ್ರದ ಚಂಡಮಾರುತವು ಬಿಪಾರ್ಜೋಯ್ (126 ಗಂಟೆಗಳು) ವರೆಗೆ ಅಪ್ಪಳಿಸಲು ಸಾಧ್ಯವಿಲ್ಲ ಎಂದು ಇಲಾಖೆ ತಿಳಿಸಿದೆ. ಆದರೆ ಜೂನ್ 15 ರಂದು ಗುಜರಾತ್ ಮತ್ತು ಪಾಕಿಸ್ತಾನದ ಕರಾವಳಿ ಪ್ರದೇಶಗಳಿಗೂ ಅಪ್ಪಳಿಸಲಿದೆ ಎಂದು ವರದಿ ಹೇಳಿದೆ, ಬಿಪರ್ಜೋಯ್ ಇದುವರೆಗೆ ಎರಡು ಹಂತಗಳ ವೇಗವರ್ಧನೆಯನ್ನು ಕಂಡಿದೆ. ಜೂನ್ 6 ಮತ್ತು 7ರ ನಡುವೆ ಅದರ ಗಾಳಿಯ ವೇಗವು 55 kmph ನಿಂದ 139 kmph ವರೆಗೆ ಮತ್ತು ಇನ್ನೊಂದು ಜೂನ್ 9 ಮತ್ತು ಜೂನ್ 10ರ ನಡುವೆ, ಸ್ವಲ್ಪ ಕಡಿಮೆ ವೇಗದಲ್ಲಿ 120 kmph ನಿಂದ 195 kmph ಗೆ ತಲುಪಿದೆ. ಟೈಫೂನ್ ಎಚ್ಚರಿಕೆ ಕೇಂದ್ರದ (JTWC) ಮಾಹಿತಿಯ ಪ್ರಕಾರ, ಚಂಡಮಾರುತವು ಜೂನ್ 6ರಿಂದ ಜೂನ್ 10 ವರೆಗೆ ಈ ಬಿಪರ್‌ಜೋಯ್ ಚಂಡಮಾರುತವು ವಿಕಸಗೊಂಡಿದೆ.

ಇದನ್ನೂ ಓದಿ: Cyclone Biparjoy: ಚಂಡಮಾರುತ ಸಮಯದಲ್ಲಿ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಸಲಹೆ ನೀಡಿದ ಎನ್​ಡಿಆರ್​ಎಫ್

ಬಿಪರ್‌ಜೋಯ್ ಚಂಡಮಾರುತದಿಂದಾಗಿ ಹವಾಮಾನ ವೈಪರೀತ್ಯದಿಂದ ಈ ಪ್ರದೇಶಗಳ ಮೂಲಕ ಹಾದುಹೋಗುವ 67 ರೈಲುಗಳನ್ನು ಪಶ್ಚಿಮ ರೈಲ್ವೆ ಇಲಾಖೆ ರದ್ದುಗೊಳಿಸಿದೆ. ಈಗಾಗಲೇ ರೈಲು ಬುಕ್​​ ಮಾಡಿರುವ ಪ್ರಯಾಣಿಕರ ಹಣವನ್ನು ಮರುಪಾವತಿ ಮಾಡಲಾಗುವುದು ಎಂದು ಇಲಾಖೆ ತಿಳಿಸಿದೆ. ಬಿಪರ್‌ಜೋಯ್ ಚಂಡಮಾರುತ ಪೀಡಿತ ಪ್ರದೇಶಗಳ ರೈಲು ಪ್ರಯಾಣಿಕರಿಗೆ ಪಶ್ಚಿಮ ರೈಲ್ವೇ ವಿವಿಧ ಸುರಕ್ಷತೆ ಮತ್ತು ಭದ್ರತಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಭಾರತೀಯ ರೈಲ್ವೆಯ ವಲಯ ಕಚೇರಿ ತಿಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:26 am, Wed, 14 June 23

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ