AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone Biparjoy: ಗುಜರಾತ್‌ನ ದ್ವಾರಕಾಧೀಶ ದೇವಾಲಯ ಬಂದ್

ಬಿಪರ್‌ಜೋಯ್ ಚಂಡಮಾರುತವು ಗುಜರಾತ್‌ನ ಕರಾವಳಿ ಪ್ರದೇಶವನ್ನು ಸಮೀಪಿಸುತ್ತಿದ್ದಂತೆ, ದೇವಭೂಮಿ ದ್ವಾರಕಾದಲ್ಲಿರುವ ದ್ವಾರಕಾಧೀಶ ದೇವಾಲಯವನ್ನು ಗುರುವಾರ ಮುಚ್ಚಲಾಗಿದೆ. ದ್ವಾರಕಾಧೀಶ್ ದೇವಾಲಯದ ಜೊತೆಗೆ ದ್ವಾರಕಾ ಬಜಾರ್ ಕೂಡ ಮುಚ್ಚಲಾಗಿದೆ.

Cyclone Biparjoy: ಗುಜರಾತ್‌ನ ದ್ವಾರಕಾಧೀಶ ದೇವಾಲಯ ಬಂದ್
ದ್ವಾರಕಾಧೀಶ ದೇವಾಲಯ
ಅಕ್ಷಯ್​ ಪಲ್ಲಮಜಲು​​
|

Updated on:Jun 15, 2023 | 12:57 PM

Share

ದ್ವಾರಕಾ: ಬಿಪರ್‌ಜೋಯ್ ಚಂಡಮಾರುತವು (Cyclone Biparjoy) ಗುಜರಾತ್‌ನ ಕರಾವಳಿ ಪ್ರದೇಶವನ್ನು ಸಮೀಪಿಸುತ್ತಿದ್ದಂತೆ, ದೇವಭೂಮಿ ದ್ವಾರಕಾದಲ್ಲಿರುವ ದ್ವಾರಕಾಧೀಶ ದೇವಾಲಯವನ್ನು ಗುರುವಾರ ಮುಚ್ಚಲಾಗಿದೆ. ದ್ವಾರಕಾಧೀಶ್ ದೇವಾಲಯದ ಜೊತೆಗೆ ದ್ವಾರಕಾ ಬಜಾರ್ ಕೂಡ ಮುಚ್ಚಲಾಗಿದೆ. ಆದರೆ, ದೇವಸ್ಥಾನದ ಪ್ರತಿದಿನ ನಡೆಯುವ ಪೂಜೆ ಯಥಾಸ್ಥಿತಿಯಾಗಿ ಮುಂದುವರಿಯಲಿದೆ. ಬೆಳಗಿನ ಪೂಜೆ, ಭೋಗ್ ಮತ್ತು ಆರತಿ ಇರುತ್ತದೆ. ದ್ವಾರಕಾಧೀಶ ದೇವಾಲಯದ ಅಧಿಕೃತ ವೆಬ್‌ಸೈಟ್ ಮೂಲಕ ನೇರ ದರ್ಶನವನ್ನು  ಪಡೆಯಬಹುದು ಎಂದು ದ್ವಾರಕಾಧೀಶ ದೇವಾಲಯದ ಅರ್ಚಕ ಮಲಯ್ ಪಾಂಡ್ಯ ತಿಳಿಸಿದ್ದಾರೆ.

ಬಿಪರ್‌ಜೋಯ್ ಜೂನ್ 15ರ ಸಂಜೆ ಗುಜರಾತ್‌ನ ಜಖೌ ಕರಾವಳಿಯ ಬಳಿ ಭೂಕುಸಿತ ಉಂಟು ಮಾಡುವ ಸಾಧ್ಯತೆ ಇದೆ. ದಕ್ಷಿಣ ಭಾಗ ಅನೇಕ ಕಡೆ ಇದು ಅಪ್ಪಳಿಸಲಿದೆ ಎಂದು ಹೇಳಲಾಗಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ವಿಎಸ್‌ಸಿಎಸ್ (ಅತಿ ತೀವ್ರ ಚಂಡಮಾರುತ) ಬಿಪರ್‌ಜೋಯ್ ಇಂದು ಸಂಜೆಯ ವೇಳೆಗೆ ಸೌರಾಷ್ಟ್ರ, ಕಚ್ ಮತ್ತು ಪಕ್ಕದ ಪಾಕಿಸ್ತಾನದ ಕರಾವಳಿಯನ್ನು ಮಾಂಡ್ವಿ ಮತ್ತು ಕರಾಚಿ ನಡುವೆ ಜಖೌ ಬಂದರಿಗಳಿಗೂ ಅಪ್ಪಳಿಸಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: Cyclone Biparjoy: ಬಾಹ್ಯಾಕಾಶದಲ್ಲಿ ಬೈಪರ್‌ಜೋಯ್ ಚಂಡಮಾರುತದ ದೃಶ್ಯವನ್ನು ಸೆರೆಹಿಡಿದ ಗಗನಯಾತ್ರಿ

ಬಿಪರ್‌ಜೋಯ್ ಚಂಡಮಾರುತದಿಂದ ಉದ್ಭವಿಸುವ ಯಾವುದೇ ಸಮಸ್ಯೆಗಳನ್ನು ಎದುರಿಸಲು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಂಡಿದೆ. ಈಗಾಗಲೇ ಬಿಎಸ್‌ಎಫ್ ಗುಜರಾತ್‌ನ ಇನ್ಸ್‌ಪೆಕ್ಟರ್ ಜನರಲ್ ರವಿ ಗಾಂಧಿ ಅವರು ಭುಜ್‌ನ ಕರಾವಳಿ ಪ್ರದೇಶಗಳಿಗೆ ಭೇಟಿ ನೀಡಿ. ಪರಿಸ್ಥಿತಿಯನ್ನು ಎದುರಿಸಲು ಮಾಡಿರುವ ಕಾರ್ಯಗಳ ಬಗ್ಗೆ ಪರಿಶೀಲನೆ ಮಾಡಲಾಗಿದೆ.

ಎಎನ್‌ಐ ಸುದ್ದಿ ಸಂಸ್ಥೆ ಜೊತೆ ಮಾತನಾಡಿದ ಬಿಎಸ್‌ಎಫ್ ಐಜಿ ರವಿ ಗಾಂಧಿ, ಅಂತರರಾಷ್ಟ್ರೀಯ ಗಡಿಯಲ್ಲಿ ಬಿಎಸ್‌ಎಫ್ ಪಡೆಗಳನ್ನು ನಿಯೋಜಿಸಲಾಗಿದೆ. ಐಎಂಡಿ ಮೌಲ್ಯಮಾಪನದ ಪ್ರಕಾರ, ಈ ಚಂಡಮಾರುತದ ಪ್ರಭಾವ ಮಾಂಡವಿಯಿಂದ ಕರಾಚಿವರೆಗೆ ಇದೆ. ನಮ್ಮ ಪಡೆಗಳು ಸಂಪೂರ್ಣ ಸಿದ್ಧತೆಯನ್ನು ಮಾಡಿಕೊಂಡಿದೆ. ಜನರಿಗೆ ಈ ಸಮಯದಲ್ಲಿ ಯಾವುದೇ ರೀತಿಯ ಸಹಾಯಗಳನ್ನು ಮಾಡಲು ಸಿದ್ಧ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:07 pm, Thu, 15 June 23

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ