Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone Biparjoy; 4 ದಿನದ ಮಗುವನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿದ ಮಹಿಳಾ ಪೊಲೀಸ್

ಗುಜರಾತ್‌ನ ಬರ್ದಾ ಡುಂಗರ್‌ನಲ್ಲಿ ಬಿಪರ್‌ಜೋಯ್ ಚಂಡಮಾರುತಕ್ಕೆ ತುತ್ತಾಗಿದ್ದ ಮಗು ಮತ್ತು ತಾಯಿಯನ್ನು ಇಂದು ರಾಜ್ಯ ಪೊಲೀಸರು ಸುರಕ್ಷಿತವಾಗಿ ಸ್ಥಳಾಂತರಿಸಿದ್ದಾರೆ.

Cyclone Biparjoy; 4 ದಿನದ ಮಗುವನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿದ ಮಹಿಳಾ ಪೊಲೀಸ್
4 ದಿನದ ಮಗುವನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿದ ಮಹಿಳಾ ಪೊಲೀಸ್
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Jun 16, 2023 | 10:46 AM

ದೆಹಲಿ: ಗುಜರಾತಿಗೆ ಜೂ.15ರಂದು ಬಿಪೋರ್​ಜಾಯ್ ಚಂಡಮಾರುತ  (Cyclone Biparjoy) ಅಪ್ಪಳಿಸಿದ್ದು, ಇದೀಗ ಭಾರೀ ಪ್ರಮಾಣದ ಹಾನಿಗಳಿಗೆ ಕಾರಣವಾಗಿದೆ. ನಾಲ್ಕು ದಿನಗಳಿಂದ ಈ ಚಂಡಮಾರುತ ಅನೇಕ ರೀತಿಯ ಸಮಸ್ಯೆಗಳಿಗೆ ಕಾರಣವಾಗಿದೆ. ಇದೀಗ ಗುಜರಾತ್‌ನ ಬರ್ದಾ ಡುಂಗರ್‌ನಲ್ಲಿ ಬಿಪೋರ್​ಜಾಯ್ ಚಂಡಮಾರುತಕ್ಕೆ ತುತ್ತಾಗಿದ್ದ ಮಗು ಮತ್ತು ತಾಯಿಯನ್ನು ಇಂದು ರಾಜ್ಯ ಪೊಲೀಸರು ಸುರಕ್ಷಿತವಾಗಿ ಸ್ಥಳಾಂತರಿಸಿದ್ದಾರೆ.

ಗುಜರಾತ್‌ನ ಅರಣ್ಯ ಮತ್ತು ಪರಿಸರ ಸಚಿವ ಮುಲು ಅಯರ್ ಬೇರಾ ಅವರು ಸ್ಥಳೀಯ ಸುದ್ದಿ ವಾಹಿನಿಯೊಂದರಿಂದ ಈ ಬಗ್ಗೆ ವೀಡಿಯೊವನ್ನು ಟ್ವೀಟ್ ಮಾಡಿದ್ದಾರೆ, ಮಹಿಳಾ ಪೊಲೀಸ್ ಸಿಬ್ಬಂದಿ ತನ್ನ ತೋಳುಗಳಲ್ಲಿ ನವಜಾತ ಶಿಶುವನ್ನು ಹೊತ್ತುಕೊಂಡು ಹೋಗುತ್ತಿರುವಾಗ ತಾಯಿ ಮತ್ತು ಅನೇಕ ಮಹಿಳೆಯರು ಸುರಕ್ಷಿತ ಪ್ರದೇಶಗಳಿಗೆ ಹೋಗುತ್ತಿರುವುದನ್ನು ಕಾಣಬಹುದು.

ಭನ್ವಾಡ್ ಆಡಳಿತವು ಸೇವೆಯ ಮೂಲಕ ಮಗು ಮತ್ತು ತಾಯಿಗೆ ಭದ್ರತೆಯನ್ನು ನೀಡಲು ಪ್ರಮುಖ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಮುಲು ಅಯರ್ ಬೇರಾ ಅವರು ವೀಡಿಯೊದೊಂದಿಗೆ ಟ್ವೀಟ್ ಮಾಡಿದ್ದಾರೆ. ನಿಮ್ಮ ಜತೆಗೆ ಗುಜರಾತ್ ಪೋಲೀಸರು ಜೊತೆಗಿದ್ದರೆ, ನೀವು ಸಂಪೂರ್ಣವಾಗಿ ಸುರಕ್ಷಿತ ಕೈಯಲ್ಲಿರುತ್ತೀರಿ ಎಂದು ವೀಡಿಯೊವನ್ನು ಮರುಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Cyclone Biparjoy: ಗುಜರಾತ್​ನಲ್ಲಿ ಬಿಪೋರ್​ಜಾಯ್ ಚಂಡಮಾರುತದ ಅಬ್ಬರಕ್ಕೆ ಇಬ್ಬರು ಬಲಿ

ಗುರುವಾರ ಗುಜರಾತ್‌ನಲ್ಲಿ ಬಿಪೋರ್​ಜಾಯ್ ಚಂಡಮಾರುತ ಅಪ್ಪಳಿಸಿದ್ದರಿಂದ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು 22 ಮಂದಿ ಗಾಯಗೊಂಡಿದ್ದಾರೆ, ಜತೆಗೆ ವಿದ್ಯುತ್ ಕಂಬಗಳು ಮತ್ತು ಮರಗಳು ನೆಲಕ್ಕುರುಳಿವೆ. ಚಂಡಮಾರುತದಿಂದ ಇಂದು ಸಂಜೆ ರಾಜಸ್ಥಾನದಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಬಿಪರ್‌ಜೋಯ್ ಚಂಡಮಾರುತ ತುಂಬಾ ನಿಧಾನವಾಗಿ ಚಲಿಸುತ್ತಿದೆ, ಇದು ಅತ್ಯಂತ ಅತಿ ಉದ್ದವಾದ ಚಂಡಮಾರುತವಾಗಿ ಮಾರ್ಪಟ್ಟಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:41 am, Fri, 16 June 23

ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಮಾಜಿ ಪ್ರಧಾನಿಯ ಮಗನಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡ್ತೀನಾ? ಕುಮಾರಸ್ವಾಮಿ
ಮಾಜಿ ಪ್ರಧಾನಿಯ ಮಗನಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡ್ತೀನಾ? ಕುಮಾರಸ್ವಾಮಿ