AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone Biparjoy; 4 ದಿನದ ಮಗುವನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿದ ಮಹಿಳಾ ಪೊಲೀಸ್

ಗುಜರಾತ್‌ನ ಬರ್ದಾ ಡುಂಗರ್‌ನಲ್ಲಿ ಬಿಪರ್‌ಜೋಯ್ ಚಂಡಮಾರುತಕ್ಕೆ ತುತ್ತಾಗಿದ್ದ ಮಗು ಮತ್ತು ತಾಯಿಯನ್ನು ಇಂದು ರಾಜ್ಯ ಪೊಲೀಸರು ಸುರಕ್ಷಿತವಾಗಿ ಸ್ಥಳಾಂತರಿಸಿದ್ದಾರೆ.

Cyclone Biparjoy; 4 ದಿನದ ಮಗುವನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿದ ಮಹಿಳಾ ಪೊಲೀಸ್
4 ದಿನದ ಮಗುವನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿದ ಮಹಿಳಾ ಪೊಲೀಸ್
TV9 Web
| Edited By: |

Updated on:Jun 16, 2023 | 10:46 AM

Share

ದೆಹಲಿ: ಗುಜರಾತಿಗೆ ಜೂ.15ರಂದು ಬಿಪೋರ್​ಜಾಯ್ ಚಂಡಮಾರುತ  (Cyclone Biparjoy) ಅಪ್ಪಳಿಸಿದ್ದು, ಇದೀಗ ಭಾರೀ ಪ್ರಮಾಣದ ಹಾನಿಗಳಿಗೆ ಕಾರಣವಾಗಿದೆ. ನಾಲ್ಕು ದಿನಗಳಿಂದ ಈ ಚಂಡಮಾರುತ ಅನೇಕ ರೀತಿಯ ಸಮಸ್ಯೆಗಳಿಗೆ ಕಾರಣವಾಗಿದೆ. ಇದೀಗ ಗುಜರಾತ್‌ನ ಬರ್ದಾ ಡುಂಗರ್‌ನಲ್ಲಿ ಬಿಪೋರ್​ಜಾಯ್ ಚಂಡಮಾರುತಕ್ಕೆ ತುತ್ತಾಗಿದ್ದ ಮಗು ಮತ್ತು ತಾಯಿಯನ್ನು ಇಂದು ರಾಜ್ಯ ಪೊಲೀಸರು ಸುರಕ್ಷಿತವಾಗಿ ಸ್ಥಳಾಂತರಿಸಿದ್ದಾರೆ.

ಗುಜರಾತ್‌ನ ಅರಣ್ಯ ಮತ್ತು ಪರಿಸರ ಸಚಿವ ಮುಲು ಅಯರ್ ಬೇರಾ ಅವರು ಸ್ಥಳೀಯ ಸುದ್ದಿ ವಾಹಿನಿಯೊಂದರಿಂದ ಈ ಬಗ್ಗೆ ವೀಡಿಯೊವನ್ನು ಟ್ವೀಟ್ ಮಾಡಿದ್ದಾರೆ, ಮಹಿಳಾ ಪೊಲೀಸ್ ಸಿಬ್ಬಂದಿ ತನ್ನ ತೋಳುಗಳಲ್ಲಿ ನವಜಾತ ಶಿಶುವನ್ನು ಹೊತ್ತುಕೊಂಡು ಹೋಗುತ್ತಿರುವಾಗ ತಾಯಿ ಮತ್ತು ಅನೇಕ ಮಹಿಳೆಯರು ಸುರಕ್ಷಿತ ಪ್ರದೇಶಗಳಿಗೆ ಹೋಗುತ್ತಿರುವುದನ್ನು ಕಾಣಬಹುದು.

ಭನ್ವಾಡ್ ಆಡಳಿತವು ಸೇವೆಯ ಮೂಲಕ ಮಗು ಮತ್ತು ತಾಯಿಗೆ ಭದ್ರತೆಯನ್ನು ನೀಡಲು ಪ್ರಮುಖ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಮುಲು ಅಯರ್ ಬೇರಾ ಅವರು ವೀಡಿಯೊದೊಂದಿಗೆ ಟ್ವೀಟ್ ಮಾಡಿದ್ದಾರೆ. ನಿಮ್ಮ ಜತೆಗೆ ಗುಜರಾತ್ ಪೋಲೀಸರು ಜೊತೆಗಿದ್ದರೆ, ನೀವು ಸಂಪೂರ್ಣವಾಗಿ ಸುರಕ್ಷಿತ ಕೈಯಲ್ಲಿರುತ್ತೀರಿ ಎಂದು ವೀಡಿಯೊವನ್ನು ಮರುಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Cyclone Biparjoy: ಗುಜರಾತ್​ನಲ್ಲಿ ಬಿಪೋರ್​ಜಾಯ್ ಚಂಡಮಾರುತದ ಅಬ್ಬರಕ್ಕೆ ಇಬ್ಬರು ಬಲಿ

ಗುರುವಾರ ಗುಜರಾತ್‌ನಲ್ಲಿ ಬಿಪೋರ್​ಜಾಯ್ ಚಂಡಮಾರುತ ಅಪ್ಪಳಿಸಿದ್ದರಿಂದ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು 22 ಮಂದಿ ಗಾಯಗೊಂಡಿದ್ದಾರೆ, ಜತೆಗೆ ವಿದ್ಯುತ್ ಕಂಬಗಳು ಮತ್ತು ಮರಗಳು ನೆಲಕ್ಕುರುಳಿವೆ. ಚಂಡಮಾರುತದಿಂದ ಇಂದು ಸಂಜೆ ರಾಜಸ್ಥಾನದಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಬಿಪರ್‌ಜೋಯ್ ಚಂಡಮಾರುತ ತುಂಬಾ ನಿಧಾನವಾಗಿ ಚಲಿಸುತ್ತಿದೆ, ಇದು ಅತ್ಯಂತ ಅತಿ ಉದ್ದವಾದ ಚಂಡಮಾರುತವಾಗಿ ಮಾರ್ಪಟ್ಟಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:41 am, Fri, 16 June 23

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ