AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone Biporjoy: ​​ಚಂಡಮಾರುತ ಆರ್ಭಟ; ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಸಾಧ್ಯತೆ

ಅರಬ್ಬಿ ಸಮುದ್ರದಲ್ಲಿ ಬಿಪೊರ್​ಜೊಯ್​​ ಚಂಡಮಾರುತದ ಆರ್ಭಟ ತೀವ್ರ ಸ್ವರೂಪ ಪಡೆದ ಹಿನ್ನೆಲೆ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗು ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Cyclone Biporjoy:  ​​ಚಂಡಮಾರುತ ಆರ್ಭಟ; ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಸಾಧ್ಯತೆ
ಮಳೆ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Jun 09, 2023 | 6:58 AM

Share

ನವದೆಹಲಿ: ಅರಬ್ಬಿ ಸಮುದ್ರದಲ್ಲಿ (Arabian Sea) ಬಿಪೊರ್​ಜೊಯ್​​ ಚಂಡಮಾರುತದ (Biporjoy Cyclone) ಆರ್ಭಟ ತೀವ್ರ ಸ್ವರೂಪ ಪಡೆದ ಹಿನ್ನೆಲೆ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗು (Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. ಮುಂದಿನ 48 ಗಂಟೆಗಳಲ್ಲಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದೆ. ಈ ಹಿನ್ನೆಲೆ ಮುಂದಿನ 3-4 ದಿನಗಳಲ್ಲಿ ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮಳೆಯಾಗುವ ಸಂಭವ ಇದೆ. ಕರ್ನಾಟಕದ ಕರಾವಳಿ, ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾಗೇ ಗೋವಾ, ಕೇರಳ, ಲಕ್ಷ ದ್ವೀಪ, ತಮಿಳುನಾಡು, ಆಂಧ್ರಪ್ರದೇಶ, ರಾಜಸ್ಥಾನ, ಈಶಾನ್ಯ ರಾಜ್ಯಗಳಾದ ಅಸ್ಸಾಂ, ಮಿಜೋರಾಂ, ಮಣಿಪುರ, ಅರುಣಾಚಲಪ್ರದೇಶ, ಮೇಘಾಲಯದಲ್ಲೂ ಮಳೆಯಾಗು ಸಾಧ್ಯತೆ ಇದ್ದು ಕಟ್ಟೆಚ್ಚರ ವಹಿಸುವಂತೆ ರಾಜ್ಯಗಳಿಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆಯು ಅರಬ್ಬಿಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಚಂಡಮಾರುತ ಸೃಷ್ಟಿಯಾಗಿ ರಾಜ್ಯದ ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಬಿಪೊರ್ ಜಾಯ್ ಚಂಡಮಾರುತ ಗಂಟೆಗೆ ಎರಡು ಕಿಲೋಮೀಟರ್ ವೇಗದಲ್ಲಿ ಚಲಿಸುತ್ತಿದ್ದು ಇದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ. ಕರಾವಳಿ ಬಿಸಿಲ ಧಗೆಗೆ ನಲುಗಿ ಹೋಗಿದ್ದು, ನೀರಿಗಾಗಿ ಜನರು ತತ್ತರಿಸುತ್ತಿದ್ದಾರೆ. ಎಲ್ಲೆಡೆ ನೀರಿಗಾಗಿ ಹಾಹಾಕಾರ ಕೇಳಿ ಬರುತ್ತಿದೆ. ಈ ನಡುವೆ ನಿನ್ನೆ (ಜೂ.09) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದು, ಕರಾವಳಿ ಜನರಲ್ಲಿ ಸಂತಸ ಮೂಡಿಸಿದೆ.

ಇದನ್ನೂ ಓದಿ: Monsoon 2023: ತೀವ್ರಗೊಂಡ ಬಿಪರ್​ಜಾಯ್​ ಚಂಡಮಾರುತ, ಜೂನ್​ 9ಕ್ಕೆ ಕೇರಳಕ್ಕೆ ಮುಂಗಾರು ಮಾರುತ ಪ್ರವೇಶ

ಮುಂದಿನ ಮೂರು ದಿನಗಳಲ್ಲಿ ಚಂಡಮಾರುತವು ಉತ್ತರ-ವಾಯುವ್ಯ ದಿಕ್ಕಿನಲ್ಲಿ ಚಲಿಸಲಿದೆ ಎಂದು IMD ಹೇಳಿದೆ. ಮುಂದಿನ 48 ಗಂಟೆಗಳಲ್ಲಿ ಕೇರಳಕ್ಕೆ ಮಾನ್ಸೂನ್ ಆಗಮಿಸುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ. ನೈಸರ್ಗಿಕ ವಿಕೋಪಗಳ ಸಾಧ್ಯತೆಯನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದೆ ಎಂದು ಗುಜರಾತ್ ಸರ್ಕಾರ ಹೇಳಿದೆ. ಜೂನ್ 14 ರವರೆಗೆ ಅರಬ್ಬಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಉತ್ತರ

ಹಿಂದೂ ಮಹಾಸಾಗರದಲ್ಲಿ ಮೂರು ವಾರಗಳಲ್ಲಿ ಇದು ಎರಡನೇ ಚಂಡಮಾರುತವಾಗಿದೆ. ಬಂಗಾಳಕೊಲ್ಲಿಯಲ್ಲಿ ರೂಪುಗೊಂಡ ಮೋಚಾ ಚಂಡಮಾರುತವು ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್‌ಗೆ ನುಗ್ಗಿ ಭಾರಿ ವಿನಾಶಕ್ಕೆ ಕಾರಣವಾಗಿತ್ತು. 2021 ರಲ್ಲಿ ಮಾನ್ಸೂನ್ ಆರಂಭದ ಸಮಯದಲ್ಲಿ ಯಾಸ್ ಚಂಡಮಾರುತವು ಕೂಡ ಇದೇ ರೀತಿ ರೂಪುಗೊಂಡಿತ್ತು.

Published On - 6:57 am, Fri, 9 June 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ