AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Biporjoy Cyclone: ಗುಜರಾತ್​​​​ನತ್ತ ಬಿಪರ್​ಜಾಯ್​ ಚಂಡಮಾರುತ; ಹೈಅಲರ್ಟ್​ ಘೋಷಣೆ

ಅರಬ್ಬಿ ಸಮುದ್ರದಲ್ಲಿ ಎದ್ದಿರುವ ಬಿಪ‌ಜಾಯ್ ಚಂಡಮಾರುತದ ಪಥ ಬದಲಾಗಿದ್ದು, ಗುಜರಾತ್‌ನ ಸೌರಾಷ್ಟ್ರ-ಕಛ ವಲಯಕ್ಕೆ ಜೂನ್ 15 ರಂದು ಅಪ್ಪಳಿಸುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

Biporjoy Cyclone: ಗುಜರಾತ್​​​​ನತ್ತ ಬಿಪರ್​ಜಾಯ್​ ಚಂಡಮಾರುತ; ಹೈಅಲರ್ಟ್​ ಘೋಷಣೆ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Jun 13, 2023 | 7:18 AM

Share

ಅಹಮದಾಬಾದ್​:ಅರಬ್ಬಿ ಸಮುದ್ರದಲ್ಲಿ (Arabian Sea) ಎದ್ದಿರುವ ಬಿಪರ್​ಜಾಯ್​ ಚಂಡಮಾರುತದ (Bipajoy Cyclone) ಪಥ ಬದಲಾಗಿದ್ದು, ಗುಜರಾತ್‌ನ (Gujurat) ಸೌರಾಷ್ಟ್ರ-ಕಛ ವಲಯಕ್ಕೆ ಜೂನ್ 15 ರಂದು ಅಪ್ಪಳಿಸುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಈ ಹಿನ್ನೆಲೆ ಗುಜರಾತ್​​​​ನಲ್ಲಿ ಹೈಅಲರ್ಟ್​ ಘೋಷಣೆ ಮಾಡಲಾಗಿದೆ. ಬಿಪರ್​ಜಾಯ್​ ಚಂಡಮಾರುತ 150 ಕಿ.ಮೀ. ವೇಗದಲ್ಲಿ ಚಲಿಸುತ್ತಿದೆ. ಈ ಹಿನ್ನೆಲೆಯಲ್ಲಿ ಅಪಾಯವೆಂದು ಗುರುತಿಸಲಾದ ಕಡಲ ತೀರದ ಪ್ರದೇಶದಿಂದ 7,500 ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ.

ಸೌರಾಷ್ಟ್ರ-ಕಳ್ ಕರಾವಳಿಗಳ ಮಾಂಡವಿ-ಜಖಾವು ಬಂದರು ಸಮೀಪ ಚಂಡಮಾರುತ ಅಪ್ಪಳಿಸಲಿರುವ ಹಿನ್ನೆಲೆ ಜೂನ್ 14ರಂದಿಲೇ ರಾಜ್ಯದ ಎಲ್ಲ ಜಿಲ್ಲೆಗಳಿಗೆ ರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಳ್, ದೇವಭೂಮಿ ದ್ವಾರಕಾ, ಪೋರಬಂದರ್, ಜಾಮ್‌ನಗರ್, ರಾಜ್ ಕೋಟ್, ಜುನಾಗಢ ಮತ್ತು ಮೊರ್ಬಿ ಜಿಲ್ಲೆಗಳಲ್ಲಿ ಚಂಡಮಾರುತದ ಹಾವಳಿಗೆ ಒಳಗಾಗಲಿವೆ.

ಇಲ್ಲಿ ನಿಷೇಧಾಜ್ಞೆ ಜಾರಿಗೆ ಸೂಚಿಸಲಾಗಿದೆ. ಚಂಡಮಾರುತದ ಅಪಾ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಗುಜರಾತ್‌ನ ದಕ್ಷಿಣ ಹಾಗೂ ಉತ್ತರ ಕರಾವಳಿಗಳಲ್ಲಿ ಈಗಾಗಲೇ ಎಲ್ಲ ಮೀನುಗಾರಿಕೆ ಚಟುವಟಿಕೆಗಳನ್ನು ನಿಷೇಧಿಸಲಾಗಿದ್ದು, 21 ಸಾವಿರ ಬೋಟ್‌ಗಳು ಈಗಾಗಲೇ ಲಂಗರು ಹಾಕಿವೆ. ವಿಪರೀತ ವರ್ಷಧಾರೆಯಿಂದಾಗಿ ಕರಾವಳಿ ಮತ್ತು ತಗ್ಗು ಪ್ರದೇಶಗಳು ಜಲಾವೃತಗೊಳ್ಳುವ ಅಪಾಯವಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಮತ್ತು ವಿಪತ್ತು ನಿರ್ವಹಣಾ ಕಾರ್ಯಕ್ಕೆ 19 NDRF​ ಪಡೆಗಳನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: ಜೋರಾದ ಚಂಡಮಾರುತ ಅಬ್ಬರ: ಕಾರವಾರ ಕಡಲತೀರದಲ್ಲಿ ತೀವ್ರವಾದ ಕಡಲ್ಕೊರೆತ

ಈ ಚಂಡಮಾರುತದಿಂದ ಉದ್ಭವಿಸಬಹುದಾದ ಪರಿಸ್ಥಿತಿ ಹಾಗೂ ಅದನ್ನು ಎದುರಿಸಲು ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಉನ್ನತ ಮಟ್ಟದ ಸಭೆಯಲ್ಲಿ ಪರಿಶೀಲನೆ ನಡೆಸಿದರು. ರಕ್ಷಣಾ ತಂಡಗಳನ್ನು ಕೂಡಲೇ ಅಪಾಯದ ಸ್ಥಳಗಳಿಗೆ ರವಾನಿಸುವ ಕಾರ್ಯ ಆಗಬೇಕು. ಜನರು ಮತ್ತು ಜಾನುವಾರಗಳ ಶಾಂತರ ತ್ವರಿತವಾಗಿ ನಡೆಯಬೇಕು. ಕ್ಲೋನ್ ಹಾವಳಿ ತಡೆಯುವ ಕಾರ್ಯಾಚರಣೆಯ ಹೊಣೆಯನ್ನು ರಿಯ ಅಧಿಕಾರಿಗಳೇ ವಹಿಸಿಕೊಳ್ಳಬೇಕು. ತುರ್ತು ಸೇವೆಗಳಾದ ವಿದ್ಯುತ್, ದೂರವಾಣಿ, ಆರೋಗ್ಯ, ಡಿಯುವ ನೀರಿನ ವ್ಯವಸ್ಥೆಗೆ ಅಡಚಣೆ ಆಗಬಾರದು. ದಿನದ 24 ತಾಸು ಕಾರ್ಯನಿರ್ವಹಿಸುವ ನಿಯಂತ್ರಣ ಕೇಂದ್ರವನ್ನು ತೆರೆಯಬೇಕೆಂದು ಎಂದು ಸೂಚಿಸಿದರು.

ಸೌರಾಷ್ಟ್ರ ಹಾಗೂ ಕಛ ಮತ್ತು ಮಾಂಡವಿ (ಗುಜರಾತ್) ಹಾಗೂ ಕರಾಚಿ (ಪಾಕಿಸ್ತಾನ) ನಡುವಿನ ಪಾಕ್‌ ಕರಾವಳಿಯನ್ನು ಜೂನ್ 15ರ ಹೊತ್ತಿಗೆ ಹಾದು ಹೋಗಲಿದೆ. ಸರಾಸರಿ 125ರಿಂದ 135 ಕಿಮೀ ವೇಗದ ಸುಳಿಗಾಳಿ ಗಂಟೆಗೆ ಗರಿಷ್ಠ 150 ಕಿಮೀವರೆಗೂ ತಲುಪುವ ಸಾಧ್ಯತೆಯಿದೆ ಎಂದು ಐಎಂಡಿ ಮಾಹಿತಿ ನೀಡಿದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:17 am, Tue, 13 June 23

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ