AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone Gulab: ಗುಲಾಬ್​ ಚಂಡಮಾರುತದಿಂದ ಭೂಕುಸಿತದ ಅಪಾಯ; ಒಡಿಶಾ, ಆಂಧ್ರಪ್ರದೇಶದಲ್ಲಿ ರಕ್ಷಣಾ ಪಡೆಗಳು ಸಜ್ಜು, ರೈಲು ಸಂಚಾರ ರದ್ದು

ಓಡಿಶಾದ ದಕ್ಷಿಣ ಭಾಗದಲ್ಲಿರುವ ಒಟ್ಟು ಏಳು ಜಿಲ್ಲೆಗಳಿಗೆ ಗುಲಾಬ್​ ಚಂಡಮಾರುತದ ಪ್ರಭಾವ ಹೆಚ್ಚಾಗಿರಲಿದ್ದು, ಅಲ್ಲಿನ ಜನರನ್ನು ಸ್ಥಳಾಂತರ ಮಾಡುವ ಕಾರ್ಯವನ್ನು ಈಗಾಗಲೇ ಸರ್ಕಾರ ಶುರು ಮಾಡಿದೆ.

Cyclone Gulab: ಗುಲಾಬ್​ ಚಂಡಮಾರುತದಿಂದ ಭೂಕುಸಿತದ ಅಪಾಯ; ಒಡಿಶಾ, ಆಂಧ್ರಪ್ರದೇಶದಲ್ಲಿ ರಕ್ಷಣಾ ಪಡೆಗಳು ಸಜ್ಜು, ರೈಲು ಸಂಚಾರ ರದ್ದು
ಗುಲಾಬ್​ ಸೈಕ್ಲೋನ್​ (ಸಾಂಕೇತಿಕ ಚಿತ್ರ)
TV9 Web
| Edited By: |

Updated on: Sep 26, 2021 | 11:53 AM

Share

ದೆಹಲಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಎದ್ದಿರುವ ಗುಲಾಬ್​ ಚಂಡಮಾರುತ (Cyclone Gulab) ಇಂದು ಸಂಜೆ ಉತ್ತರ ಆಂಧ್ರಪ್ರದೇಶ ಮತ್ತು ಒಡಿಶಾ ರಾಜ್ಯಗಳ ಕರಾವಳಿ ಜಿಲ್ಲೆಗಳಲ್ಲಿ ಭೂಕುಸಿತ ಉಂಟು ಮಾಡುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದು ಸಂಜೆಯ ಹೊತ್ತಿಗೆ ಒಡಿಶಾದ ಗೋಪಾಲ್​ಪುರ ಮತ್ತು ಆಂಧ್ರಪ್ರದೇಶದ ಕಳಿಂಗಪಟ್ಟಣಂ ನಡುವೆ ಪ್ರತಿ ಗಂಟೆಗೆ 95 ಕಿಮೀ  ವೇಗದಲ್ಲಿ ಚಂಡಮಾರುತದ ವೇಗ ಇರಲಿದ್ದು, ಈ ಭಾಗದ ಜನರು ಎಚ್ಚರಿಕೆಯಿಂದ ಇರಬೇಕು ಎಂದೂ ಹೇಳಿದೆ. 

ಪ್ರಸ್ತುತ ಗುಲಾಬ್​ ಚಂಡಮಾರತ ಓಡಿಶಾದ ಗೋಪಾಲ್​ಪುರದಿಂದ ಪೂರ್ವ-ಆಗ್ನೇಯದಿಂದ 270 ಕಿಮೀ ದೂರದಲ್ಲಿ ಮತ್ತು ಆಂಧ್ರಪ್ರದೇಶದ ಕಳಿಂಗಪಟ್ಟಣಂನಿಂದ 330 ಕಿಮೀ ದೂರದಲ್ಲಿದೆ. ಚಂಡಮಾರುತದಿಂದ ಉಂಟಾಗಬಹುದಾದ ಹಾನಿ, ಅಪಾಯವನ್ನು ಎದುರಸಿಲು ಓಡಿಶಾದಲ್ಲಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯಾ ಪಡೆಯ (NDRF)13 ತಂಡಗಳು, ಆಂಧ್ರಪ್ರದೇಶದಲ್ಲಿ 5 ತಂಡಗಳು ಸಜ್ಜಾಗಿವೆ ಎಂದು ಎನ್​ಡಿಆರ್​ಎಫ್​​ನ ಡಿಜಿ ಸತ್ಯನಾರಾಯಣ ಪ್ರಧಾನ್​ ತಿಳಿಸಿದ್ದಾರೆ.

ರೈಲು ಸಂಚಾರ ರದ್ದು ಗುಲಾಬ್​ ಸೈಕ್ಲೋನ್​ನಿಂದ ಮಳೆ, ಭೂಕುಸಿತ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಉತ್ತರ ಆಂಧ್ರಪ್ರದೇಶ ಮತ್ತು ದಕ್ಷಿಣ ಒಡಿಶಾ ಕಡೆ ಸಂಚರಿಸುವ ಹಲವು ರೈಲುಗಳನ್ನು ರದ್ದುಗೊಳಿಸಲಾಗಿದೆ. ಗುಲಾಬ್​ ಚಂಡಮಾರುತದ ಪ್ರಭಾವ ಉಂಟಾಗಬಹುದಾದ ಸ್ಥಳಗಳನ್ನು ಸಂಪರ್ಕಿಸುವ ಹಲವು ರೈಲುಗಳ ಪ್ರಯಾಣದ ಸಮಯವನ್ನು ಮುಂದೂಡಲಾಗಿದೆ.

ಇನ್ನು ಓಡಿಶಾದ ದಕ್ಷಿಣ ಭಾಗದಲ್ಲಿರುವ ಒಟ್ಟು ಏಳು ಜಿಲ್ಲೆಗಳಿಗೆ ಗುಲಾಬ್​ ಚಂಡಮಾರುತದ ಪ್ರಭಾವ ಹೆಚ್ಚಾಗಿರಲಿದ್ದು, ಅಲ್ಲಿನ ಜನರನ್ನು ಸ್ಥಳಾಂತರ ಮಾಡುವ ಕಾರ್ಯವನ್ನು ಈಗಾಗಲೇ ಸರ್ಕಾರ ಶುರು ಮಾಡಿದೆ. ಅದರಲ್ಲೂ ಗಂಜಮ್​ ಮತ್ತು ಗಜಪತಿ ಜಿಲ್ಲೆಗಳಲ್ಲಿ ಹೆಚ್ಚಿನ ರಕ್ಷಣಾ ಕ್ರಮ ಹಮ್ಮಿಕೊಳ್ಳಲಾಗಿದೆ. ಈ ಎರಡು ಜಿಲ್ಲೆಗಳಲ್ಲಿ ಅಧಿಕ ಪ್ರಮಾಣದ ಅಪಾಯ ಉಂಟಾಗುವ ಸಾಧ್ಯತೆ ಇರಲಿದೆ ಎಂದು ಹೇಳಲಾಗಿದೆ.  ಗಂಜಮ್​ ಒಂದೇ ಜಿಲ್ಲೆಯಲ್ಲಿ 15 ರಕ್ಷಣಾ ಪಡೆಗಳು ಇವೆ. ಕಳೆದ ನಾಲ್ಕು ತಿಂಗಳ ಹಿಂದೆ ಓಡಿಶಾಕ್ಕೆ ಯಾಸ್ ಚಂಡಮಾರುತ ಅಪ್ಪಳಿಸಿತ್ತು. ಅದಾದ ಬಳಿಕ ಈಗ ಗುಲಾಬ್​ ಆಗಮಿಸಿದೆ. 2018ರಲ್ಲಿ ಒಡಿಶಾಕ್ಕೆ ಅಪ್ಪಳಿಸಿದ್ದ ತಿತ್ಲಿಯಷ್ಟೇ ತೀವ್ರವಾಗಿ ಈ ಗುಲಾಬ್​ ಚಂಡಮಾರುತ ಇರಲಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: Mann ki Baat: ವಿಶ್ವ ನದಿಗಳ ದಿನವನ್ನು ನೆನಪಿಸಿದ ಪ್ರಧಾನಿ ಮೋದಿ; ವರ್ಷಕ್ಕೊಮ್ಮೆಯಾದರೂ ನದಿಗಳ ಉತ್ಸವ ನಡೆಸಲು ಮನ್​ ಕೀ ಬಾತ್​​ನಲ್ಲಿ ಕರೆ

Viral Video: ರಸ್ತೆ ಗುಂಡಿಗಳ ಸಮಸ್ಯೆಯನ್ನು ಹೀಗೂ ಹೇಳಬಹುದಾ?; ಮಜವಾದ ಈ ವಿಡಿಯೊ ನೋಡಿ

ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ