Sign In

By signing in or creating an account, you agree with Associated Broadcasting Company's Terms & Conditions and Privacy Policy.

Michaung Cyclone: ಮಿಚಾಂಗ್ ಚಂಡಮಾರುತ, ಇಂದಿನಿಂದ ತಮಿಳುನಾಡು, ಆಂಧ್ರದಲ್ಲಿ ಭಾರಿ ಮಳೆ

ಮಿಚಾಂಗ್(Michaung) ಚಂಡಮಾರುತ(Cyclone) ಬಂಗಾಳಕೊಲ್ಲಿಯಿಂದ ಆಂಧ್ರಪ್ರದೇಶ ಹಾಗೂ ತಮಿಳುನಾಡು ಕಡೆ ಬೀಸುತ್ತಿತ್ತು. ಮುಂದಿನ ಎರಡು ದಿನಗಳ ಕಾಲ ಪಾಂಡಿಚೇರಿ, ಕಾರೈಕಲ್ ಮತ್ತು ಯಾನಂನಲ್ಲಿ ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ಸರ್ಕಾರವು ಸೋಮವಾರ ಸರ್ಕಾರಿ ರಜೆ ಘೋಷಿಸಿದೆ. ಮುಂಬರುವ ಚಂಡಮಾರುತದ ದೃಷ್ಟಿಯಿಂದ ಅನಿವಾರ್ಯ ಸಂದರ್ಭಗಳಲ್ಲಿ ಮನೆಯಿಂದಲೇ ಕೆಲಸ ಮಾಡಲು ಅಥವಾ ಅಗತ್ಯ ಸಿಬ್ಬಂದಿಯೊಂದಿಗೆ ಮಾತ್ರ ಕಾರ್ಯನಿರ್ವಹಿಸಲು ತಮ್ಮ ಉದ್ಯೋಗಿಗಳಿಗೆ ಸೂಚನೆ ನೀಡುವಂತೆ ಖಾಸಗಿ ಕಂಪನಿಗಳು ಮತ್ತು ಕಚೇರಿಗಳನ್ನು ಕೇಳಲಾಗಿದೆ.

Michaung Cyclone: ಮಿಚಾಂಗ್ ಚಂಡಮಾರುತ, ಇಂದಿನಿಂದ ತಮಿಳುನಾಡು, ಆಂಧ್ರದಲ್ಲಿ ಭಾರಿ ಮಳೆ
ಮಳೆImage Credit source: NDTV
Follow us
ನಯನಾ ರಾಜೀವ್
|

Updated on: Dec 04, 2023 | 10:14 AM

ಮಿಚಾಂಗ್(Michaung) ಚಂಡಮಾರುತ(Cyclone) ಬಂಗಾಳಕೊಲ್ಲಿಯಿಂದ ಆಂಧ್ರಪ್ರದೇಶ ಹಾಗೂ ತಮಿಳುನಾಡು ಕಡೆ ಬೀಸುತ್ತಿತ್ತು. ಮುಂದಿನ ಎರಡು ದಿನಗಳ ಕಾಲ ಪಾಂಡಿಚೇರಿ, ಕಾರೈಕಲ್ ಮತ್ತು ಯಾನಂನಲ್ಲಿ ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ಸರ್ಕಾರವು ಸೋಮವಾರ ಸರ್ಕಾರಿ ರಜೆ ಘೋಷಿಸಿದೆ. ಮುಂಬರುವ ಚಂಡಮಾರುತದ ದೃಷ್ಟಿಯಿಂದ ಅನಿವಾರ್ಯ ಸಂದರ್ಭಗಳಲ್ಲಿ ಮನೆಯಿಂದಲೇ ಕೆಲಸ ಮಾಡಲು ಅಥವಾ ಅಗತ್ಯ ಸಿಬ್ಬಂದಿಯೊಂದಿಗೆ ಮಾತ್ರ ಕಾರ್ಯನಿರ್ವಹಿಸಲು ತಮ್ಮ ಉದ್ಯೋಗಿಗಳಿಗೆ ಸೂಚನೆ ನೀಡುವಂತೆ ಖಾಸಗಿ ಕಂಪನಿಗಳು ಮತ್ತು ಕಚೇರಿಗಳನ್ನು ಕೇಳಲಾಗಿದೆ.

ಮಿಚಾಂಗ್ ಚಂಡಮಾರುತದ ಪ್ರಭಾವದಿಂದ ಡಿಸೆಂಬರ್ 5ರಂದು ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಲಿದೆ ಎನ್ನಲಾಗಿದೆ. ಚೆಂಗಲ್‌ಪೇಟ್, ಕಾಂಚೀಪುರಂ ಮತ್ತು ತಿರುವಳ್ಳೂರು ಸೇರಿದಂತೆ ತಮಿಳುನಾಡಿನ ಇತರ ಸ್ಥಳಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಭಾರೀ ಮಳೆಯಿಂದಾಗಿ ಚೆನ್ನೈನಾದ್ಯಂತ ಹಲವಾರು ಮೆಟ್ರೋ ನಿಲ್ದಾಣಗಳ ಬಳಿ ಜಲಾವೃತವಾಗಿದೆ.

ಸೇಂಟ್ ಥಾಮಸ್ ಮೆಟ್ರೋ ನಿಲ್ದಾಣದಲ್ಲಿ 4  ಅಡಿಗಳಷ್ಟು ನೀರು ಸಂಗ್ರಹಗೊಂಡಿದ್ದು, ನಿಲ್ದಾಣದ ಪ್ರವೇಶವನ್ನು ಕಡಿತಗೊಳಿಸಲಾಗಿದೆ. ಆಲಂದೂರಿನಲ್ಲಿ ಮೆಟ್ರೋ ರೈಲು ಹತ್ತಲು ಪ್ರಯಾಣಿಕರಿಗೆ ಸೂಚಿಸಲಾಗಿದೆ.

ಹಲವಾರು ರಸ್ತೆಗಳು ಜಲಾವೃತಗೊಂಡಿರುವುದರಿಂದ ಜನರು ಮನೆಯೊಳಗೆ ಇರಲು ಮತ್ತು ಅಗತ್ಯವಿಲ್ಲದಿದ್ದರೆ ಹೊರಗೆ ಹೋಗದಂತೆ ಗ್ರೇಟರ್ ಚೆನ್ನೈ ಕಾರ್ಪೊರೇಷನ್ ಕೇಳಿದೆ.

ಮತ್ತಷ್ಟು ಓದಿ: ಮಿಚಾಂಗ್ ಚಂಡಮಾರುತ: ತಮಿಳುನಾಡು, ಆಂಧ್ರದ ಕರಾವಳಿಯಲ್ಲಿ ಮುಂದಿನ 3 ದಿನ ಭಾರಿ ಮಳೆ

ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿದ್ದ ಚಂಡಮಾರುತ, ಕಳೆದ ಆರು ಗಂಟೆಗಳಲ್ಲಿ 8 ಕಿ.ಮೀ ವೇಗದಲ್ಲಿ ಚಲಿಸಿದೆ. ದು ಪುದುಚೇರಿಯ ಪೂರ್ವ-ಈಶಾನ್ಯಕ್ಕೆ ಸುಮಾರು 230 ಕಿಲೋಮೀಟರ್, ಚೆನ್ನೈನ ಪೂರ್ವ-ಆಗ್ನೇಯಕ್ಕೆ 190 ಕಿಲೋಮೀಟರ್, ನೆಲ್ಲೂರಿನಿಂದ ಆಗ್ನೇಯಕ್ಕೆ 310 ಕಿಲೋಮೀಟರ್, ಬಾಪಟ್ಲಾದಿಂದ 410 ಕಿಲೋಮೀಟರ್ ಆಗ್ನೇಯ ಆಗ್ನೇಯ ಮತ್ತು ಮಚಲಿಪಟ್ನಂನ ದಕ್ಷಿಣ-ಆಗ್ನೇಯಕ್ಕೆ 430 ಕಿಲೋಮೀಟರ್ ಕೇಂದ್ರೀಕೃತವಾಗಿದೆ.

ಈ ಚಂಡಮಾರುತದಿಂದಾಗಿ, ದಕ್ಷಿಣ ಒಡಿಶಾದ ಬಹುತೇಕ ಭಾಗಗಳಲ್ಲಿ ಮತ್ತು ರಾಜ್ಯದ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರೈಲ್ವೆಯು ಒಟ್ಟು 118 ರೈಲುಗಳನ್ನು ರದ್ದುಗೊಳಿಸಿದೆ. ಚಂಡಮಾರುತದ ಬಗ್ಗೆ ಸಾರ್ವಜನಿಕರು ಮತ್ತು ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದ್ದು, ಕೃಷ್ಣಪಟ್ಟಣಂ ಸೇರಿದಂತೆ ಮೀನುಗಾರಿಕಾ ಬಂದರುಗಳಲ್ಲಿ 1,000 ಕ್ಕೂ ಹೆಚ್ಚು ದೋಣಿಗಳು ಲಂಗರು ಹಾಕಿವೆ.

ತಮಿಳುನಾಡು ವಿಪತ್ತು ನಿರ್ವಹಣಾ ಪಡೆಯ 14 ತಂಡಗಳು 350 ಸಿಬ್ಬಂದಿಗಳು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) 225 ಸಿಬ್ಬಂದಿಯ ಒಂಬತ್ತು ತಂಡಗಳು ಮೈಲಾಡುತುರೈ, ನಾಗಪಟ್ಟಣಂ, ತಿರುವಳ್ಳೂರ್, ಕಡಲೂರು, ವಿಲ್ಲುಪುರಂ, ಕಾಂಚೀಪುರಂ, ಚೆನ್ನೈ, ಚೆಂಗಲ್‌ಪೇಟ್‌ನ ಕರಾವಳಿ ಪ್ರದೇಶಗಳಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ನಿಯೋಜಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ