AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone Mocha: ಇಂದು ಗಂಭೀರ ಸ್ವರೂಪ ಪಡೆಯಲಿದೆ ಮೋಕಾ ಚಂಡಮಾರುತ, ಎಲ್ಲೆಲ್ಲಿ ಭಾರಿ ಮಳೆ?

ಭಾರತೀಯ ಹವಾಮಾನ ಇಲಾಖೆ ಮೋಕಾ ಚಂಡಮಾರುತದ ಬಗ್ಗೆ ಎಚ್ಚರಿಕೆ ನೀಡಿದೆ, ಮೋಕಾ ಚಂಡಮಾರುತ ಇಂದು ಗಂಭೀರ ಸ್ವರೂಪ ಪಡೆಯಲಿದೆ ಎನ್ನಲಾಗಿದೆ. ಅದು ಬಾಂಗ್ಲಾದೇಶ-ಮ್ಯಾನ್ಮಾರ್ ಕರಾವಳಿಯನ್ನು ತಲುಪುತ್ತಿದೆ.

Cyclone Mocha: ಇಂದು ಗಂಭೀರ ಸ್ವರೂಪ ಪಡೆಯಲಿದೆ ಮೋಕಾ ಚಂಡಮಾರುತ, ಎಲ್ಲೆಲ್ಲಿ ಭಾರಿ ಮಳೆ?
ಚಂಡಮಾರುತImage Credit source: ABP Live
Follow us
ನಯನಾ ರಾಜೀವ್
|

Updated on: May 12, 2023 | 11:03 AM

ಭಾರತೀಯ ಹವಾಮಾನ ಇಲಾಖೆ(Indian Meteorological Department) ಮೋಕಾ(Mocha) ಚಂಡಮಾರುತದ ಬಗ್ಗೆ ಎಚ್ಚರಿಕೆ ನೀಡಿದೆ, ಮೋಕಾ ಚಂಡಮಾರುತ ಇಂದು ಗಂಭೀರ ಸ್ವರೂಪ ಪಡೆಯಲಿದೆ ಎನ್ನಲಾಗಿದೆ. ಅದು ಬಾಂಗ್ಲಾದೇಶ-ಮ್ಯಾನ್ಮಾರ್ ಕರಾವಳಿಯನ್ನು ತಲುಪುತ್ತಿದೆ. ಪೋರ್ಟ್ ಬ್ಲೇರ್‌ನಿಂದ 520 ಕಿಮೀ ದೂರದಲ್ಲಿದ್ದು ಮೇ 12 ರಂದು ಮಧ್ಯಾಹ್ನ 2.30 ಕ್ಕೆ ಎಸ್‌ಸಿಎಸ್ ಮೋಕಾ ಬಂಗಾಳಕೊಲ್ಲಿಯ ಮಧ್ಯಭಾಗವನ್ನು ತಲುಪಿದೆ ಎಂದು ಹವಾಮಾನ ಇಲಾಖೆಯಿಂದ ಟ್ವೀಟ್ ಮಾಡುವ ಮೂಲಕ ತಿಳಿಸಿದೆ. ಹವಾಮಾನ ವೈಪರೀತ್ಯದಿಂದಾಗಿ ತ್ರಿಪುರಾ ಮತ್ತು ಮಿಜೋರಾಂನಲ್ಲಿ ಶನಿವಾರ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ನಾಗಾಲ್ಯಾಂಡ್, ಮಣಿಪುರ, ಅಸ್ಸಾಂನಲ್ಲಿ ಭಾನುವಾರ ಮಳೆಯಾಗಬಹುದು. ರಾಷ್ಟ್ರೀಯ ಪರಿಹಾರ ಮತ್ತು ವಿಪತ್ತಿನ 8 ತಂಡಗಳನ್ನು ಇಲ್ಲಿ ನಿಯೋಜಿಸಲಾಗಿದೆ. 200 ರಕ್ಷಣಾ ಸಿಬ್ಬಂದಿಯನ್ನು ನೆಲದ ಮೇಲೆ ಜಾಗರೂಕರಾಗಿರಲು ಕೇಳಲಾಗಿದೆ. 100 ರಕ್ಷಕರು ಸನ್ನದ್ಧ ಸ್ಥಿತಿಯಲ್ಲಿದ್ದಾರೆ.

ಮತ್ತಷ್ಟು ಓದಿ:Cyclone Mocha: ಕರ್ನಾಟಕದಲ್ಲಿ ಮೋಕಾ ಚಂಡಮಾರುತ ಎಫೆಕ್ಟ್, ಇನ್ನೂ ಮೂರು ದಿನ ಭಾರೀ ಮಳೆ

ಭಾನುವಾರದವರೆಗೆ ಬಂಗಾಳಕೊಲ್ಲಿ, ಉತ್ತರ ಅಂಡಮಾನ್ ಸಮುದ್ರಕ್ಕೆ ತೆರಳದಂತೆ ಮೀನುಗಾರಿಗೆ ಎಚ್ಚರಿಕೆ ನೀಡಲಾಗಿದೆ, ಮಧ್ಯ ಬಂಗಾಳಕೊಲ್ಲಿ ಅಥವಾ ಉತ್ತರ ಅಂಡಮಾನ್ ಸಮುದ್ರದಲ್ಲಿರುವವರು ಕರಾವಳಿಗೆ ಮರಳುವಂತೆ ಸಲಹೆ ನೀಡಲಾಗಿದೆ.

ಜನರಿಗೆ ಬೀಚ್‌ನಿಂದ ದೂರ ಇರುವಂತೆ ಜನರಿಗೆ ಸೂಚಿಸಲಾಗಿದೆ. ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗಲಿದ್ದು, ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಕರಾವಳಿ ಪ್ರದೇಶದಲ್ಲಿ ಅಥವಾ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವ ಜನರನ್ನು ಅಗತ್ಯ ಬಂದರೆ ಸ್ಥಳಾಂತರಸಿಲಾಗುವುದು ಎಂದು ತಿಳಿಸಲಾಗಿದೆ.

ತುಂಬಾ ಗಾಳಿ ಬೀಸುತ್ತಿದ್ದರೆ ಮನೆಯಿಂದ ಹೊರಗೆ ಹೋಗಬೇಡಿ ಎಂದು ಸೂಚನೆ ನೀಡಲಾಗಿದೆ. ಮೋಕಾ ಚಂಡಮಾರುತವು ತೀವ್ರ ಚಂಡಮಾರುತವಾಗಿ ತೀವ್ರಗೊಳ್ಳುವ ಬಗ್ಗೆ ಎಚ್ಚರಿಕೆ ನೀಡಿದ ನಂತರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಪಶ್ಚಿಮ ಬಂಗಾಳದ ದಿಘಾದಲ್ಲಿ 8 ತಂಡಗಳು ಮತ್ತು 200 ರಕ್ಷಕರನ್ನು ನಿಯೋಜಿಸಿದೆ.

ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ