AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone Mocha: ಈ ವಾರ ಒಡಿಶಾಗೆ ಅಪ್ಪಳಿಸಲಿದೆ ವರ್ಷದ ಮೊದಲ ಸೈಕ್ಲೋನ್ ಮೋಚಾ, ಭೂ ಕುಸಿತ ಸಾಧ್ಯತೆ

Cyclone Mocha: ಈ ವರ್ಷದ ಮೊದಲ ಚಂಡಮಾರುತ (Cyclone) ಮೋಚಾ (Mocha) ಈ ಬಾರ ಒಡಿಶಾಗೆ (Odisha) ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.

Cyclone Mocha: ಈ ವಾರ ಒಡಿಶಾಗೆ ಅಪ್ಪಳಿಸಲಿದೆ ವರ್ಷದ ಮೊದಲ ಸೈಕ್ಲೋನ್ ಮೋಚಾ, ಭೂ ಕುಸಿತ ಸಾಧ್ಯತೆ
ಚಂಡಮಾರುತImage Credit source: Hindustan Times
ನಯನಾ ರಾಜೀವ್
|

Updated on: May 08, 2023 | 12:42 PM

Share

ಈ ವರ್ಷದ ಮೊದಲ ಚಂಡಮಾರುತ (Cyclone) ಮೋಚಾ (Mocha) ಈ ಬಾರ ಒಡಿಶಾಗೆ (Odisha) ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಚುನಾವಣೆಯ ಕಾವಿನಲ್ಲಿರುವ ಕರ್ನಾಟಕಕ್ಕೂ ಮೋಚಾ ಚಂಡಮಾರುತದ ಪ್ರಭಾವ ಇರಲಿದೆ ಎನ್ನಲಾಗಿದೆ. ಐಎಂಡಿ ಮುನ್ಸೂಚನೆ ಪ್ರಕಾರ ಮೇ 8ರ ವೇಳೆಗೆ ಆಗ್ನೇಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆಯಿದೆ.

ವಾಯುಭಾರ ಕುಸಿತದ ಹಿನ್ನೆಲೆ ಚಂಡಮಾರುತ ಉಂಟಾಗಲಿದ್ದು, ಬಳಿಕ ಇದು ತೀವ್ರಗೊಂಡು ಮಧ್ಯ ಬಂಗಾಳಕೊಲ್ಲಿಯ ಕಡೆಗೆ ಸುಮಾರು ಉತ್ತರಕ್ಕೆ ಚಲಿಸುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಇದೀಗ ಸಂಭವನೀಯ ಮೋಚಾ ಚಂಡಮಾರುತದ ಹಿನ್ನೆಲೆ ಐಎಂಡಿಯಿಂದ ರಾಜ್ಯಗಳಿಗೆ ಹೈ ಅಲರ್ಟ್ ನೀಡಲಾಗಿದೆ.

ಕರಾವಳಿ ತೀರಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಇಲಾಖೆ ಸೂಚನೆ ನೀಡಿದೆ. ಚಂಡಮಾರುತದ ಬಗ್ಗೆ ಭಯ ಬೇಡ, ಆದರೆ ಯಾವುದೇ ಘಟನೆಗಳನ್ನು ಎದುರಿಸಲು ಸಿದ್ಧರಾಗಿರಿ ಎಂದು ಐಎಂಡಿ ಮಹಾನಿರ್ದೇಶಕ ಮೃತ್ಯುಂಜಯ್ ಮೋಹಾಪಾತ್ರಾ ತಿಳಿಸಿದ್ದಾರೆ. ಚಂಡಮಾರುತದ ಚಲನವಲನದ ಮೇಲೆ ಹವಾಮಾನ ಇಲಾಖೆ ನಿರಂತರ ನಿಗಾ ಇಡುತ್ತಿದೆ.

ಮತ್ತಷ್ಟು ಓದಿ: Karnataka Rains: ಬೆಂಗಳೂರು, ಉಡುಪಿ, ರಾಯಚೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆ

ಮೇ 8 ರಿಂದ 12 ರವರೆಗೆ ನಾಲ್ಕು ದಿನಗಳ ಅವಧಿಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಬಳಿ ಪ್ರವಾಸೋದ್ಯಮ ಮತ್ತು ಕಡಲಾಚೆಯ ಚಟುವಟಿಕೆಗಳನ್ನು ನಿಲ್ಲಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ. ಚಂಡಮಾರುತದ ರಚನೆಯ ಪರಿಣಾಮವಾಗಿ, ಮೇ 8 ಮತ್ತು 12 ರ ನಡುವೆ ಭಾರೀ ಗಾಳಿ, ಮಿಂಚು ಮತ್ತು ಗುಡುಗು ಸಹಿತ ಭಾರೀ ಮಳೆಯಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಮೇ 8, 9 ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಆಗ್ನೇಯ ಬಂಗಾಳ ಕೊಲ್ಲಿ ಮತ್ತು ಹತ್ತಿರದ ಅಂಡಮಾನ್ ಸಮುದ್ರದಾದ್ಯಂತ ಗಂಟೆಗೆ 60 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ