Cyclone Montha: ಆಂಧ್ರದ ಕರಾವಳಿಗೆ ಅಪ್ಪಳಿಸಲಿದೆ ಸೈಕ್ಲೋನ್ ಮೊಂಥಾ, ಒಡಿಶಾಗೆ ರೆಡ್ ಅಲರ್ಟ್, ಕರ್ನಾಟಕದ ಹವಾಮಾನ ಹೇಗಿರುತ್ತೆ?
ಮೊಂಥಾ ಚಂಡಮಾರುತವು ನಾಳೆ ಆಂಧ್ರ ಕರಾವಳಿಗೆ ಅಪ್ಪಳಿಸಲಿದೆ. ಅದರ ಪರಿಣಾಮ ಹಲವು ರಾಜ್ಯಗಳ ಮೇಲಾಗಲಿದೆ. ಆಂಧ್ರಪ್ರದೇಶದಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರಾಜ್ಯದ 26 ಜಿಲ್ಲೆಗಳಲ್ಲಿ 23 ಜಿಲ್ಲೆಗಳಿಗೆ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಧಾರಾಕಾರ ಮಳೆ, ಅತಿ ವೇಗದ ಗಾಳಿ ಮತ್ತು ಸಂಭವನೀಯ ಪ್ರವಾಹದ ಬಗ್ಗೆ ಎಚ್ಚರಿಕೆ ನೀಡಲಾಗಿದೆ.

ನವದೆಹಲಿ, ಅಕ್ಟೋಬರ್ 27: ಆಂಧ್ರದ ಕರಾವಳಿಗೆ ಅಕ್ಟೋಬರ್ 28ರಂದು ಮೊಂಥಾ ಚಂಡಮಾರುತ(Montha Cyclone) ಅಪ್ಪಳಿಸಲಿದ್ದು, ಆಂಧ್ರಪ್ರದೇಶ, ಒಡಿಶಾ, ತಮಿಳುನಾಡಿನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಭೂಕುಸಿತ ಸಂಭವಿಸುವ ಸಾಧ್ಯತೆಗಳಿರುವ ಕಾರಣ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಅದು ಚಂಡಮಾರುತವಾಗಿ ರೂಪುಗೊಂಡಿದೆ.
ಆಂಧ್ರಪ್ರದೇಶದಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರಾಜ್ಯದ 26 ಜಿಲ್ಲೆಗಳಲ್ಲಿ 23 ಜಿಲ್ಲೆಗಳಿಗೆ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಧಾರಾಕಾರ ಮಳೆ, ಅತಿ ವೇಗದ ಗಾಳಿ ಮತ್ತು ಸಂಭವನೀಯ ಪ್ರವಾಹದ ಬಗ್ಗೆ ಎಚ್ಚರಿಕೆ ನೀಡಲಾಗಿದೆ.
ಅಕ್ಟೋಬರ್ 28 ಸಂಜೆ ಕಾಕಿನಾಡ ಬಳಿಯ ಮಚಲಿಪಟ್ನಂ ಮತ್ತು ಕಳಿಂಗಪಟ್ನಂ ನಡುವೆ ಭೂಕುಸಿತವನ್ನುಂಟುಮಾಡುವ ಸಾಧ್ಯತೆಯಿದೆ. ಅಧಿಕಾರಿಗಳು ದೊಡ್ಡ ಪ್ರಮಾಣದ ಸಿದ್ಧತೆಗಳನ್ನು ಪ್ರಾರಂಭಿಸಿದ್ದಾರೆ, ಆದರೆ ಕರಾವಳಿ ಪ್ರದೇಶಗಳಲ್ಲಿನ ಮೀನುಗಾರರು ಮತ್ತು ನಿವಾಸಿಗಳು ಒಳಾಂಗಣದಲ್ಲಿಯೇ ಇರಲು ಮತ್ತು ಸಮುದ್ರಕ್ಕೆ ಹೋಗುವುದನ್ನು ತಪ್ಪಿಸಲು ಒತ್ತಾಯಿಸಲಾಗಿದೆ.
ಒಡಿಶಾ ಸರ್ಕಾರವು ಎಲ್ಲಾ ಶಾಲೆಗಳು, ಅಂಗನವಾಡಿ ಕೇಂದ್ರಗಳು ಮತ್ತು ಕಾಲೇಜುಗಳನ್ನು ಅಕ್ಟೋಬರ್ 30, 2025 ರವರೆಗೆ ಮುಚ್ಚುವುದಾಗಿ ಘೋಷಿಸಿದೆ. ಆಂಧ್ರಪ್ರದೇಶದ ಎಲ್ಲಾ ಶಾಲೆಗಳನ್ನು ಮುಚ್ಚುವಂತೆ ನಿರ್ದೇಶಿಸಲಾಗಿದೆ. ಕಾಕಿನಾಡ, ಕೋನ ಸೀಮಾ, ಎಲುರು, ಪಶ್ಚಿಮ ಗೋದಾವರಿ, ಕೃಷ್ಣ, ಗುಂಟೂರು, ಬಾಪಟ್ಲಾ, ಪ್ರಕಾಶಂ ಮತ್ತು ಎಸ್ಪಿಎಸ್ಆರ್ ನೆಲ್ಲೂರು ಸೇರಿದಂತೆ ಜಿಲ್ಲೆಗಳಿಗೆ ಈ ಎಚ್ಚರಿಕೆ ಜಾರಿಯಲ್ಲಿದೆ .ಅಕ್ಟೋಬರ್ 27 ಮತ್ತು 28 ರಂದು ತಮಿಳುನಾಡು ಮತ್ತು ಪುದುಚೇರಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಆರೆಂಜ್ ಟಲರ್ಟ್ ಘೋಷಿಸಿದೆ.
ಮತ್ತಷ್ಟು ಓದಿ: Weather Today: ರಾಜ್ಯದೆಲ್ಲೆಡೆ ಹೆಚ್ಚಿದ ವರುಣಾರ್ಭಟ; ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್
ಕರ್ನಾಟಕದ ಹವಾಮಾನ ಹೇಗಿರಲಿದೆ? ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಕೋಲಾರ, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಬೀದರ್ನಲ್ಲಿ ಮಳೆಯಾಗಲಿದೆ.
IMD Weather Alert !
A Deep Depression over the southeast Bay of Bengal is likely to intensify into a Cyclonic Storm by Oct 27 and a Severe Cyclonic Storm by 28th October.
⛈️ Heavy to very heavy rainfall expected over: Rayalaseema, Tamil Nadu, Kerala & Mahe: Oct 27–28 Coastal… pic.twitter.com/bcdxIhxG5s
— India Meteorological Department (@Indiametdept) October 26, 2025
ಮಂಕಿ, ಕುಮಟಾ, ಗೋಕರ್ಣ, ಕಾರವಾರ, ಮಂಗಳೂರು, ಶಕ್ತಿನಗರ, ಅಂಕೋಲಾ, ಮುಲ್ಕಿ, ಆಗುಂಬೆ, ಗೇರುಸೊಪ್ಪ, ಕೋಟಾ, ಮುದ್ದೇಬಿಹಾಳ, ಮೂಡುಬಿದಿರೆ, ನಿಪ್ಪಾಣಿ, ಪೊನ್ನಂಪೇಟೆ, ರಾಯಚೂರಿನಲ್ಲಿ ಮಳೆಯಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:10 pm, Mon, 27 October 25




