AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪಳಿಸಲಿದೆ ನಿಸರ್ಗಾ ಸೈಕ್ಲೋನ್! ಮಹಾರಾಷ್ಟ್ರದ ಅಲಿಬಾಗ್ ತೀರದಲ್ಲಿ ತೀವ್ರ ಕಟ್ಟೆಚ್ಚರ

ದೆಹಲಿ: ಕೆಲ ದಿನಗಳ ಹಿಂದೆ ಅಂಫಾನ್ ಕೊಟ್ಟಿದ್ದ ಏಟಿಗೆ ಪಶ್ಚಿಮ ಭಾರತ ಅಲುಗಾಡಿತ್ತು. ಇದೀಗ ಪೂರ್ವ ಭಾರತಕ್ಕೂ ಇದೇ ಪರಿಸ್ಥಿತಿ ಎದುರಾಗಿದೆ. ‘ಅಂಫಾನ್’ ಅಬ್ಬರ ತಗ್ಗುತ್ತಿದ್ದಂತೆ, ಅರಬ್ಬಿ ಸಮುದ್ರದಲ್ಲಿ ರಾಕ್ಷಸ ಸುಳಿ ನಿರ್ಮಾಣವಾಗಿದೆ. ಈ ಸುಳಿಗಾಳಿ ಇಂದು ಭಾರತದ ಪೂರ್ವ ಕರಾವಳಿಗೆ ಅಪ್ಪಳಿಸಲಿದ್ದು, ಭಾರಿ ಆತಂಕ ಎದುರಾಗಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಅಪ್ಪಳಿಸಲಿದೆ ಸೈಕ್ಲೋನ್! ನಿಸರ್ಗಾ ಸೈಕ್ಲೋನ್ ಟೆನ್ಷನ್ ಕ್ಷಣಕ್ಷಣಕ್ಕೂ ಹೆಚ್ಚಾಗ್ತಿದೆ. ಇನ್ನೇನು ಕೆಲವೇ ಗಂಟೆಗಳಲ್ಲಿ ಈ ರಾಕ್ಷಸ ಸುಳಿಗಾಳಿ ಭಾರತದ ಕಡಲ ತೀರಕ್ಕೆ ಅಪ್ಪಳಿಸಲಿದೆ. […]

ಅಪ್ಪಳಿಸಲಿದೆ ನಿಸರ್ಗಾ ಸೈಕ್ಲೋನ್! ಮಹಾರಾಷ್ಟ್ರದ ಅಲಿಬಾಗ್ ತೀರದಲ್ಲಿ ತೀವ್ರ ಕಟ್ಟೆಚ್ಚರ
ಆಯೇಷಾ ಬಾನು
|

Updated on:Jun 03, 2020 | 2:59 PM

Share

ದೆಹಲಿ: ಕೆಲ ದಿನಗಳ ಹಿಂದೆ ಅಂಫಾನ್ ಕೊಟ್ಟಿದ್ದ ಏಟಿಗೆ ಪಶ್ಚಿಮ ಭಾರತ ಅಲುಗಾಡಿತ್ತು. ಇದೀಗ ಪೂರ್ವ ಭಾರತಕ್ಕೂ ಇದೇ ಪರಿಸ್ಥಿತಿ ಎದುರಾಗಿದೆ. ‘ಅಂಫಾನ್’ ಅಬ್ಬರ ತಗ್ಗುತ್ತಿದ್ದಂತೆ, ಅರಬ್ಬಿ ಸಮುದ್ರದಲ್ಲಿ ರಾಕ್ಷಸ ಸುಳಿ ನಿರ್ಮಾಣವಾಗಿದೆ. ಈ ಸುಳಿಗಾಳಿ ಇಂದು ಭಾರತದ ಪೂರ್ವ ಕರಾವಳಿಗೆ ಅಪ್ಪಳಿಸಲಿದ್ದು, ಭಾರಿ ಆತಂಕ ಎದುರಾಗಿದೆ.

ಇಂದು ಮಧ್ಯಾಹ್ನ 12 ಗಂಟೆಗೆ ಅಪ್ಪಳಿಸಲಿದೆ ಸೈಕ್ಲೋನ್! ನಿಸರ್ಗಾ ಸೈಕ್ಲೋನ್ ಟೆನ್ಷನ್ ಕ್ಷಣಕ್ಷಣಕ್ಕೂ ಹೆಚ್ಚಾಗ್ತಿದೆ. ಇನ್ನೇನು ಕೆಲವೇ ಗಂಟೆಗಳಲ್ಲಿ ಈ ರಾಕ್ಷಸ ಸುಳಿಗಾಳಿ ಭಾರತದ ಕಡಲ ತೀರಕ್ಕೆ ಅಪ್ಪಳಿಸಲಿದೆ. ಅರಬ್ಬಿ ಸಮುದ್ರದಲ್ಲಿ ವಾತಾವರಣ ಬದಲಾವಣೆ ಪರಿಣಾಮ, ಈ ಸೈಕ್ಲೋನ್ ಉದ್ಭವವಾಗಿದ್ದು, ಕರ್ನಾಟಕ, ಕೇರಳ, ಗೋವಾ, ಮಹಾರಾಷ್ಟ್ರ ಸೇರಿದಂತೆ ಗುಜರಾತ್ ಮೇಲೆ ಸೈಕ್ಲೋನ್ ಪರಿಣಾಮ ಘೋರವಾಗಿರಲಿದೆ.

ಈಗಾಗ್ಲೇ ಪೂರ್ವ ಕರಾವಳಿ ಭಾಗದ ಹಲವು ರಾಜ್ಯಗಳಲ್ಲಿ ಭಾರಿ ಪ್ರಮಾಣದ ಮಳೆ ಆಗುತ್ತಿದ್ದು, ಇಂದು ಮಧ್ಯಾಹ್ನ 12 ಕ್ಕೆ ಮಹಾರಾಷ್ಟ್ರದ ಅಲಿಬಾಗ್ ತೀರಕ್ಕೆ ನಿಸರ್ಗಾ ಸೈಕ್ಲೋನ್ ಅಪ್ಪಳಿಸಲಿದೆ. ಇನ್ನೂ ವಾಣಿಜ್ಯ ನಗರಿ ಮುಂಬೈಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ‘ಕೊರೊನಾ’ ವಕ್ಕರಿಸಿರುವ ಸಂದರ್ಭದಲ್ಲೇ ಮತ್ತೊಂದು ಆಘಾತ ಎದುರಾಗಿದೆ. ಹೀಗಾಗಿ ಮುಂಬೈನ ನಿಷೇಧಾಜ್ಞೆ ಜಾರಿಗೊಳಿಸಿ, ಭಾರಿ ಕಟ್ಟೆಚ್ಚರ ವಹಿಸಲಾಗಿದೆ.

ಒಟ್ನಲ್ಲಿ ಕೊರೊನಾ ಕಂಟಕದ ನಡುವೆಯೇ ಭಾರತದ ಮೇಲೆ ಪ್ರಕೃತಿ ಮುನಿಸಿಕೊಂಡಂತೆ ಕಾಣುತ್ತಿದೆ. ಕೆಲವೇ ಕೆಲವು ದಿನಗಳ ಹಿಂದೆ ಅಂಫಾನ್ ಅಬ್ಬರಿಸಿ, ಬೊಬ್ಬಿರಿದಿತ್ತು. ಇದೆಲ್ಲಾ ಮಾಸುವ ಮುನ್ನವೇ ಮತ್ತೆ ಹಾವಳಿ ಎಬ್ಬಿಸಲು ನಿಸರ್ಗಾ ಎಂಟ್ರಿ ಕೊಟ್ಟಿದೆ. ಪರಿಸ್ಥಿತಿ ನಿಭಾಯಿಸಲು ಭಾರತೀಯ ಪಡೆಗಳು ಕೂಡ ಸಜ್ಜಾಗಿ ನಿಂತಿವೆ.

Published On - 6:47 am, Wed, 3 June 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ