AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪಳಿಸಲಿದೆ ನಿಸರ್ಗಾ ಸೈಕ್ಲೋನ್! ಮಹಾರಾಷ್ಟ್ರದ ಅಲಿಬಾಗ್ ತೀರದಲ್ಲಿ ತೀವ್ರ ಕಟ್ಟೆಚ್ಚರ

ದೆಹಲಿ: ಕೆಲ ದಿನಗಳ ಹಿಂದೆ ಅಂಫಾನ್ ಕೊಟ್ಟಿದ್ದ ಏಟಿಗೆ ಪಶ್ಚಿಮ ಭಾರತ ಅಲುಗಾಡಿತ್ತು. ಇದೀಗ ಪೂರ್ವ ಭಾರತಕ್ಕೂ ಇದೇ ಪರಿಸ್ಥಿತಿ ಎದುರಾಗಿದೆ. ‘ಅಂಫಾನ್’ ಅಬ್ಬರ ತಗ್ಗುತ್ತಿದ್ದಂತೆ, ಅರಬ್ಬಿ ಸಮುದ್ರದಲ್ಲಿ ರಾಕ್ಷಸ ಸುಳಿ ನಿರ್ಮಾಣವಾಗಿದೆ. ಈ ಸುಳಿಗಾಳಿ ಇಂದು ಭಾರತದ ಪೂರ್ವ ಕರಾವಳಿಗೆ ಅಪ್ಪಳಿಸಲಿದ್ದು, ಭಾರಿ ಆತಂಕ ಎದುರಾಗಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಅಪ್ಪಳಿಸಲಿದೆ ಸೈಕ್ಲೋನ್! ನಿಸರ್ಗಾ ಸೈಕ್ಲೋನ್ ಟೆನ್ಷನ್ ಕ್ಷಣಕ್ಷಣಕ್ಕೂ ಹೆಚ್ಚಾಗ್ತಿದೆ. ಇನ್ನೇನು ಕೆಲವೇ ಗಂಟೆಗಳಲ್ಲಿ ಈ ರಾಕ್ಷಸ ಸುಳಿಗಾಳಿ ಭಾರತದ ಕಡಲ ತೀರಕ್ಕೆ ಅಪ್ಪಳಿಸಲಿದೆ. […]

ಅಪ್ಪಳಿಸಲಿದೆ ನಿಸರ್ಗಾ ಸೈಕ್ಲೋನ್! ಮಹಾರಾಷ್ಟ್ರದ ಅಲಿಬಾಗ್ ತೀರದಲ್ಲಿ ತೀವ್ರ ಕಟ್ಟೆಚ್ಚರ
ಆಯೇಷಾ ಬಾನು
|

Updated on:Jun 03, 2020 | 2:59 PM

Share

ದೆಹಲಿ: ಕೆಲ ದಿನಗಳ ಹಿಂದೆ ಅಂಫಾನ್ ಕೊಟ್ಟಿದ್ದ ಏಟಿಗೆ ಪಶ್ಚಿಮ ಭಾರತ ಅಲುಗಾಡಿತ್ತು. ಇದೀಗ ಪೂರ್ವ ಭಾರತಕ್ಕೂ ಇದೇ ಪರಿಸ್ಥಿತಿ ಎದುರಾಗಿದೆ. ‘ಅಂಫಾನ್’ ಅಬ್ಬರ ತಗ್ಗುತ್ತಿದ್ದಂತೆ, ಅರಬ್ಬಿ ಸಮುದ್ರದಲ್ಲಿ ರಾಕ್ಷಸ ಸುಳಿ ನಿರ್ಮಾಣವಾಗಿದೆ. ಈ ಸುಳಿಗಾಳಿ ಇಂದು ಭಾರತದ ಪೂರ್ವ ಕರಾವಳಿಗೆ ಅಪ್ಪಳಿಸಲಿದ್ದು, ಭಾರಿ ಆತಂಕ ಎದುರಾಗಿದೆ.

ಇಂದು ಮಧ್ಯಾಹ್ನ 12 ಗಂಟೆಗೆ ಅಪ್ಪಳಿಸಲಿದೆ ಸೈಕ್ಲೋನ್! ನಿಸರ್ಗಾ ಸೈಕ್ಲೋನ್ ಟೆನ್ಷನ್ ಕ್ಷಣಕ್ಷಣಕ್ಕೂ ಹೆಚ್ಚಾಗ್ತಿದೆ. ಇನ್ನೇನು ಕೆಲವೇ ಗಂಟೆಗಳಲ್ಲಿ ಈ ರಾಕ್ಷಸ ಸುಳಿಗಾಳಿ ಭಾರತದ ಕಡಲ ತೀರಕ್ಕೆ ಅಪ್ಪಳಿಸಲಿದೆ. ಅರಬ್ಬಿ ಸಮುದ್ರದಲ್ಲಿ ವಾತಾವರಣ ಬದಲಾವಣೆ ಪರಿಣಾಮ, ಈ ಸೈಕ್ಲೋನ್ ಉದ್ಭವವಾಗಿದ್ದು, ಕರ್ನಾಟಕ, ಕೇರಳ, ಗೋವಾ, ಮಹಾರಾಷ್ಟ್ರ ಸೇರಿದಂತೆ ಗುಜರಾತ್ ಮೇಲೆ ಸೈಕ್ಲೋನ್ ಪರಿಣಾಮ ಘೋರವಾಗಿರಲಿದೆ.

ಈಗಾಗ್ಲೇ ಪೂರ್ವ ಕರಾವಳಿ ಭಾಗದ ಹಲವು ರಾಜ್ಯಗಳಲ್ಲಿ ಭಾರಿ ಪ್ರಮಾಣದ ಮಳೆ ಆಗುತ್ತಿದ್ದು, ಇಂದು ಮಧ್ಯಾಹ್ನ 12 ಕ್ಕೆ ಮಹಾರಾಷ್ಟ್ರದ ಅಲಿಬಾಗ್ ತೀರಕ್ಕೆ ನಿಸರ್ಗಾ ಸೈಕ್ಲೋನ್ ಅಪ್ಪಳಿಸಲಿದೆ. ಇನ್ನೂ ವಾಣಿಜ್ಯ ನಗರಿ ಮುಂಬೈಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ‘ಕೊರೊನಾ’ ವಕ್ಕರಿಸಿರುವ ಸಂದರ್ಭದಲ್ಲೇ ಮತ್ತೊಂದು ಆಘಾತ ಎದುರಾಗಿದೆ. ಹೀಗಾಗಿ ಮುಂಬೈನ ನಿಷೇಧಾಜ್ಞೆ ಜಾರಿಗೊಳಿಸಿ, ಭಾರಿ ಕಟ್ಟೆಚ್ಚರ ವಹಿಸಲಾಗಿದೆ.

ಒಟ್ನಲ್ಲಿ ಕೊರೊನಾ ಕಂಟಕದ ನಡುವೆಯೇ ಭಾರತದ ಮೇಲೆ ಪ್ರಕೃತಿ ಮುನಿಸಿಕೊಂಡಂತೆ ಕಾಣುತ್ತಿದೆ. ಕೆಲವೇ ಕೆಲವು ದಿನಗಳ ಹಿಂದೆ ಅಂಫಾನ್ ಅಬ್ಬರಿಸಿ, ಬೊಬ್ಬಿರಿದಿತ್ತು. ಇದೆಲ್ಲಾ ಮಾಸುವ ಮುನ್ನವೇ ಮತ್ತೆ ಹಾವಳಿ ಎಬ್ಬಿಸಲು ನಿಸರ್ಗಾ ಎಂಟ್ರಿ ಕೊಟ್ಟಿದೆ. ಪರಿಸ್ಥಿತಿ ನಿಭಾಯಿಸಲು ಭಾರತೀಯ ಪಡೆಗಳು ಕೂಡ ಸಜ್ಜಾಗಿ ನಿಂತಿವೆ.

Published On - 6:47 am, Wed, 3 June 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ