AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪಳಿಸಲಿದೆ ನಿಸರ್ಗಾ ಸೈಕ್ಲೋನ್! ಮಹಾರಾಷ್ಟ್ರದ ಅಲಿಬಾಗ್ ತೀರದಲ್ಲಿ ತೀವ್ರ ಕಟ್ಟೆಚ್ಚರ

ದೆಹಲಿ: ಕೆಲ ದಿನಗಳ ಹಿಂದೆ ಅಂಫಾನ್ ಕೊಟ್ಟಿದ್ದ ಏಟಿಗೆ ಪಶ್ಚಿಮ ಭಾರತ ಅಲುಗಾಡಿತ್ತು. ಇದೀಗ ಪೂರ್ವ ಭಾರತಕ್ಕೂ ಇದೇ ಪರಿಸ್ಥಿತಿ ಎದುರಾಗಿದೆ. ‘ಅಂಫಾನ್’ ಅಬ್ಬರ ತಗ್ಗುತ್ತಿದ್ದಂತೆ, ಅರಬ್ಬಿ ಸಮುದ್ರದಲ್ಲಿ ರಾಕ್ಷಸ ಸುಳಿ ನಿರ್ಮಾಣವಾಗಿದೆ. ಈ ಸುಳಿಗಾಳಿ ಇಂದು ಭಾರತದ ಪೂರ್ವ ಕರಾವಳಿಗೆ ಅಪ್ಪಳಿಸಲಿದ್ದು, ಭಾರಿ ಆತಂಕ ಎದುರಾಗಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಅಪ್ಪಳಿಸಲಿದೆ ಸೈಕ್ಲೋನ್! ನಿಸರ್ಗಾ ಸೈಕ್ಲೋನ್ ಟೆನ್ಷನ್ ಕ್ಷಣಕ್ಷಣಕ್ಕೂ ಹೆಚ್ಚಾಗ್ತಿದೆ. ಇನ್ನೇನು ಕೆಲವೇ ಗಂಟೆಗಳಲ್ಲಿ ಈ ರಾಕ್ಷಸ ಸುಳಿಗಾಳಿ ಭಾರತದ ಕಡಲ ತೀರಕ್ಕೆ ಅಪ್ಪಳಿಸಲಿದೆ. […]

ಅಪ್ಪಳಿಸಲಿದೆ ನಿಸರ್ಗಾ ಸೈಕ್ಲೋನ್! ಮಹಾರಾಷ್ಟ್ರದ ಅಲಿಬಾಗ್ ತೀರದಲ್ಲಿ ತೀವ್ರ ಕಟ್ಟೆಚ್ಚರ
ಆಯೇಷಾ ಬಾನು
|

Updated on:Jun 03, 2020 | 2:59 PM

Share

ದೆಹಲಿ: ಕೆಲ ದಿನಗಳ ಹಿಂದೆ ಅಂಫಾನ್ ಕೊಟ್ಟಿದ್ದ ಏಟಿಗೆ ಪಶ್ಚಿಮ ಭಾರತ ಅಲುಗಾಡಿತ್ತು. ಇದೀಗ ಪೂರ್ವ ಭಾರತಕ್ಕೂ ಇದೇ ಪರಿಸ್ಥಿತಿ ಎದುರಾಗಿದೆ. ‘ಅಂಫಾನ್’ ಅಬ್ಬರ ತಗ್ಗುತ್ತಿದ್ದಂತೆ, ಅರಬ್ಬಿ ಸಮುದ್ರದಲ್ಲಿ ರಾಕ್ಷಸ ಸುಳಿ ನಿರ್ಮಾಣವಾಗಿದೆ. ಈ ಸುಳಿಗಾಳಿ ಇಂದು ಭಾರತದ ಪೂರ್ವ ಕರಾವಳಿಗೆ ಅಪ್ಪಳಿಸಲಿದ್ದು, ಭಾರಿ ಆತಂಕ ಎದುರಾಗಿದೆ.

ಇಂದು ಮಧ್ಯಾಹ್ನ 12 ಗಂಟೆಗೆ ಅಪ್ಪಳಿಸಲಿದೆ ಸೈಕ್ಲೋನ್! ನಿಸರ್ಗಾ ಸೈಕ್ಲೋನ್ ಟೆನ್ಷನ್ ಕ್ಷಣಕ್ಷಣಕ್ಕೂ ಹೆಚ್ಚಾಗ್ತಿದೆ. ಇನ್ನೇನು ಕೆಲವೇ ಗಂಟೆಗಳಲ್ಲಿ ಈ ರಾಕ್ಷಸ ಸುಳಿಗಾಳಿ ಭಾರತದ ಕಡಲ ತೀರಕ್ಕೆ ಅಪ್ಪಳಿಸಲಿದೆ. ಅರಬ್ಬಿ ಸಮುದ್ರದಲ್ಲಿ ವಾತಾವರಣ ಬದಲಾವಣೆ ಪರಿಣಾಮ, ಈ ಸೈಕ್ಲೋನ್ ಉದ್ಭವವಾಗಿದ್ದು, ಕರ್ನಾಟಕ, ಕೇರಳ, ಗೋವಾ, ಮಹಾರಾಷ್ಟ್ರ ಸೇರಿದಂತೆ ಗುಜರಾತ್ ಮೇಲೆ ಸೈಕ್ಲೋನ್ ಪರಿಣಾಮ ಘೋರವಾಗಿರಲಿದೆ.

ಈಗಾಗ್ಲೇ ಪೂರ್ವ ಕರಾವಳಿ ಭಾಗದ ಹಲವು ರಾಜ್ಯಗಳಲ್ಲಿ ಭಾರಿ ಪ್ರಮಾಣದ ಮಳೆ ಆಗುತ್ತಿದ್ದು, ಇಂದು ಮಧ್ಯಾಹ್ನ 12 ಕ್ಕೆ ಮಹಾರಾಷ್ಟ್ರದ ಅಲಿಬಾಗ್ ತೀರಕ್ಕೆ ನಿಸರ್ಗಾ ಸೈಕ್ಲೋನ್ ಅಪ್ಪಳಿಸಲಿದೆ. ಇನ್ನೂ ವಾಣಿಜ್ಯ ನಗರಿ ಮುಂಬೈಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ‘ಕೊರೊನಾ’ ವಕ್ಕರಿಸಿರುವ ಸಂದರ್ಭದಲ್ಲೇ ಮತ್ತೊಂದು ಆಘಾತ ಎದುರಾಗಿದೆ. ಹೀಗಾಗಿ ಮುಂಬೈನ ನಿಷೇಧಾಜ್ಞೆ ಜಾರಿಗೊಳಿಸಿ, ಭಾರಿ ಕಟ್ಟೆಚ್ಚರ ವಹಿಸಲಾಗಿದೆ.

ಒಟ್ನಲ್ಲಿ ಕೊರೊನಾ ಕಂಟಕದ ನಡುವೆಯೇ ಭಾರತದ ಮೇಲೆ ಪ್ರಕೃತಿ ಮುನಿಸಿಕೊಂಡಂತೆ ಕಾಣುತ್ತಿದೆ. ಕೆಲವೇ ಕೆಲವು ದಿನಗಳ ಹಿಂದೆ ಅಂಫಾನ್ ಅಬ್ಬರಿಸಿ, ಬೊಬ್ಬಿರಿದಿತ್ತು. ಇದೆಲ್ಲಾ ಮಾಸುವ ಮುನ್ನವೇ ಮತ್ತೆ ಹಾವಳಿ ಎಬ್ಬಿಸಲು ನಿಸರ್ಗಾ ಎಂಟ್ರಿ ಕೊಟ್ಟಿದೆ. ಪರಿಸ್ಥಿತಿ ನಿಭಾಯಿಸಲು ಭಾರತೀಯ ಪಡೆಗಳು ಕೂಡ ಸಜ್ಜಾಗಿ ನಿಂತಿವೆ.

Published On - 6:47 am, Wed, 3 June 20

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ