AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪಳಿಸಲಿದೆ ನಿಸರ್ಗಾ ಸೈಕ್ಲೋನ್! ಮಹಾರಾಷ್ಟ್ರದ ಅಲಿಬಾಗ್ ತೀರದಲ್ಲಿ ತೀವ್ರ ಕಟ್ಟೆಚ್ಚರ

ದೆಹಲಿ: ಕೆಲ ದಿನಗಳ ಹಿಂದೆ ಅಂಫಾನ್ ಕೊಟ್ಟಿದ್ದ ಏಟಿಗೆ ಪಶ್ಚಿಮ ಭಾರತ ಅಲುಗಾಡಿತ್ತು. ಇದೀಗ ಪೂರ್ವ ಭಾರತಕ್ಕೂ ಇದೇ ಪರಿಸ್ಥಿತಿ ಎದುರಾಗಿದೆ. ‘ಅಂಫಾನ್’ ಅಬ್ಬರ ತಗ್ಗುತ್ತಿದ್ದಂತೆ, ಅರಬ್ಬಿ ಸಮುದ್ರದಲ್ಲಿ ರಾಕ್ಷಸ ಸುಳಿ ನಿರ್ಮಾಣವಾಗಿದೆ. ಈ ಸುಳಿಗಾಳಿ ಇಂದು ಭಾರತದ ಪೂರ್ವ ಕರಾವಳಿಗೆ ಅಪ್ಪಳಿಸಲಿದ್ದು, ಭಾರಿ ಆತಂಕ ಎದುರಾಗಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಅಪ್ಪಳಿಸಲಿದೆ ಸೈಕ್ಲೋನ್! ನಿಸರ್ಗಾ ಸೈಕ್ಲೋನ್ ಟೆನ್ಷನ್ ಕ್ಷಣಕ್ಷಣಕ್ಕೂ ಹೆಚ್ಚಾಗ್ತಿದೆ. ಇನ್ನೇನು ಕೆಲವೇ ಗಂಟೆಗಳಲ್ಲಿ ಈ ರಾಕ್ಷಸ ಸುಳಿಗಾಳಿ ಭಾರತದ ಕಡಲ ತೀರಕ್ಕೆ ಅಪ್ಪಳಿಸಲಿದೆ. […]

ಅಪ್ಪಳಿಸಲಿದೆ ನಿಸರ್ಗಾ ಸೈಕ್ಲೋನ್! ಮಹಾರಾಷ್ಟ್ರದ ಅಲಿಬಾಗ್ ತೀರದಲ್ಲಿ ತೀವ್ರ ಕಟ್ಟೆಚ್ಚರ
ಆಯೇಷಾ ಬಾನು
ಆಯೇಷಾ ಬಾನು|

Updated on:Jun 03, 2020 | 2:59 PM

Share

ದೆಹಲಿ: ಕೆಲ ದಿನಗಳ ಹಿಂದೆ ಅಂಫಾನ್ ಕೊಟ್ಟಿದ್ದ ಏಟಿಗೆ ಪಶ್ಚಿಮ ಭಾರತ ಅಲುಗಾಡಿತ್ತು. ಇದೀಗ ಪೂರ್ವ ಭಾರತಕ್ಕೂ ಇದೇ ಪರಿಸ್ಥಿತಿ ಎದುರಾಗಿದೆ. ‘ಅಂಫಾನ್’ ಅಬ್ಬರ ತಗ್ಗುತ್ತಿದ್ದಂತೆ, ಅರಬ್ಬಿ ಸಮುದ್ರದಲ್ಲಿ ರಾಕ್ಷಸ ಸುಳಿ ನಿರ್ಮಾಣವಾಗಿದೆ. ಈ ಸುಳಿಗಾಳಿ ಇಂದು ಭಾರತದ ಪೂರ್ವ ಕರಾವಳಿಗೆ ಅಪ್ಪಳಿಸಲಿದ್ದು, ಭಾರಿ ಆತಂಕ ಎದುರಾಗಿದೆ.

ಇಂದು ಮಧ್ಯಾಹ್ನ 12 ಗಂಟೆಗೆ ಅಪ್ಪಳಿಸಲಿದೆ ಸೈಕ್ಲೋನ್! ನಿಸರ್ಗಾ ಸೈಕ್ಲೋನ್ ಟೆನ್ಷನ್ ಕ್ಷಣಕ್ಷಣಕ್ಕೂ ಹೆಚ್ಚಾಗ್ತಿದೆ. ಇನ್ನೇನು ಕೆಲವೇ ಗಂಟೆಗಳಲ್ಲಿ ಈ ರಾಕ್ಷಸ ಸುಳಿಗಾಳಿ ಭಾರತದ ಕಡಲ ತೀರಕ್ಕೆ ಅಪ್ಪಳಿಸಲಿದೆ. ಅರಬ್ಬಿ ಸಮುದ್ರದಲ್ಲಿ ವಾತಾವರಣ ಬದಲಾವಣೆ ಪರಿಣಾಮ, ಈ ಸೈಕ್ಲೋನ್ ಉದ್ಭವವಾಗಿದ್ದು, ಕರ್ನಾಟಕ, ಕೇರಳ, ಗೋವಾ, ಮಹಾರಾಷ್ಟ್ರ ಸೇರಿದಂತೆ ಗುಜರಾತ್ ಮೇಲೆ ಸೈಕ್ಲೋನ್ ಪರಿಣಾಮ ಘೋರವಾಗಿರಲಿದೆ.

ಈಗಾಗ್ಲೇ ಪೂರ್ವ ಕರಾವಳಿ ಭಾಗದ ಹಲವು ರಾಜ್ಯಗಳಲ್ಲಿ ಭಾರಿ ಪ್ರಮಾಣದ ಮಳೆ ಆಗುತ್ತಿದ್ದು, ಇಂದು ಮಧ್ಯಾಹ್ನ 12 ಕ್ಕೆ ಮಹಾರಾಷ್ಟ್ರದ ಅಲಿಬಾಗ್ ತೀರಕ್ಕೆ ನಿಸರ್ಗಾ ಸೈಕ್ಲೋನ್ ಅಪ್ಪಳಿಸಲಿದೆ. ಇನ್ನೂ ವಾಣಿಜ್ಯ ನಗರಿ ಮುಂಬೈಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ‘ಕೊರೊನಾ’ ವಕ್ಕರಿಸಿರುವ ಸಂದರ್ಭದಲ್ಲೇ ಮತ್ತೊಂದು ಆಘಾತ ಎದುರಾಗಿದೆ. ಹೀಗಾಗಿ ಮುಂಬೈನ ನಿಷೇಧಾಜ್ಞೆ ಜಾರಿಗೊಳಿಸಿ, ಭಾರಿ ಕಟ್ಟೆಚ್ಚರ ವಹಿಸಲಾಗಿದೆ.

ಒಟ್ನಲ್ಲಿ ಕೊರೊನಾ ಕಂಟಕದ ನಡುವೆಯೇ ಭಾರತದ ಮೇಲೆ ಪ್ರಕೃತಿ ಮುನಿಸಿಕೊಂಡಂತೆ ಕಾಣುತ್ತಿದೆ. ಕೆಲವೇ ಕೆಲವು ದಿನಗಳ ಹಿಂದೆ ಅಂಫಾನ್ ಅಬ್ಬರಿಸಿ, ಬೊಬ್ಬಿರಿದಿತ್ತು. ಇದೆಲ್ಲಾ ಮಾಸುವ ಮುನ್ನವೇ ಮತ್ತೆ ಹಾವಳಿ ಎಬ್ಬಿಸಲು ನಿಸರ್ಗಾ ಎಂಟ್ರಿ ಕೊಟ್ಟಿದೆ. ಪರಿಸ್ಥಿತಿ ನಿಭಾಯಿಸಲು ಭಾರತೀಯ ಪಡೆಗಳು ಕೂಡ ಸಜ್ಜಾಗಿ ನಿಂತಿವೆ.

Published On - 6:47 am, Wed, 3 June 20

Follow Us
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ