AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವಾರ್ ಚಂಡಮಾರುತ ಎದುರಿಸಲು ಸನ್ನದ್ಧ ಸ್ಥಿತಿಯಲ್ಲಿ ಎನ್​ಡಿಆರ್​ಎಫ್

ನಿವರ್ ಚಂಡಮಾರುತ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸುಮಾರು 1,200 ಕ್ಕೂ ಹೆಚ್ಚು ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ (ಎನ್​ಡಿಆರ್​ಎಫ್) ಸಿಬ್ಬಂದಿಯನ್ನು ತಮಿಳುನಾಡು, ಆಂಧ್ರ ಪ್ರದೇಶ ಮತ್ತು ಪುದುಚೆರಿ ಕರಾವಳಿ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ ಹಾಗೂ ಇನ್ನೂ 800 ರಷ್ಟು ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿರಿಸಲಾಗಿದೆ ಎಂದು ಎನ್​ಡಿಆರ್​ಎಫ್ ಮುಖ್ಯಸ್ಥ ಎಸ್ ಎನ್ ಪ್ರಧಾನ್ ಹೇಳಿದ್ದಾರೆ. ನಿವರ್ ಚಂಡಮಾರುತವು ಈ ರಾಜ್ಯಗಳ ಕರಾವಳಿ ಪ್ರದೇಶವನ್ನು ಬುಧವಾರದಂದು ಅಪ್ಪಳಿಸಲಿದೆ. ನಿವರ್ ಚಂಡಮಾರುತ ಎಷ್ಟೇ ತೀವ್ರಗೊಂಡರೂ ಅದು ಸೃಷ್ಟಿಸಬಹುದಾದ ಅಪಾಯಕಾರಿ ಸ್ಥಿತಿಯನ್ನು ಎದುರಿಸಲು ಎನ್​ಡಿಆರ್​ಎಫ್ ಸಿದ್ಧವಾಗಿದೆಯೆಂದು […]

ನಿವಾರ್ ಚಂಡಮಾರುತ ಎದುರಿಸಲು ಸನ್ನದ್ಧ ಸ್ಥಿತಿಯಲ್ಲಿ ಎನ್​ಡಿಆರ್​ಎಫ್
ಅರುಣ್​ ಕುಮಾರ್​ ಬೆಳ್ಳಿ
| Edited By: |

Updated on:Nov 25, 2020 | 8:33 AM

Share

ನಿವರ್ ಚಂಡಮಾರುತ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸುಮಾರು 1,200 ಕ್ಕೂ ಹೆಚ್ಚು ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ (ಎನ್​ಡಿಆರ್​ಎಫ್) ಸಿಬ್ಬಂದಿಯನ್ನು ತಮಿಳುನಾಡು, ಆಂಧ್ರ ಪ್ರದೇಶ ಮತ್ತು ಪುದುಚೆರಿ ಕರಾವಳಿ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ ಹಾಗೂ ಇನ್ನೂ 800 ರಷ್ಟು ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿರಿಸಲಾಗಿದೆ ಎಂದು ಎನ್​ಡಿಆರ್​ಎಫ್ ಮುಖ್ಯಸ್ಥ ಎಸ್ ಎನ್ ಪ್ರಧಾನ್ ಹೇಳಿದ್ದಾರೆ. ನಿವರ್ ಚಂಡಮಾರುತವು ಈ ರಾಜ್ಯಗಳ ಕರಾವಳಿ ಪ್ರದೇಶವನ್ನು ಬುಧವಾರದಂದು ಅಪ್ಪಳಿಸಲಿದೆ.

ನಿವರ್ ಚಂಡಮಾರುತ ಎಷ್ಟೇ ತೀವ್ರಗೊಂಡರೂ ಅದು ಸೃಷ್ಟಿಸಬಹುದಾದ ಅಪಾಯಕಾರಿ ಸ್ಥಿತಿಯನ್ನು ಎದುರಿಸಲು ಎನ್​ಡಿಆರ್​ಎಫ್ ಸಿದ್ಧವಾಗಿದೆಯೆಂದು ಪ್ರಧಾನ್ ಹೇಳಿದ್ದಾರೆ. ಪ್ರಸ್ತುತವಾಗಿ ಈ ಚಂಡಮಾರುತವು ಬಂಗಾಳ ಕೊಲ್ಲಿಯಿಂದ ನೈಋತ್ಯ ಕರಾವಳಿ ಪ್ರದೇಶದತ್ತ ಮುನ್ನುಗ್ಗುತ್ತಿದೆ.

‘‘ಚಂಡಮಾರುತದ ಚಲನೆಯನ್ನ್ನು ನಾವು ಸೂಕ್ಷ್ಮವಾಗಿ ಆವಲೋಕಿಸುತ್ತಿದ್ದೇವೆ ಮತ್ತು ಅದರಿಂದ ಪ್ರಭಾವಕ್ಕೊಳಗಾಗಲಿರುವ ರಾಜ್ಯಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇವೆ,’’ ಎಂದು , ಪ್ರಧಾನ್ ಚೆನೈಯಲ್ಲಿ ನಡೆಸಿದ ಸುದ್ದಿಗೋಷ್ಠಿಯೊಂದರಲ್ಲಿ ಹೇಳಿದ್ದಾರೆ.

‘‘ಕರಾವಳಿ ಪ್ರದೇಶದಲ್ಲಿ ತೀವ್ರ ಗತಿಯಲ್ಲಿ ಉಲ್ಬಣಿಸುತ್ತಿರುವ ಸ್ಥಿತಿಯನ್ನು ನಾವು ಗಮನಿಸುತ್ತಿದ್ದೇವೆ. ಮುಂದಿನ ಕೆಲ ಗಂಟೆಗಳಲ್ಲಿ ಅದು ಗಂಟೆಗೆ 120 ರಿಂದ 130 ಕಿ. ಮೀ ವೇಗ ಪಡೆದುಕೊಂಡು ಅಪ್ಪಳಿಸುವ ಸಾಧ್ಯತೆಯಿದೆ, ಆದರೆ ಜನರು ಭೀತಿಗೊಳಗಾಗುವ ಅವಶ್ಯಕತೆಯಿಲ್ಲ. ಪರಿಸ್ಥಿತಿಯನ್ನು ಎದುರಿಸಲು ನಾವು ಸನ್ನದ್ಧರಾಗಿದ್ದೇವೆ,’’ ಎಂದು ಪ್ರಧಾನ್ ಹೇಳಿದರು.

Published On - 8:34 pm, Tue, 24 November 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ