ನಿವಾರ್ ಚಂಡಮಾರುತ ಎದುರಿಸಲು ಸನ್ನದ್ಧ ಸ್ಥಿತಿಯಲ್ಲಿ ಎನ್​ಡಿಆರ್​ಎಫ್

ನಿವರ್ ಚಂಡಮಾರುತ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸುಮಾರು 1,200 ಕ್ಕೂ ಹೆಚ್ಚು ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ (ಎನ್​ಡಿಆರ್​ಎಫ್) ಸಿಬ್ಬಂದಿಯನ್ನು ತಮಿಳುನಾಡು, ಆಂಧ್ರ ಪ್ರದೇಶ ಮತ್ತು ಪುದುಚೆರಿ ಕರಾವಳಿ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ ಹಾಗೂ ಇನ್ನೂ 800 ರಷ್ಟು ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿರಿಸಲಾಗಿದೆ ಎಂದು ಎನ್​ಡಿಆರ್​ಎಫ್ ಮುಖ್ಯಸ್ಥ ಎಸ್ ಎನ್ ಪ್ರಧಾನ್ ಹೇಳಿದ್ದಾರೆ. ನಿವರ್ ಚಂಡಮಾರುತವು ಈ ರಾಜ್ಯಗಳ ಕರಾವಳಿ ಪ್ರದೇಶವನ್ನು ಬುಧವಾರದಂದು ಅಪ್ಪಳಿಸಲಿದೆ. ನಿವರ್ ಚಂಡಮಾರುತ ಎಷ್ಟೇ ತೀವ್ರಗೊಂಡರೂ ಅದು ಸೃಷ್ಟಿಸಬಹುದಾದ ಅಪಾಯಕಾರಿ ಸ್ಥಿತಿಯನ್ನು ಎದುರಿಸಲು ಎನ್​ಡಿಆರ್​ಎಫ್ ಸಿದ್ಧವಾಗಿದೆಯೆಂದು […]

ನಿವಾರ್ ಚಂಡಮಾರುತ ಎದುರಿಸಲು ಸನ್ನದ್ಧ ಸ್ಥಿತಿಯಲ್ಲಿ ಎನ್​ಡಿಆರ್​ಎಫ್
ಅರುಣ್​ ಕುಮಾರ್​ ಬೆಳ್ಳಿ Edited By: ಆಯೇಷಾ ಬಾನು

Updated on: Nov 25, 2020 | 8:33 AM

ನಿವರ್ ಚಂಡಮಾರುತ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸುಮಾರು 1,200 ಕ್ಕೂ ಹೆಚ್ಚು ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ (ಎನ್​ಡಿಆರ್​ಎಫ್) ಸಿಬ್ಬಂದಿಯನ್ನು ತಮಿಳುನಾಡು, ಆಂಧ್ರ ಪ್ರದೇಶ ಮತ್ತು ಪುದುಚೆರಿ ಕರಾವಳಿ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ ಹಾಗೂ ಇನ್ನೂ 800 ರಷ್ಟು ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿರಿಸಲಾಗಿದೆ ಎಂದು ಎನ್​ಡಿಆರ್​ಎಫ್ ಮುಖ್ಯಸ್ಥ ಎಸ್ ಎನ್ ಪ್ರಧಾನ್ ಹೇಳಿದ್ದಾರೆ. ನಿವರ್ ಚಂಡಮಾರುತವು ಈ ರಾಜ್ಯಗಳ ಕರಾವಳಿ ಪ್ರದೇಶವನ್ನು ಬುಧವಾರದಂದು ಅಪ್ಪಳಿಸಲಿದೆ.

ನಿವರ್ ಚಂಡಮಾರುತ ಎಷ್ಟೇ ತೀವ್ರಗೊಂಡರೂ ಅದು ಸೃಷ್ಟಿಸಬಹುದಾದ ಅಪಾಯಕಾರಿ ಸ್ಥಿತಿಯನ್ನು ಎದುರಿಸಲು ಎನ್​ಡಿಆರ್​ಎಫ್ ಸಿದ್ಧವಾಗಿದೆಯೆಂದು ಪ್ರಧಾನ್ ಹೇಳಿದ್ದಾರೆ. ಪ್ರಸ್ತುತವಾಗಿ ಈ ಚಂಡಮಾರುತವು ಬಂಗಾಳ ಕೊಲ್ಲಿಯಿಂದ ನೈಋತ್ಯ ಕರಾವಳಿ ಪ್ರದೇಶದತ್ತ ಮುನ್ನುಗ್ಗುತ್ತಿದೆ.

‘‘ಚಂಡಮಾರುತದ ಚಲನೆಯನ್ನ್ನು ನಾವು ಸೂಕ್ಷ್ಮವಾಗಿ ಆವಲೋಕಿಸುತ್ತಿದ್ದೇವೆ ಮತ್ತು ಅದರಿಂದ ಪ್ರಭಾವಕ್ಕೊಳಗಾಗಲಿರುವ ರಾಜ್ಯಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇವೆ,’’ ಎಂದು , ಪ್ರಧಾನ್ ಚೆನೈಯಲ್ಲಿ ನಡೆಸಿದ ಸುದ್ದಿಗೋಷ್ಠಿಯೊಂದರಲ್ಲಿ ಹೇಳಿದ್ದಾರೆ.

‘‘ಕರಾವಳಿ ಪ್ರದೇಶದಲ್ಲಿ ತೀವ್ರ ಗತಿಯಲ್ಲಿ ಉಲ್ಬಣಿಸುತ್ತಿರುವ ಸ್ಥಿತಿಯನ್ನು ನಾವು ಗಮನಿಸುತ್ತಿದ್ದೇವೆ. ಮುಂದಿನ ಕೆಲ ಗಂಟೆಗಳಲ್ಲಿ ಅದು ಗಂಟೆಗೆ 120 ರಿಂದ 130 ಕಿ. ಮೀ ವೇಗ ಪಡೆದುಕೊಂಡು ಅಪ್ಪಳಿಸುವ ಸಾಧ್ಯತೆಯಿದೆ, ಆದರೆ ಜನರು ಭೀತಿಗೊಳಗಾಗುವ ಅವಶ್ಯಕತೆಯಿಲ್ಲ. ಪರಿಸ್ಥಿತಿಯನ್ನು ಎದುರಿಸಲು ನಾವು ಸನ್ನದ್ಧರಾಗಿದ್ದೇವೆ,’’ ಎಂದು ಪ್ರಧಾನ್ ಹೇಳಿದರು.

Published On - 8:34 pm, Tue, 24 November 20

Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Follow Us