AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone Shaheen: ಅ. 1ಕ್ಕೆ ಅಪ್ಪಳಿಸಲಿದೆ ಶಾಹೀನ್ ಚಂಡಮಾರುತ; ಈ ರಾಜ್ಯಗಳಲ್ಲಿ ಹೈ ಅಲರ್ಟ್

Shaheen Cyclone | ಪಶ್ಚಿಮ ಬಂಗಾಳ, ಗುಜರಾತ್ ಕರಾವಳಿ ತೀರದಲ್ಲಿ ಶಾಹೀನ್ ಚಂಡಮಾರುತದ ಪರಿಣಾಮದಿಂದ ಶುಕ್ರವಾರ ವಿಪರೀತ ಮಳೆಯಾಗಲಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ.

Cyclone Shaheen: ಅ. 1ಕ್ಕೆ ಅಪ್ಪಳಿಸಲಿದೆ ಶಾಹೀನ್ ಚಂಡಮಾರುತ; ಈ ರಾಜ್ಯಗಳಲ್ಲಿ ಹೈ ಅಲರ್ಟ್
ಐಎಂಡಿ ವಿಜ್ಞಾನಿ ಆರ್​.ಕೆ. ಜೇನಮಣಿ
TV9 Web
| Edited By: |

Updated on: Sep 29, 2021 | 9:13 PM

Share

ನವದೆಹಲಿ: ಗುಲಾಬ್ ಚಂಡಮಾರುತದ ಅಬ್ಬರ ಕೊಂಚ ಕಡಿಮೆಯಾಗುತ್ತಿರುವ ಬೆನ್ನಲ್ಲೇ (Cyclone Gulab) ಶಾಹೀನ್ ಚಂಡಮಾರುತ (Cyclone Shaheen) ಅಪ್ಪಳಿಸಲು ಸಿದ್ಧವಾಗಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾದ ಗುಲಾಬ್ ಚಂಡಮಾರುತವೇ ಅರಬ್ಬಿ ಸಮುದ್ರದಲ್ಲಿ ಶಾಹೀನ್ ಚಂಡಮಾರುತವಾಗಿ ಮರುರೂಪ ಪಡೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಕ್ಟೋಬರ್ 1ರಂದು ಶಾಹೀನ್ ಚಂಡಮಾರುತ ಅಪ್ಪಳಿಸಲಿದ್ದು, ಭಾರತದ ಪೂರ್ವ ಹಾಗೂ ಪಶ್ಚಿಮ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ.

ಪಶ್ಚಿಮ ಬಂಗಾಳ ಮತ್ತು ಸುತ್ತಮುತ್ತಲಿನ ಭಾಗಗಳಲ್ಲಿ ಶಾಹೀನ್ ಚಂಡಮಾರುತದ ಪರಿಣಾಮದಿಂದ ಶುಕ್ರವಾರ ವಿಪರೀತ ಮಳೆಯಾಗಲಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ. ಈ ಚಂಡಮಾರುತದ ಪರಿಣಾಮ ಕರ್ನಾಟಕದ ಮೇಲೂ ಇರಲಿದೆ. ಆದರೆ, ಗುಜರಾತ್ ಕರಾವಳಿ ತೀರದಲ್ಲಿ ಇದರ ಪರಿಣಾಮ ಹೆಚ್ಚಾಗಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಗುಲಾಬ್ ಚಂಡಮಾರುತ ಶಾಹೀನ್ ಚಂಡಮಾರುತದ ರೂಪ ತಳೆದು ಮತ್ತೆ ಅಪ್ಪಳಿಸಲಿದೆ. ಈ ಬಗ್ಗೆ ಮಾಹಿತಿ ನೀಡಿರುವ ಹವಾಮಾನ ಇಲಾಖೆ, ಅರಬ್ಬಿ ಸಮುದ್ರದ ನೈಋತ್ಯ ಭಾಗದಲ್ಲಿ ಹಾಗೂ ಗುಜರಾತ್ ಕರಾವಳಿ ಪ್ರದೇಶದ ಸುತ್ತಮುತ್ತಲಿನ ಭಾಗಗಳಲ್ಲಿ ಅ. 1ರಂದು ಶಾಹೀನ್ ಚಂಡಮಾರುತ ಅಬ್ಬರಿಸುವ ಸಾಧ್ಯತೆ ಹೆಚ್ಚಾಗಿದೆ ಎಂದಿದೆ.

ಶಾಹೀನ್ ಚಂಡಮಾರುತ ಅಪ್ಪಳಿಸುವ ಹಿನ್ನೆಲೆಯಲ್ಲಿ ಗುಜರಾತ್​ನಲ್ಲಿ ಈಗಾಗಲೇ ಗಾಳಿ, ಮಳೆ ಹೆಚ್ಚಾಗಿದೆ. ಸೆ. 30ರಿಂದ ಅ. 2ರವರೆಗೂ ಶಾಹೀನ್ ಚಂಡಮಾರುತದ ಅಬ್ಬರ ಹೆಚ್ಚಾಗಿರಲಿದೆ. ಇನ್ನು ಎರಡು ದಿನಗಳಲ್ಲಿ ಗುಲಾಬ್ ಚಂಡಮಾರುತ ಶಾಹೀನ್ ಚಂಡಮಾರುತವಾಗಿ ಮರುರೂಪ ಪಡೆಯಲಿದ್ದು, ಕತಾರ್ ಈ ಶಾಹೀನ್ ಚಂಡಮಾರುತ ಎಂಬ ಹೆಸರನ್ನು ನೀಡಿದೆ.

ಶಾಹೀನ್ ಚಂಡಮಾರುತದ ಪರಿಣಾಮದಿಂದ ಗುಜರಾತ್, ಮಹಾರಾಷ್ಟ್ರ, ಕೊಂಕಣ, ಮರಾಠವಾಡ ಮತ್ತು ಗೋವಾ ಭಾಗದಲ್ಲಿ ವಿಪರೀತ ಮಳೆಯಾಗಲಿದೆ. ಹಾಗೇ, ಪಶ್ಚಿಮ ಬಂಗಾಳ. ಮರಾಠವಾಡ, ಸೌರಾಷ್ಟ್ರ, ಕಚ್, ಮಧ್ಯಪ್ರದೇಶ, ವಿದರ್ಭ, ಛತ್ತೀಸ್​ಗಢ, ಜಾರ್ಖಂಡ್, ಆಂಧ್ರಪ್ರದೇಶ, ಕರ್ನಾಟಕದ ಕರಾವಳಿ ಪ್ರದೇಶ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ. ಜೊತೆಗೆ ತೆಲಂಗಾಣ, ತಮಿಳುನಾಡು, ಕೇರಳ, ಪುದುಚೆರಿ, ಮಾಹೆಯಲ್ಲಿ ಕೂಡ ಶಾಹೀನ್ ಚಂಡಮಾರುತದ ಪರಿಣಾಮದಿಂದ ಅಲ್ಲಲ್ಲಿ ಮಳೆಯಾಗಲಿದೆ.

ಇದನ್ನೂ ಓದಿ: Cyclone Shaheen: ಗುಲಾಬ್ ಚಂಡಮಾರುತದ ಬೆನ್ನಲ್ಲೇ ಶಾಹೀನ್ ಸೈಕ್ಲೋನ್ ಭೀತಿ; ಕರ್ನಾಟಕದಲ್ಲಿ ಮತ್ತೆ ಭಾರೀ ಮಳೆ ಸಾಧ್ಯತೆ

Cyclone Gulab ಅಬ್ಬರಿಸಿದ ಗುಲಾಬ್ ಚಂಡಮಾರುತ: ಆಂಧ್ರ ಪ್ರದೇಶದ ಇಬ್ಬರು ಮೀನುಗಾರರು ಸಾವು, ಒಬ್ಬ ನಾಪತ್ತೆ

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ