AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone Tauktae: ಗೋವಾದಲ್ಲಿ ತೌಕ್ತೆ ಚಂಡಮಾರುತದ ಅಬ್ಬರಕ್ಕೆ 200ಕ್ಕಿಂತಲೂ ಹೆಚ್ಚು ಮನೆಗಳಿಗೆ ಹಾನಿ, ಇಬ್ಬರು ಸಾವು

ಮುಂದಿನ 24 ಗಂಟೆಗಳಲ್ಲಿ ತೀವ್ರವಾದ ಚಂಡಮಾರುತವು ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ. ಮೇ 18 ರ ಮುಂಜಾನೆ ಪೋರ್ ಬಂದರ್ ಮತ್ತು ಮಾಹುವಾ (ಭಾವನಗರ ಜಿಲ್ಲೆ) ನಡುವೆ ಗುಜರಾತ್ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

Cyclone Tauktae: ಗೋವಾದಲ್ಲಿ ತೌಕ್ತೆ ಚಂಡಮಾರುತದ ಅಬ್ಬರಕ್ಕೆ 200ಕ್ಕಿಂತಲೂ ಹೆಚ್ಚು ಮನೆಗಳಿಗೆ ಹಾನಿ, ಇಬ್ಬರು ಸಾವು
ಗೋವಾದಲ್ಲಿ ತೌಕ್ತೆ ಅಬ್ಬರ
ರಶ್ಮಿ ಕಲ್ಲಕಟ್ಟ
|

Updated on: May 16, 2021 | 8:10 PM

Share

ಪಣಜಿ: ತೌಕ್ತೆ ಚಂಡಮಾರುತದಿಂದಾಗಿ ಇಬ್ಬರು ಪ್ರತ್ಯೇಕ ಘಟನೆಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಭಾರಿ ಮಳೆ ಮತ್ತು ಬಲವಾದ ಗಾಳಿಯಿಂದ ಬಿದ್ದ ಬೃಹತ್ ಮರದ ಕೆಳಗೆ ಬಿದ್ದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದರೆ, ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಇನ್ನೊಬ್ಬ ವ್ಯಕ್ತಿಯ ಮೇಲೆ ವಿದ್ಯುತ್ ಕಂಬ ಬಿದ್ದಿದೆ. ಗೋವಾದಲ್ಲಿ ಎರಡು ಸಾವುಗಳು ವರದಿಯಾಗಿವೆ. 500 ಕ್ಕೂ ಹೆಚ್ಚು ಮರಗಳು ಬಿದ್ದಿವೆ. ಸುಮಾರು 100 ದೊಡ್ಡಮನೆಗಳು ಮತ್ತು 100 ಸಣ್ಣ ಮನೆಗಳು ಹಾನಿಗೊಂಡಿವೆ. ರಸ್ತೆ ಸಂಚಾರಕ್ಕೆ ನಿರ್ಬಂಧಿಸಲಾಗಿದೆ. ವಿದ್ಯುತ್ ಸರಬರಾಜಿನಲ್ಲಿ ಅಡ್ಡಿಯಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.

ಗೋವಾದ ಹೆಚ್ಚಿನ ಭಾಗಗಳಲ್ಲಿ ಪ್ರಸ್ತುತ ವಿದ್ಯುತ್ ವ್ಯತ್ಯಯವಾಗಿದ್ದು ಇದನ್ನು ಪುನಸ್ಥಾಪಿಸಲು ಎರಡು ದಿನಗಳು ಬೇಕಾಗುತ್ತದೆ. ಭಾರಿ ಮಳೆ ಮತ್ತು ಅತಿ ವೇಗದ ಗಾಳಿಯು ಮೇ 17 ರವರೆಗೆ ಮುಂದುವರಿಯಲಿದೆ ಎಂದು ಸಿಎಂ ಪ್ರಮೋದ್ ಸಾವಂತ್ ಹೇಳಿದ್ದು ಜನರು ತಮ್ಮ ಮನೆಗಳಿಂದ ಹೊರಹೋಗದಂತೆ ಮನವಿ ಮಾಡಿದರು.

ಏತನ್ಮಧ್ಯೆ. ಆಸ್ಪತ್ರೆಗಳೊಳಗಿನ ವಿದ್ಯುತ್ ಸರಬರಾಜಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ಮುಖ್ಯಮಂತ್ರಿ ಹೇಳಿದರು. “ಜಿಎಂಸಿ (ಗೋವಾ ಮೆಡಿಕಲ್ ಕಾಲೇಜ್) ನಲ್ಲಿ, 15 ನಿಮಿಷಗಳ ಕಾಲ ವಿದ್ಯುತ್ ಕಡಿತ ಉಂಟಾಯಿತು, ಆದರೆ ವಿದ್ಯುತ್ ಬ್ಯಾಕ್ ಅಪ್ ಇತ್ತು. ಆಮ್ಲಜನಕದ ಕೊರತೆಯಿಲ್ಲ” ಎಂದು ಅವರು ಹೇಳಿದರು.

ಪಶ್ಚಿಮ ಮಹಾರಾಷ್ಟ್ರದ ಸಂಪೂರ್ಣ ಕೊಂಕಣ ಭಾಗ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ, ಮುಖ್ಯವಾಗಿ ಕೊಲ್ಹಾಪುರ ಮತ್ತು ಸತಾರದಲ್ಲಿ ಭಾನುವಾರ ಮತ್ತು ಸೋಮವಾರದಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಭಾಗದಲ್ಲಿ ಭಾರತೀಯ ಹವಾಮಾನ ಇಲಾಖೆ ‘ಆರಂಜ್ ಅಲರ್ಟ್’ ಹೊರಡಿಸಿದೆ . ಅಂದರೆ ಪ್ರಸ್ತುತ, ಚಂಡಮಾರುತವು ಮುಂಬೈನಿಂದ 480 ಕಿ.ಮೀ ದೂರದಲ್ಲಿದೆ ಮತ್ತು ಸಂಜೆಯ ವೇಳೆಗೆ ನಗರವನ್ನು ಅಪ್ಪಳಿಸುವ ನಿರೀಕ್ಷೆಯಿದೆ.

ಗೋವಾ ದಾಟಿದ ನಂತರ ರತ್ನಾಗಿರಿ ಮೂಲಕ ಹಾದುಹೋಗಲಿದೆ ಚಂಡಮಾರುತ ತೌಕ್ತೆ ಚಂಡಮಾರುತ ಗೋವಾವನ್ನು ದಾಟಿದೆ. ಅದು ಈಗ ರತ್ನಾಗಿರಿ ಬಳಿ ಇದೆ ಎಂದು ಮುಂಬೈ ಮೇಯರ್ ಕಿಶೋರಿ ಪೆಡ್ನೆಕರ್ ಮಾಹಿತಿ ನೀಡಿದ್ದಾರೆ.  ನಾವು ಪರಿಸ್ಥಿತಿಯ ಮೇಲ್ವಿಚಾರಣೆ ಮಾಡುತ್ತಿದ್ದೇವೆ. ಈ ಚಂಡಮಾರುತವು ದೊಡ್ಡ ಸಮಸ್ಯೆಯನ್ನು ಸೃಷ್ಟಿಸುತ್ತದೆ. ಜೀವರಕ್ಷಕರು ಸೇರಿದಂತೆ ನಮ್ಮ ತಂಡಗಳನ್ನು ಸಮುದ್ರದ ಬಳಿ ನಿಯೋಜಿಸಲಾಗಿದೆ. ನಾವು ಎಲ್ಲಾ ಬೃಹತ್ ಮರಗಳನ್ನು ಕತ್ತರಿಸಿದ್ದೇವೆ ಮತ್ತು ಪೊಲೀಸರು ಗಸ್ತು ತಿರುಗುತ್ತಿದ್ದಾರೆ ಎಂದು ಕಿಶೋರಿ ಪೆಡ್ನೇಕರ್ ಹೇಳಿದರು.

ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ಒಂದು ಸಾವು 71 ಮನೆಗಳಿಗೆ ಹಾನಿ ಚಂಡಮಾರುತದಿಂದಾಗಿ ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ 71 ಮನೆಗಳು, 76 ಮೀನುಗಾರಿಕಾ ದೋಣಿಗಳು, ಮತ್ತು 271 ವಿದ್ಯುತ್ ಕಂಬಗಳು ಹಾನಿಗೀಡಾಗಿ ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕರ್ನಾಟಕ ಸಚಿವ ಶಿವರಾಮ್ ಹೆಬ್ಬಾರ್ ಮಾಹಿತಿ ನೀಡಿದರು.

ಮೇ 18 ರ ಮುಂಜಾನೆ ಗುಜರಾತ್ ಕರಾವಳಿಯನ್ನು ದಾಟಲಿದೆ ತೌಕ್ತೆ ಮುಂದಿನ 24 ಗಂಟೆಗಳಲ್ಲಿ ತೀವ್ರವಾದ ಚಂಡಮಾರುತವು ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ. ಮೇ 18 ರ ಮುಂಜಾನೆ ಪೋರ್ ಬಂದರ್ ಮತ್ತು ಮಾಹುವಾ (ಭಾವನಗರ ಜಿಲ್ಲೆ) ನಡುವೆ ಗುಜರಾತ್ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಕೇರಳದಲ್ಲಿ ಮಳೆ  ಮುಂದುವರಿದಿದ್ದು ಆಲಪ್ಪುಳಂ ಜಿಲ್ಲೆಯ ತಗ್ಗು ಪ್ರದೇಶಗಳು  ಜಲಾವೃತವಾಗಿವೆ.

ಇದನ್ನೂ ಓದಿ:  ಉಡುಪಿಯಲ್ಲಿ ತೌಕ್ತೆ ಚಂಡಮಾರುತ ಅಬ್ಬರ; 40 ಮನೆಗಳಿಗೆ ಹಾನಿ

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್