Cyclone Tauktae Photos: ತೌಕ್ತೆ ಚಂಡಮಾರುತದ ಪ್ರತಾಪ; ಇಲ್ಲಿದೆ ಚಂಡಮಾರುತದ ಇಂದಿನ ಚಿತ್ರಣ

| Updated By: Digi Tech Desk

Updated on: May 15, 2021 | 10:23 PM

ಈ ವರ್ಷದ ಮೊದಲ ಚಂಡಮಾರುತ ತೌಕ್ತೆಯ ಪ್ರಭಾವ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾಣುತ್ತಿದೆ. ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಬೆಳಗ್ಗೆಯಿಂದಲೇ ಮೋಡಕವಿವ ವಾತಾವರಣ ಇದ್ದು, ಮಧ್ಯಾಹ್ನದಿಂದಲೇ ಮಳೆ ಶುರುವಾಗಿದೆ. (ಚಿತ್ರಕೃಪೆ: ಪಿಟಿಐ)

1 / 9
ಈ ವರ್ಷದ ಮೊದಲ ಚಂಡಮಾರುತ ತೌಕ್ತೆಯ ಪ್ರಭಾವ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾಣುತ್ತಿದೆ. ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಬೆಳಗ್ಗೆಯಿಂದಲೇ ಮೋಡಕವಿವ ವಾತಾವರಣ ಇದ್ದು, ಮಧ್ಯಾಹ್ನದಿಂದಲೇ ಮಳೆ ಶುರುವಾಗಿದೆ. (ಚಿತ್ರಕೃಪೆ: ಪಿಟಿಐ)

ಈ ವರ್ಷದ ಮೊದಲ ಚಂಡಮಾರುತ ತೌಕ್ತೆಯ ಪ್ರಭಾವ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾಣುತ್ತಿದೆ. ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಬೆಳಗ್ಗೆಯಿಂದಲೇ ಮೋಡಕವಿವ ವಾತಾವರಣ ಇದ್ದು, ಮಧ್ಯಾಹ್ನದಿಂದಲೇ ಮಳೆ ಶುರುವಾಗಿದೆ. (ಚಿತ್ರಕೃಪೆ: ಪಿಟಿಐ)

2 / 9
ಉಡುಪಿಯಲ್ಲಿ ನಾಳೆ ಬೆಳಗ್ಗೆವರೆಗೆ ರೆಡ್​ ಅಲರ್ಟ್​ ಇದ್ದು, ಮುಂದಿನ ಎರಡು ದಿನಗಳು ಅಂದರೆ ಮೇ 17ರವರೆಗೆ ಆರೆಂಜ್​ ಅಲರ್ಟ್ ಜಾರಿಯಲ್ಲಿರಲಿದೆ. ಇನ್ನೆರಡು ದಿನವೂ 65-115 ಮಿಮೀ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರಿಕೆಗೆ ತೆರಳದಂತೆ ಉಡುಪಿ ಜಿಲ್ಲಾಡಳಿತ ಖಡಕ್​ ಸೂಚನೆ ನೀಡಿದೆ. ಸಮುದ್ರ, ನದಿ ತೀರಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.  (ಚಿತ್ರಕೃಪೆ: ಪಿಟಿಐ)

ಉಡುಪಿಯಲ್ಲಿ ನಾಳೆ ಬೆಳಗ್ಗೆವರೆಗೆ ರೆಡ್​ ಅಲರ್ಟ್​ ಇದ್ದು, ಮುಂದಿನ ಎರಡು ದಿನಗಳು ಅಂದರೆ ಮೇ 17ರವರೆಗೆ ಆರೆಂಜ್​ ಅಲರ್ಟ್ ಜಾರಿಯಲ್ಲಿರಲಿದೆ. ಇನ್ನೆರಡು ದಿನವೂ 65-115 ಮಿಮೀ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರಿಕೆಗೆ ತೆರಳದಂತೆ ಉಡುಪಿ ಜಿಲ್ಲಾಡಳಿತ ಖಡಕ್​ ಸೂಚನೆ ನೀಡಿದೆ. ಸಮುದ್ರ, ನದಿ ತೀರಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. (ಚಿತ್ರಕೃಪೆ: ಪಿಟಿಐ)

3 / 9
ಚಂಡಮಾರುತದ ಎಚ್ಚರಿಕೆ ನೀಡಿದ್ದರೂ ಅದನ್ನು ಲೆಕ್ಕಿಸದೆ ಸಮುದ್ರಕ್ಕೆ ಇಳಿದ ದೋಣಿ ಮುಳುಗಡೆಯಾಗಿದೆ. ಈ ಅಲಾಯನ್ಸ್ ಎಂಬ ಹೆಸರಿನ ವಿಗ್ಗ್ ಬೋಟ್​​​ ಎಂಆರ್​ಪಿಎಲ್​ ಕಚ್ಚಾತೈಲ ಹಡಗಿನ ಪೈಪ್​ಲೈನ್​ ನಿರ್ವಹಣೆ ಮಾಡುತ್ತಿದ್ದ ದೋಣಿಯಾಗಿತ್ತು. ಒಟ್ಟು 9 ಜನರು ಸಮುದ್ರಕ್ಕೆ ಇಳಿದಿದ್ದರು. ಇದೀಗ 7ಮಂದಿ ನಾಪತ್ತೆಯಾಗಿದ್ದಾರೆ.  (ಚಿತ್ರಕೃಪೆ: ಪಿಟಿಐ)

ಚಂಡಮಾರುತದ ಎಚ್ಚರಿಕೆ ನೀಡಿದ್ದರೂ ಅದನ್ನು ಲೆಕ್ಕಿಸದೆ ಸಮುದ್ರಕ್ಕೆ ಇಳಿದ ದೋಣಿ ಮುಳುಗಡೆಯಾಗಿದೆ. ಈ ಅಲಾಯನ್ಸ್ ಎಂಬ ಹೆಸರಿನ ವಿಗ್ಗ್ ಬೋಟ್​​​ ಎಂಆರ್​ಪಿಎಲ್​ ಕಚ್ಚಾತೈಲ ಹಡಗಿನ ಪೈಪ್​ಲೈನ್​ ನಿರ್ವಹಣೆ ಮಾಡುತ್ತಿದ್ದ ದೋಣಿಯಾಗಿತ್ತು. ಒಟ್ಟು 9 ಜನರು ಸಮುದ್ರಕ್ಕೆ ಇಳಿದಿದ್ದರು. ಇದೀಗ 7ಮಂದಿ ನಾಪತ್ತೆಯಾಗಿದ್ದಾರೆ. (ಚಿತ್ರಕೃಪೆ: ಪಿಟಿಐ)

4 / 9
ತೌಕ್ತೆ ಚಂಡಮಾರುತ ಈಗ ಲಕ್ಷದ್ವೀಪದಲ್ಲಿ ಕೇಂದ್ರೀಕೃತವಾಗಿದ್ದು, ಕರ್ನಾಟಕದತ್ತ ಬರುತ್ತಿದೆ. ಇಂದು ರಾತ್ರಿ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ ಜಿಲ್ಲೆಗೆ ತಲುಪಲಿದೆ. ಮೇ 17 ರವರೆಗೆ ಇರಲಿದೆ ಎಂಬ ಮಾಹಿತಿ ಇದೆ. ಈ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಕೊಡಲಾಗಿದೆ.  (ಚಿತ್ರಕೃಪೆ: ಪಿಟಿಐ)

ತೌಕ್ತೆ ಚಂಡಮಾರುತ ಈಗ ಲಕ್ಷದ್ವೀಪದಲ್ಲಿ ಕೇಂದ್ರೀಕೃತವಾಗಿದ್ದು, ಕರ್ನಾಟಕದತ್ತ ಬರುತ್ತಿದೆ. ಇಂದು ರಾತ್ರಿ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ ಜಿಲ್ಲೆಗೆ ತಲುಪಲಿದೆ. ಮೇ 17 ರವರೆಗೆ ಇರಲಿದೆ ಎಂಬ ಮಾಹಿತಿ ಇದೆ. ಈ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಕೊಡಲಾಗಿದೆ. (ಚಿತ್ರಕೃಪೆ: ಪಿಟಿಐ)

5 / 9
ಸಮುದ್ರದ ಅಲೆ

ಸಮುದ್ರದ ಅಲೆ

6 / 9
ಹಾಗೇ ಚಂಡಮಾರುತ ತಂದ ಮಳೆಯ ಅಬ್ಬರದ ಮಧ್ಯೆ ರೈತನೊಬ್ಬ ಇಂದು ಮೃತಪಟ್ಟಿದ್ದಾನೆ. ವಿದ್ಯುತ್​ ತಂತಿ ಸ್ಪರ್ಶಿಸಿದ ಕಾಪು ತಾಲೂಕಿನ ರೈತ ರಮೇಶ್ ಮೃತಪಟ್ಟಿದ್ದಾರೆ.  (ಚಿತ್ರಕೃಪೆ: ಪಿಟಿಐ)

ಹಾಗೇ ಚಂಡಮಾರುತ ತಂದ ಮಳೆಯ ಅಬ್ಬರದ ಮಧ್ಯೆ ರೈತನೊಬ್ಬ ಇಂದು ಮೃತಪಟ್ಟಿದ್ದಾನೆ. ವಿದ್ಯುತ್​ ತಂತಿ ಸ್ಪರ್ಶಿಸಿದ ಕಾಪು ತಾಲೂಕಿನ ರೈತ ರಮೇಶ್ ಮೃತಪಟ್ಟಿದ್ದಾರೆ. (ಚಿತ್ರಕೃಪೆ: ಪಿಟಿಐ)

7 / 9
ಕರ್ನಾಟಕದಲ್ಲಿ ತಗ್ಗು ಪ್ರದೇಶದ ಜನರನ್ನು ಸ್ಥಳಾಂತರಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ. 10 ಸಾವಿರ ಜನರನ್ನು ಸುರಕ್ಷತಾ ಕ್ಯಾಂಪ್​ಗಳಲ್ಲಿ ಇರಿಸಲು ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ಆಹಾರ, ವಸ್ತು ಶೇಖರಣೆಗೆ ಸೂಚನೆ ನೀಡಲಾಗಿದೆ.  (ಚಿತ್ರಕೃಪೆ: ಪಿಟಿಐ)

ಕರ್ನಾಟಕದಲ್ಲಿ ತಗ್ಗು ಪ್ರದೇಶದ ಜನರನ್ನು ಸ್ಥಳಾಂತರಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ. 10 ಸಾವಿರ ಜನರನ್ನು ಸುರಕ್ಷತಾ ಕ್ಯಾಂಪ್​ಗಳಲ್ಲಿ ಇರಿಸಲು ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ಆಹಾರ, ವಸ್ತು ಶೇಖರಣೆಗೆ ಸೂಚನೆ ನೀಡಲಾಗಿದೆ. (ಚಿತ್ರಕೃಪೆ: ಪಿಟಿಐ)

8 / 9
ಸೈಕ್ಲೋನ್ ತೌಕ್ತೆ

ಸೈಕ್ಲೋನ್ ತೌಕ್ತೆ

9 / 9
ಪಕ್ಕದ ಕೇರಳ ರಾಜ್ಯದಲ್ಲೂ ತೌಕ್ತೆ ಚಂಡಮಾರುತದ ಅಬ್ಬರ ಜೋರಾಗಿದೆ.  (ಚಿತ್ರಕೃಪೆ: ಪಿಟಿಐ)

ಪಕ್ಕದ ಕೇರಳ ರಾಜ್ಯದಲ್ಲೂ ತೌಕ್ತೆ ಚಂಡಮಾರುತದ ಅಬ್ಬರ ಜೋರಾಗಿದೆ. (ಚಿತ್ರಕೃಪೆ: ಪಿಟಿಐ)

Published On - 10:10 pm, Sat, 15 May 21