AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone Tej: ಮುಂಬೈಗೆ ಅಪ್ಪಳಿಸಲಿದೆ ತೇಜ್ ಚಂಡಮಾರುತ, 2 ದಿನ ನಿರ್ಣಾಯಕ ಎಂದ ಹವಾಮಾನ ಇಲಾಖೆ

ಮುಂಬೈಗೆ ‘ತೇಜ್ ಚಂಡಮಾರುತ’ (Tej Cyclone)ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಿದ್ದು, ಇನ್ನೆರಡು-ಮೂರು ದಿನಗಳಲ್ಲಿ ಪ್ರಬಲ ಚಂಡಮಾರುತವಾಗಿ ಬದಲಾಗುವ ನಿರೀಕ್ಷಿಯಿದೆ. ಈ ಚಂಡಮಾರುತವು ಯಾವ ತೀವ್ರತೆಯೊಂದಿಗೆ ಬರಬಹುದೆಂದು ಇನ್ನೂ ಊಹಿಸಲು ಸಾಧ್ಯವಿಲ್ಲ, ಆದರೆ ಭಾರತೀಯ ಹವಾಮಾನ ಇಲಾಖೆ (IMD) ಇದು ಕ್ರಮೇಣ ಬಲಗೊಳ್ಳಬಹುದು ಎಂದು ಹೇಳಿದೆ.

Cyclone Tej: ಮುಂಬೈಗೆ ಅಪ್ಪಳಿಸಲಿದೆ ತೇಜ್ ಚಂಡಮಾರುತ, 2 ದಿನ ನಿರ್ಣಾಯಕ ಎಂದ ಹವಾಮಾನ ಇಲಾಖೆ
ಚಂಡಮಾರುತImage Credit source: Britannica
ನಯನಾ ರಾಜೀವ್
|

Updated on: Oct 19, 2023 | 11:47 AM

Share

ಮುಂಬೈಗೆ ‘ತೇಜ್ ಚಂಡಮಾರುತ’ (Tej Cyclone)ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಿದ್ದು, ಇನ್ನೆರಡು-ಮೂರು ದಿನಗಳಲ್ಲಿ ಪ್ರಬಲ ಚಂಡಮಾರುತವಾಗಿ ಬದಲಾಗುವ ನಿರೀಕ್ಷಿಯಿದೆ. ಈ ಚಂಡಮಾರುತವು ಯಾವ ತೀವ್ರತೆಯೊಂದಿಗೆ ಬರಬಹುದೆಂದು ಇನ್ನೂ ಊಹಿಸಲು ಸಾಧ್ಯವಿಲ್ಲ, ಆದರೆ ಭಾರತೀಯ ಹವಾಮಾನ ಇಲಾಖೆ (IMD) ಇದು ಕ್ರಮೇಣ ಬಲಗೊಳ್ಳಬಹುದು ಎಂದು ಹೇಳಿದೆ.

ಸದ್ಯ ಹವಾಮಾನ ಇಲಾಖೆ ಈ ಬಗ್ಗೆ ನಿರಂತರ ನಿಗಾ ಇರಿಸಿದೆ. ಅದೇ ಸಮಯದಲ್ಲಿ, ಅರಬ್ಬಿ ಸಮುದ್ರದಲ್ಲಿನ ಪರಿಸ್ಥಿತಿಗಳು ಚಂಡಮಾರುತವಾಗಿ ಮಾರ್ಪಟ್ಟರೆ, ಗಾಳಿಯು ಗಂಟೆಗೆ 60 ಕಿಮೀ ವೇಗದಲ್ಲಿ ಬೀಸಲಿದೆ. ಅಕ್ಟೋಬರ್ 20ರ ವೇಳೆಗೆ ಕಡಿಮೆ ಒತ್ತಡ ಉಂಟಾಗುವ ಸಾಧ್ಯತೆ ಇದೆ. ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಉಂಟಾಗಿರುವ ಹಿನ್ನೆಲೆಯಲ್ಲಿ ಅಲ್ಲಿನ ಮೀನುಗಾರರು ದಡಕ್ಕೆ ಮರಳುವಂತೆ ಐಎಂಡಿ ಎಚ್ಚರಿಕೆ ನೀಡಿದೆ. ಮುಂದಿನ ಐದು ದಿನಗಳ ಕಾಲ ಬಹುತೇಕ ಭಾಗಗಳಲ್ಲಿ ಮಳೆಯ ವಾತಾವರಣ ಮುಂದುವರಿಯಬಹುದು.

ಮತ್ತಷ್ಟು ಓದಿ: Karnataka Rain: ಕರ್ನಾಟಕದ ಕರಾವಳಿಯಲ್ಲಿ ಅ.25ರವರೆಗೂ ಮಳೆ, ಈ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ ಹೆಚ್ಚಳ

ಕಡಿಮೆ ಒತ್ತಡದ ಪ್ರದೇಶವು ಇನ್ನೂ ಚಂಡಮಾರುತವಾಗಿ ಬದಲಾಗಿಲ್ಲ ಆದರೆ ಮುಂದಿನ 48 ಗಂಟೆ ನಿರ್ಣಾಯಕ ಎಂದು ಪರಿಗಣಿಸಲಾಗಿದೆ. ಒಂದು ವೇಳೆ ಚಂಡಮಾರುತ ತೇಜ್ ರೂಪುಗೊಂಡರೆ ಅದು ಕರಾವಳಿಯಿಂದ ಗುಜರಾತ್​ ಕಡೆಗೆ ಚಲಿಸಬಹುದು, ಚಂಡಮಾರುತವು ಮುಂಬೈ, ಪುಣೆಯಲ್ಲಿ ಬಿರುಗಾಳಿ ಸಹಿತ ಮಳೆಯನ್ನು ತರಬಹುದು ಎಂದು ಅಂದಾಜಿಸಲಾಗಿದೆ.

ಚಂಡಮಾರುತ ಪ್ರಭಾವದಿಂದಾಗಿ ಮುಂಬೈನಲ್ಲಿ ರಾತ್ರಿ ಉಷ್ಣಾಂಶ 22-23 ಡಿಗ್ರಿ ಸೆಲ್ಸಿಯಸ್​ ಇತ್ತು. ಚಂಡಮಾರುತದಿಂದಾಗಿ ದಕ್ಷಿಣ ಕೊಂಕಣದಲ್ಲಿ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ