AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone Tej: ಮುಂಬೈಗೆ ಅಪ್ಪಳಿಸಲಿದೆ ತೇಜ್ ಚಂಡಮಾರುತ, 2 ದಿನ ನಿರ್ಣಾಯಕ ಎಂದ ಹವಾಮಾನ ಇಲಾಖೆ

ಮುಂಬೈಗೆ ‘ತೇಜ್ ಚಂಡಮಾರುತ’ (Tej Cyclone)ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಿದ್ದು, ಇನ್ನೆರಡು-ಮೂರು ದಿನಗಳಲ್ಲಿ ಪ್ರಬಲ ಚಂಡಮಾರುತವಾಗಿ ಬದಲಾಗುವ ನಿರೀಕ್ಷಿಯಿದೆ. ಈ ಚಂಡಮಾರುತವು ಯಾವ ತೀವ್ರತೆಯೊಂದಿಗೆ ಬರಬಹುದೆಂದು ಇನ್ನೂ ಊಹಿಸಲು ಸಾಧ್ಯವಿಲ್ಲ, ಆದರೆ ಭಾರತೀಯ ಹವಾಮಾನ ಇಲಾಖೆ (IMD) ಇದು ಕ್ರಮೇಣ ಬಲಗೊಳ್ಳಬಹುದು ಎಂದು ಹೇಳಿದೆ.

Cyclone Tej: ಮುಂಬೈಗೆ ಅಪ್ಪಳಿಸಲಿದೆ ತೇಜ್ ಚಂಡಮಾರುತ, 2 ದಿನ ನಿರ್ಣಾಯಕ ಎಂದ ಹವಾಮಾನ ಇಲಾಖೆ
ಚಂಡಮಾರುತImage Credit source: Britannica
ನಯನಾ ರಾಜೀವ್
|

Updated on: Oct 19, 2023 | 11:47 AM

Share

ಮುಂಬೈಗೆ ‘ತೇಜ್ ಚಂಡಮಾರುತ’ (Tej Cyclone)ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಿದ್ದು, ಇನ್ನೆರಡು-ಮೂರು ದಿನಗಳಲ್ಲಿ ಪ್ರಬಲ ಚಂಡಮಾರುತವಾಗಿ ಬದಲಾಗುವ ನಿರೀಕ್ಷಿಯಿದೆ. ಈ ಚಂಡಮಾರುತವು ಯಾವ ತೀವ್ರತೆಯೊಂದಿಗೆ ಬರಬಹುದೆಂದು ಇನ್ನೂ ಊಹಿಸಲು ಸಾಧ್ಯವಿಲ್ಲ, ಆದರೆ ಭಾರತೀಯ ಹವಾಮಾನ ಇಲಾಖೆ (IMD) ಇದು ಕ್ರಮೇಣ ಬಲಗೊಳ್ಳಬಹುದು ಎಂದು ಹೇಳಿದೆ.

ಸದ್ಯ ಹವಾಮಾನ ಇಲಾಖೆ ಈ ಬಗ್ಗೆ ನಿರಂತರ ನಿಗಾ ಇರಿಸಿದೆ. ಅದೇ ಸಮಯದಲ್ಲಿ, ಅರಬ್ಬಿ ಸಮುದ್ರದಲ್ಲಿನ ಪರಿಸ್ಥಿತಿಗಳು ಚಂಡಮಾರುತವಾಗಿ ಮಾರ್ಪಟ್ಟರೆ, ಗಾಳಿಯು ಗಂಟೆಗೆ 60 ಕಿಮೀ ವೇಗದಲ್ಲಿ ಬೀಸಲಿದೆ. ಅಕ್ಟೋಬರ್ 20ರ ವೇಳೆಗೆ ಕಡಿಮೆ ಒತ್ತಡ ಉಂಟಾಗುವ ಸಾಧ್ಯತೆ ಇದೆ. ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಉಂಟಾಗಿರುವ ಹಿನ್ನೆಲೆಯಲ್ಲಿ ಅಲ್ಲಿನ ಮೀನುಗಾರರು ದಡಕ್ಕೆ ಮರಳುವಂತೆ ಐಎಂಡಿ ಎಚ್ಚರಿಕೆ ನೀಡಿದೆ. ಮುಂದಿನ ಐದು ದಿನಗಳ ಕಾಲ ಬಹುತೇಕ ಭಾಗಗಳಲ್ಲಿ ಮಳೆಯ ವಾತಾವರಣ ಮುಂದುವರಿಯಬಹುದು.

ಮತ್ತಷ್ಟು ಓದಿ: Karnataka Rain: ಕರ್ನಾಟಕದ ಕರಾವಳಿಯಲ್ಲಿ ಅ.25ರವರೆಗೂ ಮಳೆ, ಈ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ ಹೆಚ್ಚಳ

ಕಡಿಮೆ ಒತ್ತಡದ ಪ್ರದೇಶವು ಇನ್ನೂ ಚಂಡಮಾರುತವಾಗಿ ಬದಲಾಗಿಲ್ಲ ಆದರೆ ಮುಂದಿನ 48 ಗಂಟೆ ನಿರ್ಣಾಯಕ ಎಂದು ಪರಿಗಣಿಸಲಾಗಿದೆ. ಒಂದು ವೇಳೆ ಚಂಡಮಾರುತ ತೇಜ್ ರೂಪುಗೊಂಡರೆ ಅದು ಕರಾವಳಿಯಿಂದ ಗುಜರಾತ್​ ಕಡೆಗೆ ಚಲಿಸಬಹುದು, ಚಂಡಮಾರುತವು ಮುಂಬೈ, ಪುಣೆಯಲ್ಲಿ ಬಿರುಗಾಳಿ ಸಹಿತ ಮಳೆಯನ್ನು ತರಬಹುದು ಎಂದು ಅಂದಾಜಿಸಲಾಗಿದೆ.

ಚಂಡಮಾರುತ ಪ್ರಭಾವದಿಂದಾಗಿ ಮುಂಬೈನಲ್ಲಿ ರಾತ್ರಿ ಉಷ್ಣಾಂಶ 22-23 ಡಿಗ್ರಿ ಸೆಲ್ಸಿಯಸ್​ ಇತ್ತು. ಚಂಡಮಾರುತದಿಂದಾಗಿ ದಕ್ಷಿಣ ಕೊಂಕಣದಲ್ಲಿ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ