AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone Yaas ಪಶ್ಚಿಮ ಬಂಗಾಳ, ಒಡಿಶಾದಲ್ಲಿ 11 ಲಕ್ಷ ಜನರ ಸ್ಥಳಾಂತರ, ನಾಳೆ ಒಡಿಶಾದ ಧಮ್ರಾ ಬಂದರು ಬಳಿ ಯಾಸ್ ಅಪ್ಪಳಿಸುವ ಸಾಧ್ಯತೆ

ಮುಂದಿನ ಆರು ಗಂಟೆಗಳಲ್ಲಿ ಚಂಡಮಾರುತವು ತೀವ್ರವಾದ ಚಂಡಮಾರುತವಾಗಿ ಮಾರ್ಪಾಟು ಆಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ. ಯಾಸ್ ಅಪ್ಪಳಿಸುವ ಮೊದಲು ಮತ್ತು ನಂತರ ಆರು ಗಂಟೆಗಳ ಕಾಲ ಚಂಡಮಾರುತದ ಪರಿಣಾಮ ತೀವ್ರವಾಗಿರುತ್ತದೆ.

Cyclone Yaas ಪಶ್ಚಿಮ ಬಂಗಾಳ, ಒಡಿಶಾದಲ್ಲಿ 11 ಲಕ್ಷ ಜನರ ಸ್ಥಳಾಂತರ, ನಾಳೆ ಒಡಿಶಾದ ಧಮ್ರಾ ಬಂದರು ಬಳಿ ಯಾಸ್ ಅಪ್ಪಳಿಸುವ ಸಾಧ್ಯತೆ
ಪುರಿ ಬೀಚ್
ರಶ್ಮಿ ಕಲ್ಲಕಟ್ಟ
|

Updated on:May 25, 2021 | 8:02 PM

Share

ಕೊಲ್ಕತ್ತಾ: ಚಂಡಮಾರುತ ಯಾಸ್ ಕರಾವಳಿಯನ್ನು ಸಮೀಪಿಸುತ್ತಿರುವುದರಿಂದ ಒರಿಸ್ಸಾ ಮತ್ತು ಪಶ್ಚಿಮ ಬಂಗಾಳದ 11 ಲಕ್ಷಕ್ಕೂ ಹೆಚ್ಚು ಜನರನ್ನು ದುರ್ಬಲ ಪ್ರದೇಶಗಳಿಂದ ಸ್ಥಳಾಂತರಿಸಲಾಗಿದೆ. ಈ ಚಂಡಮಾರುತ ಭದ್ರಾಕ್ ಜಿಲ್ಲೆಯ ಧಮ್ರಾ ಬಂದರಿನ ಬಳಿ ಬುಧವಾರ ಮುಂಜಾನೆ ಅಪ್ಪಳಿಸುವ ನಿರೀಕ್ಷೆಯಿದೆ.

ಪಶ್ಚಿಮ ಬಂಗಾಳವು ಒಂಬತ್ತು ಲಕ್ಷಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಆಶ್ರಯಕ್ಕೆ ಸ್ಥಳಾಂತರಿಸಿದ್ದು ಒಡಿಶಾ ಸರ್ಕಾರವು ಕರಾವಳಿ ಜಿಲ್ಲೆಗಳ ದುರ್ಬಲ ಪ್ರದೇಶಗಳಿಂದ 2 ಲಕ್ಷ ಜನರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಿದೆ. ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರು ಮೂರು ಉತ್ತರ ಕರಾವಳಿ ಜಿಲ್ಲೆಗಳಾದ ವಿಶಾಖಪಟ್ಟಣಂ, ವಿಜಯನಗರಂ ಮತ್ತು ಶ್ರೀಕಾಕುಲಂ ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಹೇಳಿದ್ದಾರೆ.

ಮುಂದಿನ ಆರು ಗಂಟೆಗಳಲ್ಲಿ ಚಂಡಮಾರುತವು ತೀವ್ರವಾದ ಚಂಡಮಾರುತವಾಗಿ ಮಾರ್ಪಾಟು ಆಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ. ಯಾಸ್ ಅಪ್ಪಳಿಸುವ ಮೊದಲು ಮತ್ತು ನಂತರ ಆರು ಗಂಟೆಗಳ ಕಾಲ ಚಂಡಮಾರುತದ ಪರಿಣಾಮ ತೀವ್ರವಾಗಿರುತ್ತದೆ. ಚಾಂದಬಾಲಿ ಗರಿಷ್ಠ ಹಾನಿಗೆ ಸಾಕ್ಷಿಯಾಗಲಿದೆ ಎಂದು ಐಎಂಡಿ ಮಹಾನಿರ್ದೇಶಕ ಡಾ.ಮೃತ್ಯುಂಜಯ್ ಮೊಹಾಪಾತ್ರ ಹೇಳಿದ್ದಾರೆ. ಭಾರತೀಯ ಇಲಾಖೆಯ ಇತ್ತೀಚಿನ ಮಾಹಿತಿ ಪ್ರಕಾರ, ಚಂಡಮಾರುತವು ಪ್ಯಾರಡೀಪ್ (ಒಡಿಶಾ) ದ ಆಗ್ನೇಯಕ್ಕೆ 200 ಕಿ.ಮೀ, ಬಾಲಸೋರ್ (ಒಡಿಶಾ) ದ ಆಗ್ನೇಯಕ್ಕೆ 290 ಕಿ.ಮೀ, ದಿಘಾದ ಆಗ್ನೇಯಕ್ಕೆ (ಪಶ್ಚಿಮ ಬಂಗಾಳ) 290 ಕಿ.ಮೀ ಮತ್ತು ದಕ್ಷಿಣಕ್ಕೆ 280 ಕಿ.ಮೀ. ಸಾಗರ್ ದ್ವೀಪಗಳು (ಪಶ್ಚಿಮ ಬಂಗಾಳ)ಕ್ಕೆ ಸಾಗಲಿದೆ.

ಯಾಸ್ ಚಂಡಮಾರುತ: ಸಿದ್ಧತೆ ಪರಿಶೀಲಿಸಿದ ಒಡಿಶಾ ಸಿಎಂ ನವೀನ್ ಪಟ್ನಾಯಕ್ ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ರಾಜ್ಯದಲ್ಲಿ ಯಾಸ್ ಚಂಡಮಾರುತದ ಸನ್ನದ್ಧತೆಯನ್ನು ಒಡಿಶಾ ಸಿಎಂ ನವೀನ್ ಪಟ್ನಾಯಕ್ ಮಂಗಳವಾರ ಪರಿಶೀಲಿಸಿದ್ದಾರೆ.

ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲು ನಬನ್ನಾದಲ್ಲಿ ತಂಗಲಿದ್ದೇನೆ: ಮಮತಾ ಬ್ಯಾನರ್ಜಿ ನಾನು ಯಾಸ್ ಚಂಡಮಾರುತದ ಬಗ್ಗೆ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ನಾನು ಇಂದು ರಾತ್ರಿ ನಬನ್ನಾದಲ್ಲಿಯೇ ಇರುತ್ತೇನೆ. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತೇನೆ” ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪಶ್ಚಿಮ ಬಂಗಾಳ: ತಗ್ಗು ಪ್ರದೇಶಗಳಿಂದ 8 ಲಕ್ಷಕ್ಕೂ ಹೆಚ್ಚು ಜನರನ್ನು ಸ್ಥಳಾಂತರ ಪಶ್ಚಿಮ ಬಂಗಾಳದ 14 ಜಿಲ್ಲೆಗಳಲ್ಲಿ 8,09,830 ಜನರನ್ನು ತಗ್ಗು ಪ್ರದೇಶಗಳಿಂದ ಸ್ಥಳಾಂತರಿಸಲಾಗಿದೆ ಎಂದು ಎನ್​ಡಿಆಎರ್​ಎಫ್ ಹೇಳಿದೆ.

ಇದನ್ನೂ ಓದಿ:  Cyclone Yaas ಅತಿ ತೀವ್ರ ಚಂಡಮಾರುತವಾಗಿ ಯಾಸ್ ನಾಳೆ ಒಡಿಶಾ, ಪಶ್ಚಿಮ ಬಂಗಾಳ ಕರಾವಳಿ ದಾಟಲಿದೆ: ಭಾರತೀಯ ಹವಾಮಾನ ಇಲಾಖೆ

Cyclone Yaas: ಮಲ್ಲಿಗೆ ಚಂಡಮಾರುತ ಯಾಸ್​ ನಾಳೆಗೆ ತೀವ್ರ ಸ್ವರೂಪ, ಕೊರೊನಾ ವೈದ್ಯಕೀಯ ಪರಿಕರಗಳ ಸಾಗಣೆಗೆ ಅಡ್ಡಿ

Published On - 8:00 pm, Tue, 25 May 21

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!