AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cylinder Blast: ಪಶ್ಚಿಮ ಬಂಗಾಳದ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ, ನಾಲ್ಕು ಮಕ್ಕಳು ಸೇರಿ 7 ಮಂದಿ ಸಾವು

ಪಶ್ಚಿಮ ಬಂಗಾಳದ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು 7 ಮಂದಿ ಸುಟ್ಟು ಕರಕಲಾಗಿದ್ದಾರೆ. ಮೊದಲು ಪಟಾಕಿ ಸ್ಫೋಟಗೊಂಡಿದ್ದು, ಅದರಿಂದಾಗಿ ಸಿಲಿಂಡರ್​ಗೆ ಬೆಂಕಿ ತಗುಲಿ ಅದು ಸ್ಫೋಟಗೊಂಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಧೋಲಾಹತ್ ಪ್ರದೇಶದ ಮನೆಯೊಂದರಲ್ಲಿ ಈ ಘಟನೆ ಸಂಭವಿಸಿದ್ದು, ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಬೆಂಕಿ ಕಟ್ಟಡದಾದ್ಯಂತ ಹರಡಿತು.

Cylinder Blast: ಪಶ್ಚಿಮ ಬಂಗಾಳದ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ, ನಾಲ್ಕು ಮಕ್ಕಳು ಸೇರಿ 7 ಮಂದಿ ಸಾವು
ಸ್ಫೋಟ-ಸಾಂದರ್ಭಿಕ ಚಿತ್ರImage Credit source: India TV
ನಯನಾ ರಾಜೀವ್
|

Updated on:Apr 01, 2025 | 9:05 AM

Share

ಕೋಲ್ಕತ್ತಾ, ಏಪ್ರಿಲ್ 1: ಪಶ್ಚಿಮ ಬಂಗಾಳದ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ(Cylinder Blast)ಗೊಂಡು ನಾಲ್ವರು ಮಕ್ಕಳು ಸೇರಿ 7 ಮಂದಿ ಸಾವನ್ನಪ್ಪಿದ್ದಾರೆ. ಮೊದಲು ಪಟಾಕಿ ಸ್ಫೋಟಗೊಂಡಿದ್ದು, ಅದರಿಂದಾಗಿ ಸಿಲಿಂಡರ್​ಗೆ ಬೆಂಕಿ ತಗುಲಿ ಅದು ಸ್ಫೋಟಗೊಂಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಧೋಲಾಹತ್ ಪ್ರದೇಶದ ಮನೆಯೊಂದರಲ್ಲಿ ಈ ಘಟನೆ ಸಂಭವಿಸಿದ್ದು, ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಬೆಂಕಿ ಕಟ್ಟಡದಾದ್ಯಂತ ಹರಡಿತು.

ನಾಲ್ವರು ನಾಪತ್ತೆಯಾಗಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ. ಈ ಮನೆಯಲ್ಲಿ ಪಟಾಕಿ ತಯಾರಿಸಲಾಗುತ್ತಿತ್ತು, ಸೋಮವಾರ ಸಂಜೆ ದೊಡ್ಡ ಸ್ಫೋಟದ ಸದ್ದು ಕೇಳಿಬಂದಿದ್ದು, ನಂತರ ಬೆಂಕಿಯು ಕಟ್ಟಡವನ್ನು ಆವರಿಸಿಕೊಂಡಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ಕೂಡಲೇ ಸ್ಥಳಕ್ಕೆ ತಲುಪಿದ್ದರು.

ಈ ಕುಟುಂಬವು ವರ್ಷಗಳಿಂದ ಪಟಾಕಿ ತಯಾರಿಕೆಯಲ್ಲಿ ತೊಡಗಿಸಿಕೊಂಡಿದೆ. ವರದಿಗಳ ಪ್ರಕಾರ, ಒಟ್ಟು 11 ಸದಸ್ಯರು ಮನೆಯಲ್ಲಿ ವಾಸಿಸುತ್ತಿದ್ದಾರೆ. ಅದರಲ್ಲಿ 4 ಸದಸ್ಯರು ಇನ್ನೂ ಕಾಣೆಯಾಗಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ ಸಿಲಿಂಡರ್ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿದ್ದು, ಏಳು ಮಂದಿ ಸಾವನ್ನಪ್ಪಿ, ಹಲವಾರು ಮಂದಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ
Image
ಹಸುವನ್ನು ಓಡಿಸಿಕೊಂಡು ಬೆಡ್ ರೂಂಗೆ ನುಗ್ಗಿದ ಗೂಳಿ; ವಿಡಿಯೋ ವೈರಲ್
Image
ಧಗ ಧಗನೆ ಹೊತ್ತಿ ಉರಿದ ಸಿಲಿಂಡರ್ ತುಂಬಿದ್ದ ಟ್ರಕ್, ಹಲವು ಬಾರಿ ಸ್ಫೋಟ
Image
ತಮಿಳುನಾಡು: ಪಟಾಕಿ ಸಂಗ್ರಹಣಾ ಘಟಕದಲ್ಲಿ ಸ್ಫೋಟ, ಮೂವರು ಸಾವು
Image
ಬೆಂಗಳೂರು: ಸಿಲಿಂಡರ್ ಸ್ಫೋಟಗೊಂಡು 7 ಮಂದಿಗೆ ಗಂಭೀರ ಗಾಯ

ಮತ್ತಷ್ಟು ಓದಿ: Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್

ಕಳೆದ ತಿಂಗಳು ನಾಡಿಯಾ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದರು. ಬಲಿಯಾದವರು ಕಾರ್ಖಾನೆಯ ಸಿಬ್ಬಂದಿ ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚಿನ ಸ್ಫೋಟದ ನಿಖರವಾದ ಕಾರಣವನ್ನು ನಿರ್ಧರಿಸಲು ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ.

ಬೆಂಗಳೂರಿನಲ್ಲೂ ಅಂಥದ್ದೇ ಘಟನೆ ನಡೆದಿತ್ತು ಮನೆಯಲ್ಲಿ ಅಡುಗೆ ಅನಿಲದ ಸಿಲಿಂಡರ್ ಸ್ಫೋಟದಿಂದ 45 ವರ್ಷದ ವ್ಯಕ್ತಿ ಹಾಗೂ ಅವರ ಪತ್ನಿಗೆ ತೀವ್ರ ಸುಟ್ಟಗಾಯಗಳಾಗಿದ್ದು, ಗಂಭೀರ ಪರಿಸ್ಥಿತಿಯಲ್ಲಿರುವ ಘಟನೆ ಬೆಳಗ್ಗೆ ಪುಲಿಕೇಶಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಸಿದ್ದೇಶ್ ಹಾಗೂ ಅವರ 44 ವರ್ಷದ ಪತ್ನಿ ಶಿಶಿಲಾ ಅವರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗ್ಗೆ ಎದ್ದ ಕೂಡಲೇ ಸಿದ್ದೇಶ್ ಟೀ ಮಾಡಲು ಕಿಚನ್ ಗೆ ಹೋಗಿದ್ದು, ಗ್ಯಾಸ್ ಸ್ಟೌವ್ ಹಚ್ಚಿದ್ದಾರೆ. ಸಿಲಿಂಡರ್ ಹಠಾತ್ತನೇ ಸ್ಫೋಟಿಸಿದ್ದು, ಅವರು ಹಾಗೂ ಅವರ ಪತ್ನಿ ಗಾಯಗೊಂಡಿದ್ದಾರೆ.

ಸ್ಪೋಟಕ್ಕೆ ಅನಿಲ ಸೋರಿಕೆ ಕಾರಣವಿರಬಹುದು ಎಂದು ಪೊಲೀಸರು ಹೇಳಿದ್ದಾರೆ. ಸಿದ್ದೇಶ್ ದೇಹದ ಶೇ. 45 ರಷ್ಟು ಭಾಗ ಸುಟ್ಟ ಗಾಯಗಳಾಗಿದ್ದರೆ, ಅವರ ಪತ್ನಿಗೆ ಶೇ. 90 ರಷ್ಟು ಭಾಗ ಸುಟ್ಟ ಗಾಯಗಳಿಂದ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:04 am, Tue, 1 April 25

Follow Us
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ