AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಟ್ಟೆ ತುಂಬ ಊಟಮಾಡಿದ ಬಳಿಕ ಹೊಡೆದಾಟ; ಸಿಲಿಂಡರ್​ ಗ್ಯಾಸ್​ ಎತ್ತಿ ರೆಸ್ಟೋರೆಂಟ್​ ಸಿಬ್ಬಂದಿಗೆ ಹೊಡೆಯಲು ಹೋದ ಗುಂಪು

ರೆಸ್ಟೋರೆಂಟ್​​ನ ಸಿಸಿಟಿವಿಯಲ್ಲಿ ಈ ವಿಡಿಯೋಗಳು ವೈರಲ್​ ಆಗಿವೆ. ಹೊಡೆದಾಟ, ಅದರಿಂದ ಉಂಟಾದ ಹಾನಿಗಳನ್ನು ಇದರಲ್ಲಿ ನೋಡಬಹುದಾಗಿದೆ. ಊಟಕ್ಕೆಂದು ಹೋಗಿದ್ದವರು ಅಲ್ಲಿ ಸಿಕ್ಕಿದ್ದನ್ನೆಲ್ಲ ಹಾಳುಗೆಡವಿದ್ದಾರೆ.

ಹೊಟ್ಟೆ ತುಂಬ ಊಟಮಾಡಿದ ಬಳಿಕ ಹೊಡೆದಾಟ; ಸಿಲಿಂಡರ್​ ಗ್ಯಾಸ್​ ಎತ್ತಿ ರೆಸ್ಟೋರೆಂಟ್​ ಸಿಬ್ಬಂದಿಗೆ ಹೊಡೆಯಲು ಹೋದ ಗುಂಪು
ರೆಸ್ಟೋರೆಂಟ್​​ನಲ್ಲಿ ಹೊಡೆದಾಟ
TV9 Web
| Edited By: |

Updated on:Jan 30, 2022 | 10:29 AM

Share

ನೋಯ್ಡಾ: ಒಂದು ರೆಸ್ಟೋರೆಂಟ್​​ ಹೋಗಿ, ಬೇಕಾಗಿದ್ದನ್ನೆಲ್ಲ ಆರ್ಡರ್​ ಮಾಡಿಕೊಂಡು, ಭರ್ಜರಿ ಊಟಮಾಡಿದ ಒಂದಷ್ಟು ಮಂದಿ, ಮರುಕ್ಷಣ, ಅಲ್ಲಿನ ಸಿಬ್ಬಂದಿಗೆ ಮನಬಂದಂತೆ ಥಳಿಸಿದ್ದಾರೆ.  ಕೈಯಿಗೆ ಸಿಕ್ಕ ವಸ್ತುಗಳು ಅಂದರೆ, ಚಮಚ, ಲೋಟಗಳು ಕೊನೆಗೆ ಗ್ಯಾಸ್​ ಸಿಲಿಂಡರ್​ ಕೂಡ ಎತ್ತಿಕೊಂಡು ಹೊಡೆಯಲು ಹೋಗಿದ್ದಾರೆ. ಈ ವಿಡಿಯೋ ಕೂಡ ಸಿಕ್ಕಾಪಟೆ ವೈರಲ್ ಆಗುತ್ತಿದೆ.   ಗ್ರೇಟರ್​ ನೊಯ್ಡಾದ (Greater Noida) ದಂಕೌರ್ ಎಂಬ ರೆಸ್ಟೋರೆಂಟ್​ಗೆ ಒಂದಷ್ಟು ಜನರು ಊಟಕ್ಕೆ ಹೋಗಿದ್ದರು. ಹೀಗೆ ಊಟಕ್ಕೆ ಹೋದಾಗ ಸರ್ವ್ ಮಾಡುವವನನ್ನು ನಿಂದಿಸಿದ್ದಾರೆ. ಆ ಸರ್ವರ್​ ಅವರಿಗೆ ತಿರುಗುತ್ತರ ನೀಡಿದ್ದಾರೆ. ಅಷ್ಟಕ್ಕೇ ಕೋಪಗೊಂಡ ಇವರು ಆತನ ಮೇಲೆ ಕೈ ಮಾಡಿದ್ದಾರೆ. ಆಗ ಅಲ್ಲಿಯೇ ಇದ್ದ ರೆಸ್ಟೋರೆಂಟ್​ನ ಇತರ ಸಿಬ್ಬಂದಿ ಸರ್ವರ್​ ಸಹಾಯಕ್ಕೆ ಬಂದಿದ್ದಾರೆ. ಆಗ ಎರಡೂ ಗುಂಪುಗಳ ಮಧ್ಯೆ ಹೊಡೆದಾಟ ಮಿತಿಮೀರಿ ನಡೆದಿದೆ ಎಂದು ಹೇಳಲಾಗಿದೆ. 

ರೆಸ್ಟೋರೆಂಟ್​​ನ ಸಿಸಿಟಿವಿಯಲ್ಲಿ ಈ ವಿಡಿಯೋಗಳು ವೈರಲ್​ ಆಗಿವೆ. ಹೊಡೆದಾಟ, ಅದರಿಂದ ಉಂಟಾದ ಹಾನಿಗಳನ್ನು ಇದರಲ್ಲಿ ನೋಡಬಹುದಾಗಿದೆ. ಊಟಕ್ಕೆಂದು ಹೋಗಿದ್ದವರು ಅಲ್ಲಿ ಸಿಕ್ಕಿದ್ದನ್ನೆಲ್ಲ ಹಾಳುಗೆಡವಿದ್ದಾರೆ. ತಿಂಡಿಗಳು ಇದ್ದ ದೊಡ್ಡದೊಡ್ಡ ಪಾತ್ರೆಗಳನ್ನು ಕೆಡವಿದ್ದಾರೆ. ಒಂದು ಹಂತದಲ್ಲಿ ಸಿಲಿಂಡರ್ ಗ್ಯಾಸ್​ ಕೂಡ ಕೈಗೆ ತೆಗೆದುಕೊಂಡಿದ್ದಾರೆ. ರೆಸ್ಟೋರೆಂಟ್​ ಮಾಲೀಕ ಮಹೇಶ್​ ಶರ್ಮಾ ಪೊಲೀಸರಿಗೆ ದೂರು ನೀಡಿದ್ದಾರೆ. ಹಾಗೇ, ಸಿಸಿಟಿವಿ ವಿಡಿಯೋವನ್ನು ಸಾಕ್ಷಿಯನ್ನಾಗಿ ನೀಡಿದ್ದಾರೆ. ಇವರೆಲ್ಲ ಕುಡಿದು ಬಂದಿದ್ದರು. ಇಲ್ಲಿಂದ ಹೋಗುವಾಗ ನನಗೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ. ತಮ್ಮ ಮೋಟರ್ ಬೈಕ್​, ಸ್ಕೂಟರ್​ಗಳನ್ನು ಬಿಟ್ಟು ಪಲಾಯನ ಮಾಡಿದ್ದಾರೆ ಎಂದೂ ಹೇಳಿದ್ದಾರೆ.

ಗುರುವಾರ ನಡೆದ ಘಟನೆ ಇದು. ಅಂದು ಸಂಜೆ ಹೊತ್ತಿಗೆ ರೆಸ್ಟೋರೆಂಟ್​ಗೆ ಐವರು ಬಂದಿದ್ದರು. ಊಟ ಮುಗಿಯುತ್ತಿದ್ದಂತೆ ಅಲ್ಲಿನ ಸಿಬ್ಬಂದಿಯನ್ನು ನಿಂದಿಸಿದ್ದಲ್ಲದೆ, ದೊಡ್ಡ ದಾಂಧಲೆ, ಹೊಡೆದಾಟ ನಡೆಸಿದ್ದಾರೆ. ಮಾಲೀಕರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಿಸಿಟಿವಿ ಫೂಟೇಜ್​​ಗಳನ್ನೂ ಸ್ಕ್ಯಾನ್​ ಮಾಡಲಾಗಿದೆ ಎಂದು ಗ್ರೇಟರ್​ ನೊಯ್ಡಾದ ಡಿಸಿಪಿ ಅಮಿತ್​ ಕುಮಾರ್​ ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಕಾಲೇಜಿನಲ್ಲಿ ಭಯದಲ್ಲೇ ಕೆರೆ ಹಾವು ಮುಟ್ಟಿ ಸಂಭ್ರಮಿಸಿದ ಕಾಂಗ್ರೆಸ್ ಶಾಸಕ ಡಾ. ರಂಗನಾಥ್ 

Published On - 10:29 am, Sun, 30 January 22

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ