AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಟ್ಟೆ ತುಂಬ ಊಟಮಾಡಿದ ಬಳಿಕ ಹೊಡೆದಾಟ; ಸಿಲಿಂಡರ್​ ಗ್ಯಾಸ್​ ಎತ್ತಿ ರೆಸ್ಟೋರೆಂಟ್​ ಸಿಬ್ಬಂದಿಗೆ ಹೊಡೆಯಲು ಹೋದ ಗುಂಪು

ರೆಸ್ಟೋರೆಂಟ್​​ನ ಸಿಸಿಟಿವಿಯಲ್ಲಿ ಈ ವಿಡಿಯೋಗಳು ವೈರಲ್​ ಆಗಿವೆ. ಹೊಡೆದಾಟ, ಅದರಿಂದ ಉಂಟಾದ ಹಾನಿಗಳನ್ನು ಇದರಲ್ಲಿ ನೋಡಬಹುದಾಗಿದೆ. ಊಟಕ್ಕೆಂದು ಹೋಗಿದ್ದವರು ಅಲ್ಲಿ ಸಿಕ್ಕಿದ್ದನ್ನೆಲ್ಲ ಹಾಳುಗೆಡವಿದ್ದಾರೆ.

ಹೊಟ್ಟೆ ತುಂಬ ಊಟಮಾಡಿದ ಬಳಿಕ ಹೊಡೆದಾಟ; ಸಿಲಿಂಡರ್​ ಗ್ಯಾಸ್​ ಎತ್ತಿ ರೆಸ್ಟೋರೆಂಟ್​ ಸಿಬ್ಬಂದಿಗೆ ಹೊಡೆಯಲು ಹೋದ ಗುಂಪು
ರೆಸ್ಟೋರೆಂಟ್​​ನಲ್ಲಿ ಹೊಡೆದಾಟ
TV9 Web
| Edited By: |

Updated on:Jan 30, 2022 | 10:29 AM

Share

ನೋಯ್ಡಾ: ಒಂದು ರೆಸ್ಟೋರೆಂಟ್​​ ಹೋಗಿ, ಬೇಕಾಗಿದ್ದನ್ನೆಲ್ಲ ಆರ್ಡರ್​ ಮಾಡಿಕೊಂಡು, ಭರ್ಜರಿ ಊಟಮಾಡಿದ ಒಂದಷ್ಟು ಮಂದಿ, ಮರುಕ್ಷಣ, ಅಲ್ಲಿನ ಸಿಬ್ಬಂದಿಗೆ ಮನಬಂದಂತೆ ಥಳಿಸಿದ್ದಾರೆ.  ಕೈಯಿಗೆ ಸಿಕ್ಕ ವಸ್ತುಗಳು ಅಂದರೆ, ಚಮಚ, ಲೋಟಗಳು ಕೊನೆಗೆ ಗ್ಯಾಸ್​ ಸಿಲಿಂಡರ್​ ಕೂಡ ಎತ್ತಿಕೊಂಡು ಹೊಡೆಯಲು ಹೋಗಿದ್ದಾರೆ. ಈ ವಿಡಿಯೋ ಕೂಡ ಸಿಕ್ಕಾಪಟೆ ವೈರಲ್ ಆಗುತ್ತಿದೆ.   ಗ್ರೇಟರ್​ ನೊಯ್ಡಾದ (Greater Noida) ದಂಕೌರ್ ಎಂಬ ರೆಸ್ಟೋರೆಂಟ್​ಗೆ ಒಂದಷ್ಟು ಜನರು ಊಟಕ್ಕೆ ಹೋಗಿದ್ದರು. ಹೀಗೆ ಊಟಕ್ಕೆ ಹೋದಾಗ ಸರ್ವ್ ಮಾಡುವವನನ್ನು ನಿಂದಿಸಿದ್ದಾರೆ. ಆ ಸರ್ವರ್​ ಅವರಿಗೆ ತಿರುಗುತ್ತರ ನೀಡಿದ್ದಾರೆ. ಅಷ್ಟಕ್ಕೇ ಕೋಪಗೊಂಡ ಇವರು ಆತನ ಮೇಲೆ ಕೈ ಮಾಡಿದ್ದಾರೆ. ಆಗ ಅಲ್ಲಿಯೇ ಇದ್ದ ರೆಸ್ಟೋರೆಂಟ್​ನ ಇತರ ಸಿಬ್ಬಂದಿ ಸರ್ವರ್​ ಸಹಾಯಕ್ಕೆ ಬಂದಿದ್ದಾರೆ. ಆಗ ಎರಡೂ ಗುಂಪುಗಳ ಮಧ್ಯೆ ಹೊಡೆದಾಟ ಮಿತಿಮೀರಿ ನಡೆದಿದೆ ಎಂದು ಹೇಳಲಾಗಿದೆ. 

ರೆಸ್ಟೋರೆಂಟ್​​ನ ಸಿಸಿಟಿವಿಯಲ್ಲಿ ಈ ವಿಡಿಯೋಗಳು ವೈರಲ್​ ಆಗಿವೆ. ಹೊಡೆದಾಟ, ಅದರಿಂದ ಉಂಟಾದ ಹಾನಿಗಳನ್ನು ಇದರಲ್ಲಿ ನೋಡಬಹುದಾಗಿದೆ. ಊಟಕ್ಕೆಂದು ಹೋಗಿದ್ದವರು ಅಲ್ಲಿ ಸಿಕ್ಕಿದ್ದನ್ನೆಲ್ಲ ಹಾಳುಗೆಡವಿದ್ದಾರೆ. ತಿಂಡಿಗಳು ಇದ್ದ ದೊಡ್ಡದೊಡ್ಡ ಪಾತ್ರೆಗಳನ್ನು ಕೆಡವಿದ್ದಾರೆ. ಒಂದು ಹಂತದಲ್ಲಿ ಸಿಲಿಂಡರ್ ಗ್ಯಾಸ್​ ಕೂಡ ಕೈಗೆ ತೆಗೆದುಕೊಂಡಿದ್ದಾರೆ. ರೆಸ್ಟೋರೆಂಟ್​ ಮಾಲೀಕ ಮಹೇಶ್​ ಶರ್ಮಾ ಪೊಲೀಸರಿಗೆ ದೂರು ನೀಡಿದ್ದಾರೆ. ಹಾಗೇ, ಸಿಸಿಟಿವಿ ವಿಡಿಯೋವನ್ನು ಸಾಕ್ಷಿಯನ್ನಾಗಿ ನೀಡಿದ್ದಾರೆ. ಇವರೆಲ್ಲ ಕುಡಿದು ಬಂದಿದ್ದರು. ಇಲ್ಲಿಂದ ಹೋಗುವಾಗ ನನಗೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ. ತಮ್ಮ ಮೋಟರ್ ಬೈಕ್​, ಸ್ಕೂಟರ್​ಗಳನ್ನು ಬಿಟ್ಟು ಪಲಾಯನ ಮಾಡಿದ್ದಾರೆ ಎಂದೂ ಹೇಳಿದ್ದಾರೆ.

ಗುರುವಾರ ನಡೆದ ಘಟನೆ ಇದು. ಅಂದು ಸಂಜೆ ಹೊತ್ತಿಗೆ ರೆಸ್ಟೋರೆಂಟ್​ಗೆ ಐವರು ಬಂದಿದ್ದರು. ಊಟ ಮುಗಿಯುತ್ತಿದ್ದಂತೆ ಅಲ್ಲಿನ ಸಿಬ್ಬಂದಿಯನ್ನು ನಿಂದಿಸಿದ್ದಲ್ಲದೆ, ದೊಡ್ಡ ದಾಂಧಲೆ, ಹೊಡೆದಾಟ ನಡೆಸಿದ್ದಾರೆ. ಮಾಲೀಕರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಿಸಿಟಿವಿ ಫೂಟೇಜ್​​ಗಳನ್ನೂ ಸ್ಕ್ಯಾನ್​ ಮಾಡಲಾಗಿದೆ ಎಂದು ಗ್ರೇಟರ್​ ನೊಯ್ಡಾದ ಡಿಸಿಪಿ ಅಮಿತ್​ ಕುಮಾರ್​ ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಕಾಲೇಜಿನಲ್ಲಿ ಭಯದಲ್ಲೇ ಕೆರೆ ಹಾವು ಮುಟ್ಟಿ ಸಂಭ್ರಮಿಸಿದ ಕಾಂಗ್ರೆಸ್ ಶಾಸಕ ಡಾ. ರಂಗನಾಥ್ 

Published On - 10:29 am, Sun, 30 January 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?