AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಟ್ಟೆ ತುಂಬ ಊಟಮಾಡಿದ ಬಳಿಕ ಹೊಡೆದಾಟ; ಸಿಲಿಂಡರ್​ ಗ್ಯಾಸ್​ ಎತ್ತಿ ರೆಸ್ಟೋರೆಂಟ್​ ಸಿಬ್ಬಂದಿಗೆ ಹೊಡೆಯಲು ಹೋದ ಗುಂಪು

ರೆಸ್ಟೋರೆಂಟ್​​ನ ಸಿಸಿಟಿವಿಯಲ್ಲಿ ಈ ವಿಡಿಯೋಗಳು ವೈರಲ್​ ಆಗಿವೆ. ಹೊಡೆದಾಟ, ಅದರಿಂದ ಉಂಟಾದ ಹಾನಿಗಳನ್ನು ಇದರಲ್ಲಿ ನೋಡಬಹುದಾಗಿದೆ. ಊಟಕ್ಕೆಂದು ಹೋಗಿದ್ದವರು ಅಲ್ಲಿ ಸಿಕ್ಕಿದ್ದನ್ನೆಲ್ಲ ಹಾಳುಗೆಡವಿದ್ದಾರೆ.

ಹೊಟ್ಟೆ ತುಂಬ ಊಟಮಾಡಿದ ಬಳಿಕ ಹೊಡೆದಾಟ; ಸಿಲಿಂಡರ್​ ಗ್ಯಾಸ್​ ಎತ್ತಿ ರೆಸ್ಟೋರೆಂಟ್​ ಸಿಬ್ಬಂದಿಗೆ ಹೊಡೆಯಲು ಹೋದ ಗುಂಪು
ರೆಸ್ಟೋರೆಂಟ್​​ನಲ್ಲಿ ಹೊಡೆದಾಟ
Follow us
TV9 Web
| Updated By: Lakshmi Hegde

Updated on:Jan 30, 2022 | 10:29 AM

ನೋಯ್ಡಾ: ಒಂದು ರೆಸ್ಟೋರೆಂಟ್​​ ಹೋಗಿ, ಬೇಕಾಗಿದ್ದನ್ನೆಲ್ಲ ಆರ್ಡರ್​ ಮಾಡಿಕೊಂಡು, ಭರ್ಜರಿ ಊಟಮಾಡಿದ ಒಂದಷ್ಟು ಮಂದಿ, ಮರುಕ್ಷಣ, ಅಲ್ಲಿನ ಸಿಬ್ಬಂದಿಗೆ ಮನಬಂದಂತೆ ಥಳಿಸಿದ್ದಾರೆ.  ಕೈಯಿಗೆ ಸಿಕ್ಕ ವಸ್ತುಗಳು ಅಂದರೆ, ಚಮಚ, ಲೋಟಗಳು ಕೊನೆಗೆ ಗ್ಯಾಸ್​ ಸಿಲಿಂಡರ್​ ಕೂಡ ಎತ್ತಿಕೊಂಡು ಹೊಡೆಯಲು ಹೋಗಿದ್ದಾರೆ. ಈ ವಿಡಿಯೋ ಕೂಡ ಸಿಕ್ಕಾಪಟೆ ವೈರಲ್ ಆಗುತ್ತಿದೆ.   ಗ್ರೇಟರ್​ ನೊಯ್ಡಾದ (Greater Noida) ದಂಕೌರ್ ಎಂಬ ರೆಸ್ಟೋರೆಂಟ್​ಗೆ ಒಂದಷ್ಟು ಜನರು ಊಟಕ್ಕೆ ಹೋಗಿದ್ದರು. ಹೀಗೆ ಊಟಕ್ಕೆ ಹೋದಾಗ ಸರ್ವ್ ಮಾಡುವವನನ್ನು ನಿಂದಿಸಿದ್ದಾರೆ. ಆ ಸರ್ವರ್​ ಅವರಿಗೆ ತಿರುಗುತ್ತರ ನೀಡಿದ್ದಾರೆ. ಅಷ್ಟಕ್ಕೇ ಕೋಪಗೊಂಡ ಇವರು ಆತನ ಮೇಲೆ ಕೈ ಮಾಡಿದ್ದಾರೆ. ಆಗ ಅಲ್ಲಿಯೇ ಇದ್ದ ರೆಸ್ಟೋರೆಂಟ್​ನ ಇತರ ಸಿಬ್ಬಂದಿ ಸರ್ವರ್​ ಸಹಾಯಕ್ಕೆ ಬಂದಿದ್ದಾರೆ. ಆಗ ಎರಡೂ ಗುಂಪುಗಳ ಮಧ್ಯೆ ಹೊಡೆದಾಟ ಮಿತಿಮೀರಿ ನಡೆದಿದೆ ಎಂದು ಹೇಳಲಾಗಿದೆ. 

ರೆಸ್ಟೋರೆಂಟ್​​ನ ಸಿಸಿಟಿವಿಯಲ್ಲಿ ಈ ವಿಡಿಯೋಗಳು ವೈರಲ್​ ಆಗಿವೆ. ಹೊಡೆದಾಟ, ಅದರಿಂದ ಉಂಟಾದ ಹಾನಿಗಳನ್ನು ಇದರಲ್ಲಿ ನೋಡಬಹುದಾಗಿದೆ. ಊಟಕ್ಕೆಂದು ಹೋಗಿದ್ದವರು ಅಲ್ಲಿ ಸಿಕ್ಕಿದ್ದನ್ನೆಲ್ಲ ಹಾಳುಗೆಡವಿದ್ದಾರೆ. ತಿಂಡಿಗಳು ಇದ್ದ ದೊಡ್ಡದೊಡ್ಡ ಪಾತ್ರೆಗಳನ್ನು ಕೆಡವಿದ್ದಾರೆ. ಒಂದು ಹಂತದಲ್ಲಿ ಸಿಲಿಂಡರ್ ಗ್ಯಾಸ್​ ಕೂಡ ಕೈಗೆ ತೆಗೆದುಕೊಂಡಿದ್ದಾರೆ. ರೆಸ್ಟೋರೆಂಟ್​ ಮಾಲೀಕ ಮಹೇಶ್​ ಶರ್ಮಾ ಪೊಲೀಸರಿಗೆ ದೂರು ನೀಡಿದ್ದಾರೆ. ಹಾಗೇ, ಸಿಸಿಟಿವಿ ವಿಡಿಯೋವನ್ನು ಸಾಕ್ಷಿಯನ್ನಾಗಿ ನೀಡಿದ್ದಾರೆ. ಇವರೆಲ್ಲ ಕುಡಿದು ಬಂದಿದ್ದರು. ಇಲ್ಲಿಂದ ಹೋಗುವಾಗ ನನಗೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ. ತಮ್ಮ ಮೋಟರ್ ಬೈಕ್​, ಸ್ಕೂಟರ್​ಗಳನ್ನು ಬಿಟ್ಟು ಪಲಾಯನ ಮಾಡಿದ್ದಾರೆ ಎಂದೂ ಹೇಳಿದ್ದಾರೆ.

ಗುರುವಾರ ನಡೆದ ಘಟನೆ ಇದು. ಅಂದು ಸಂಜೆ ಹೊತ್ತಿಗೆ ರೆಸ್ಟೋರೆಂಟ್​ಗೆ ಐವರು ಬಂದಿದ್ದರು. ಊಟ ಮುಗಿಯುತ್ತಿದ್ದಂತೆ ಅಲ್ಲಿನ ಸಿಬ್ಬಂದಿಯನ್ನು ನಿಂದಿಸಿದ್ದಲ್ಲದೆ, ದೊಡ್ಡ ದಾಂಧಲೆ, ಹೊಡೆದಾಟ ನಡೆಸಿದ್ದಾರೆ. ಮಾಲೀಕರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಿಸಿಟಿವಿ ಫೂಟೇಜ್​​ಗಳನ್ನೂ ಸ್ಕ್ಯಾನ್​ ಮಾಡಲಾಗಿದೆ ಎಂದು ಗ್ರೇಟರ್​ ನೊಯ್ಡಾದ ಡಿಸಿಪಿ ಅಮಿತ್​ ಕುಮಾರ್​ ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಕಾಲೇಜಿನಲ್ಲಿ ಭಯದಲ್ಲೇ ಕೆರೆ ಹಾವು ಮುಟ್ಟಿ ಸಂಭ್ರಮಿಸಿದ ಕಾಂಗ್ರೆಸ್ ಶಾಸಕ ಡಾ. ರಂಗನಾಥ್ 

Published On - 10:29 am, Sun, 30 January 22

ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್