AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಂಗ್ ಚಾರ್ಲ್ಸ್ ಪಟ್ಟಾಭಿಷೇಕದಲ್ಲಿ ಪಾಲ್ಗೊಳ್ಳಲಿದ್ದಾರೆ ಮುಂಬೈ ಡಬ್ಬಾವಾಲಾಗಳು; ಅವರು ಕೊಡುವ ಸ್ಪೆಷಲ್ ಗಿಫ್ಟ್ ಹೀಗಿದೆ

ಮುಂಬೈ ಡಬ್ಬಾವಾಲಾಗಳು ಬ್ರಿಟಿಷ್ ರಾಜಮನೆತನದೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದಾರೆ. ಅವರ ಮದುವೆಗೆ ಇಬ್ಬರು ಡಬ್ಬಾವಾಲಾಗಳನ್ನು ಆಹ್ವಾನಿಸಲಾಗಿತ್ತು. ಇದು ನಮಗೆ ಗೌರವವಾಗಿತ್ತು. ಅವರು ರಾಜನಾಗಲಿದ್ದಾ

ಕಿಂಗ್ ಚಾರ್ಲ್ಸ್ ಪಟ್ಟಾಭಿಷೇಕದಲ್ಲಿ ಪಾಲ್ಗೊಳ್ಳಲಿದ್ದಾರೆ ಮುಂಬೈ ಡಬ್ಬಾವಾಲಾಗಳು; ಅವರು ಕೊಡುವ ಸ್ಪೆಷಲ್ ಗಿಫ್ಟ್ ಹೀಗಿದೆ
ಮುಂಬೈ ಡಬ್ಬಾವಾಲಾಗಳು
ರಶ್ಮಿ ಕಲ್ಲಕಟ್ಟ
|

Updated on: May 03, 2023 | 7:12 PM

Share

ಮೇ 6 ರಂದು ಚಾರ್ಲ್ಸ್‌ ಪಟ್ಟಾಭಿಷೇಕ (King Charles’coronation) ಸಮಾರಂಭದಲ್ಲಿ ಭಾಗವಹಿಸಲು ತಮ್ಮನ್ನು ಆಹ್ವಾನಿಸಲಾಗಿದೆ ಎಂದು ಹೇಳಿರುವ ಮುಂಬೈನ ಪ್ರಸಿದ್ಧ ಡಬ್ಬಾವಾಲಾಗಳು (Mumbai Dabbawalas) ಮಂಗಳವಾರ ಬ್ರಿಟನ್‌ನ (Britain) ರಾಜ ಚಾರ್ಲ್ಸ್‌ಗೆ ಕೊಡಲಿರುವ ಉಡುಗೊರೆಗಳನ್ನು ಖರೀದಿಸುತ್ತಿರುವುದು ಕಂಡುಬಂದಿದೆ. ಡಬ್ಬಾವಾಲಾಗಳು ಪುಣೇರಿ ಪಗಡಿ ಮತ್ತು ವಾರಕರಿ ಸಮುದಾಯದ ಶಾಲು ಖರೀದಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. 74 ವರ್ಷ ವಯಸ್ಸಿನ ರಾಜನ ಪಟ್ಟಾಭಿಷೇಕ ಸಮಾರಂಭದಲ್ಲಿ ಪಾಲ್ಗೊಳ್ಳಲು ಬ್ರಿಟಿಷ್ ರಾಯಭಾರ ಕಚೇರಿಯು ಡಬ್ಬಾವಾಲಾಗಳಿಗೆ ಆಹ್ವಾನವನ್ನು ಕಳುಹಿಸಿದೆ ಎಂದು ವರದಿಯಾಗಿದೆ.

ಮುಂಬೈ ಡಬ್ಬಾವಾಲಾಗಳು ಬ್ರಿಟಿಷ್ ರಾಜಮನೆತನದೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದಾರೆ. ಅವರ ಮದುವೆಗೆ ಇಬ್ಬರು ಡಬ್ಬಾವಾಲಾಗಳನ್ನು ಆಹ್ವಾನಿಸಲಾಗಿತ್ತು. ಇದು ನಮಗೆ ಗೌರವವಾಗಿತ್ತು. ಅವರು ರಾಜನಾಗಲಿದ್ದಾರೆ. ಆದ್ದರಿಂದ, ನಾವು ಕಿಂಗ್ ಚಾರ್ಲ್ಸ್‌ಗೆ ಪುಣೇರಿ ಪಗಡಿ ಮತ್ತು ವಾರಕರಿ ಸಮುದಾಯದ ಶಾಲುಗಳನ್ನು ಉಡುಗೊರೆಯಾಗಿ ನೀಡಲು ಬಯಸುತ್ತೇವೆ ಎಂದು ಮುಂಬೈ ಡಬ್ಬಾವಾಲಾಗಳ ವಕ್ತಾರ ವಿಷ್ಣು ಕಲ್ಡೋಕೆ ಹೇಳಿದ್ದಾರೆ.

2003 ರಲ್ಲಿ ಚಾರ್ಲ್ಸ್ III ಅವರು ನಗರಕ್ಕೆ ಭೇಟಿ ನೀಡಿದಾಗ ಮುಂಬೈನ ಚರ್ಚ್‌ಗೇಟ್ ನಿಲ್ದಾಣದಲ್ಲಿ ಡಬ್ಬಾವಾಲಾಗಳನ್ನು ಭೇಟಿಯಾದರು ಎಂದು ವರದಿಯಾಗಿದೆ. ನಂತರ 2005 ರಲ್ಲಿ, ಇಬ್ಬರು ಡಬ್ಬಾವಾಲಾಗಳು ಚಾರ್ಲ್ಸ್ ಮತ್ತು ಕ್ಯಾಮಿಲ್ಲಾ ಪಾರ್ಕರ್-ಬೌಲ್ಸ್ ಅವರ ರಾಜಮನೆತನದ ವಿವಾಹದಲ್ಲಿ ಭಾಗವಹಿಸಿದರು.

ಇದನ್ನೂ ಓದಿ: Supriya Sule: ಶರದ್ ಪವಾರ್ ರಾಜೀನಾಮೆ; ಸುಪ್ರಿಯಾ ಸುಳೆ ಎನ್‌ಸಿಪಿಯ ನೂತನ ಮುಖ್ಯಸ್ಥರಾಗುವ ಸಾಧ್ಯತೆ?

2022 ರಲ್ಲಿ ರಾಣಿ ಎಲಿಜಬೆತ್ II ನಿಧನರಾದಾಗ, ಮುಂಬೈ ಡಬ್ಬಾವಾಲಾ ಅಸೋಸಿಯೇಷನ್ ತಮ್ಮ ದುಃಖವನ್ನು ವ್ಯಕ್ತಪಡಿಸಿತು. ಪ್ರಿನ್ಸ್ ಚಾರ್ಲ್ಸ್ ಭಾರತಕ್ಕೆ ಭೇಟಿ ನೀಡಿದಾಗಿನಿಂದ ಮುಂಬೈ ಡಬ್ಬಾವಾಲಾ ಅಸೋಸಿಯೇಷನ್ ಬ್ರಿಟಿಷ್ ರಾಜಮನೆತನದೊಂದಿಗೆ ಬಹಳ ನಿಕಟ ಸಂಬಂಧವನ್ನು ಹೊಂದಿದೆ. ರಾಣಿ ಎಲಿಜಬೆತ್ II ರ ಸಾವಿನ ಸುದ್ದಿ ಕೇಳಿ ನಮಗೆ ತುಂಬಾ ದುಃಖವಾಗಿದೆ.ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಸಂಘದ ಅಧ್ಯಕ್ಷ ಸುಭಾಷ್ ತಳೇಕರ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ