AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಂಗ್ ಚಾರ್ಲ್ಸ್ ಪಟ್ಟಾಭಿಷೇಕದಲ್ಲಿ ಪಾಲ್ಗೊಳ್ಳಲಿದ್ದಾರೆ ಮುಂಬೈ ಡಬ್ಬಾವಾಲಾಗಳು; ಅವರು ಕೊಡುವ ಸ್ಪೆಷಲ್ ಗಿಫ್ಟ್ ಹೀಗಿದೆ

ಮುಂಬೈ ಡಬ್ಬಾವಾಲಾಗಳು ಬ್ರಿಟಿಷ್ ರಾಜಮನೆತನದೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದಾರೆ. ಅವರ ಮದುವೆಗೆ ಇಬ್ಬರು ಡಬ್ಬಾವಾಲಾಗಳನ್ನು ಆಹ್ವಾನಿಸಲಾಗಿತ್ತು. ಇದು ನಮಗೆ ಗೌರವವಾಗಿತ್ತು. ಅವರು ರಾಜನಾಗಲಿದ್ದಾ

ಕಿಂಗ್ ಚಾರ್ಲ್ಸ್ ಪಟ್ಟಾಭಿಷೇಕದಲ್ಲಿ ಪಾಲ್ಗೊಳ್ಳಲಿದ್ದಾರೆ ಮುಂಬೈ ಡಬ್ಬಾವಾಲಾಗಳು; ಅವರು ಕೊಡುವ ಸ್ಪೆಷಲ್ ಗಿಫ್ಟ್ ಹೀಗಿದೆ
ಮುಂಬೈ ಡಬ್ಬಾವಾಲಾಗಳು
ರಶ್ಮಿ ಕಲ್ಲಕಟ್ಟ
|

Updated on: May 03, 2023 | 7:12 PM

Share

ಮೇ 6 ರಂದು ಚಾರ್ಲ್ಸ್‌ ಪಟ್ಟಾಭಿಷೇಕ (King Charles’coronation) ಸಮಾರಂಭದಲ್ಲಿ ಭಾಗವಹಿಸಲು ತಮ್ಮನ್ನು ಆಹ್ವಾನಿಸಲಾಗಿದೆ ಎಂದು ಹೇಳಿರುವ ಮುಂಬೈನ ಪ್ರಸಿದ್ಧ ಡಬ್ಬಾವಾಲಾಗಳು (Mumbai Dabbawalas) ಮಂಗಳವಾರ ಬ್ರಿಟನ್‌ನ (Britain) ರಾಜ ಚಾರ್ಲ್ಸ್‌ಗೆ ಕೊಡಲಿರುವ ಉಡುಗೊರೆಗಳನ್ನು ಖರೀದಿಸುತ್ತಿರುವುದು ಕಂಡುಬಂದಿದೆ. ಡಬ್ಬಾವಾಲಾಗಳು ಪುಣೇರಿ ಪಗಡಿ ಮತ್ತು ವಾರಕರಿ ಸಮುದಾಯದ ಶಾಲು ಖರೀದಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. 74 ವರ್ಷ ವಯಸ್ಸಿನ ರಾಜನ ಪಟ್ಟಾಭಿಷೇಕ ಸಮಾರಂಭದಲ್ಲಿ ಪಾಲ್ಗೊಳ್ಳಲು ಬ್ರಿಟಿಷ್ ರಾಯಭಾರ ಕಚೇರಿಯು ಡಬ್ಬಾವಾಲಾಗಳಿಗೆ ಆಹ್ವಾನವನ್ನು ಕಳುಹಿಸಿದೆ ಎಂದು ವರದಿಯಾಗಿದೆ.

ಮುಂಬೈ ಡಬ್ಬಾವಾಲಾಗಳು ಬ್ರಿಟಿಷ್ ರಾಜಮನೆತನದೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದಾರೆ. ಅವರ ಮದುವೆಗೆ ಇಬ್ಬರು ಡಬ್ಬಾವಾಲಾಗಳನ್ನು ಆಹ್ವಾನಿಸಲಾಗಿತ್ತು. ಇದು ನಮಗೆ ಗೌರವವಾಗಿತ್ತು. ಅವರು ರಾಜನಾಗಲಿದ್ದಾರೆ. ಆದ್ದರಿಂದ, ನಾವು ಕಿಂಗ್ ಚಾರ್ಲ್ಸ್‌ಗೆ ಪುಣೇರಿ ಪಗಡಿ ಮತ್ತು ವಾರಕರಿ ಸಮುದಾಯದ ಶಾಲುಗಳನ್ನು ಉಡುಗೊರೆಯಾಗಿ ನೀಡಲು ಬಯಸುತ್ತೇವೆ ಎಂದು ಮುಂಬೈ ಡಬ್ಬಾವಾಲಾಗಳ ವಕ್ತಾರ ವಿಷ್ಣು ಕಲ್ಡೋಕೆ ಹೇಳಿದ್ದಾರೆ.

2003 ರಲ್ಲಿ ಚಾರ್ಲ್ಸ್ III ಅವರು ನಗರಕ್ಕೆ ಭೇಟಿ ನೀಡಿದಾಗ ಮುಂಬೈನ ಚರ್ಚ್‌ಗೇಟ್ ನಿಲ್ದಾಣದಲ್ಲಿ ಡಬ್ಬಾವಾಲಾಗಳನ್ನು ಭೇಟಿಯಾದರು ಎಂದು ವರದಿಯಾಗಿದೆ. ನಂತರ 2005 ರಲ್ಲಿ, ಇಬ್ಬರು ಡಬ್ಬಾವಾಲಾಗಳು ಚಾರ್ಲ್ಸ್ ಮತ್ತು ಕ್ಯಾಮಿಲ್ಲಾ ಪಾರ್ಕರ್-ಬೌಲ್ಸ್ ಅವರ ರಾಜಮನೆತನದ ವಿವಾಹದಲ್ಲಿ ಭಾಗವಹಿಸಿದರು.

ಇದನ್ನೂ ಓದಿ: Supriya Sule: ಶರದ್ ಪವಾರ್ ರಾಜೀನಾಮೆ; ಸುಪ್ರಿಯಾ ಸುಳೆ ಎನ್‌ಸಿಪಿಯ ನೂತನ ಮುಖ್ಯಸ್ಥರಾಗುವ ಸಾಧ್ಯತೆ?

2022 ರಲ್ಲಿ ರಾಣಿ ಎಲಿಜಬೆತ್ II ನಿಧನರಾದಾಗ, ಮುಂಬೈ ಡಬ್ಬಾವಾಲಾ ಅಸೋಸಿಯೇಷನ್ ತಮ್ಮ ದುಃಖವನ್ನು ವ್ಯಕ್ತಪಡಿಸಿತು. ಪ್ರಿನ್ಸ್ ಚಾರ್ಲ್ಸ್ ಭಾರತಕ್ಕೆ ಭೇಟಿ ನೀಡಿದಾಗಿನಿಂದ ಮುಂಬೈ ಡಬ್ಬಾವಾಲಾ ಅಸೋಸಿಯೇಷನ್ ಬ್ರಿಟಿಷ್ ರಾಜಮನೆತನದೊಂದಿಗೆ ಬಹಳ ನಿಕಟ ಸಂಬಂಧವನ್ನು ಹೊಂದಿದೆ. ರಾಣಿ ಎಲಿಜಬೆತ್ II ರ ಸಾವಿನ ಸುದ್ದಿ ಕೇಳಿ ನಮಗೆ ತುಂಬಾ ದುಃಖವಾಗಿದೆ.ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಸಂಘದ ಅಧ್ಯಕ್ಷ ಸುಭಾಷ್ ತಳೇಕರ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!