AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ: ಪತ್ನಿ ಹಾಗೂ ಅಪ್ರಾಪ್ತ ಮಗಳ ಹತ್ಯೆಗೆ ಯತ್ನ, ವ್ಯಕ್ತಿಯ ಬಂಧನ

ಪತ್ನಿ ಹಾಗೂ ಅಪ್ರಾಪ್ತ ಮಗಳ ಹತ್ಯೆ(Murder)ಗೆ ಯತ್ನಿಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈನ ದಹಿಸರ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಹನುಮಂತ್ ಸೋನ್ವಾಲ್ ಎಂಬುವವರು 14 ವರ್ಷದ ಮಗಳು ಪ್ರಿಯಾಂಶಿ ಮೇಲೆ ಹಲ್ಲೆ ನಡೆಸಿದ್ದಾರೆ. ಗಾಯ ಎಷ್ಟು ಆಳವಾಗಿತ್ತೆಂದರೆ ಕುತ್ತಿಗೆಗೆ ಐದು ಹೊಲಿಗೆಗಳನ್ನು ಹಾಕಲಾಗಿದೆ. ಆಕೆಯ ಹೇಳಿಕೆಯ ಆಧಾರದ ಮೇಲೆ, ಪೊಲೀಸರು ಕೊಲೆ ಯತ್ನ ಪ್ರಕರಣವನ್ನು ದಾಖಲಿಸಿಕೊಂಡು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಮುಂಬೈ: ಪತ್ನಿ ಹಾಗೂ ಅಪ್ರಾಪ್ತ ಮಗಳ ಹತ್ಯೆಗೆ ಯತ್ನ, ವ್ಯಕ್ತಿಯ ಬಂಧನ
ಬಂಧನ
ನಯನಾ ರಾಜೀವ್
|

Updated on: Dec 02, 2025 | 1:03 PM

Share

ಮುಂಬೈ, ಡಿಸೆಂಬರ್ 02: ಪತ್ನಿ ಹಾಗೂ ಅಪ್ರಾಪ್ತ ಮಗಳ ಹತ್ಯೆ(Murder)ಗೆ ಯತ್ನಿಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈನ ದಹಿಸರ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಹನುಮಂತ್ ಸೋನ್ವಾಲ್ ಎಂಬುವವರು 14 ವರ್ಷದ ಮಗಳು ಪ್ರಿಯಾಂಶಿ ಮೇಲೆ ಹಲ್ಲೆ ನಡೆಸಿದ್ದಾರೆ. ಗಾಯ ಎಷ್ಟು ಆಳವಾಗಿತ್ತೆಂದರೆ ಕುತ್ತಿಗೆಗೆ ಐದು ಹೊಲಿಗೆಗಳನ್ನು ಹಾಕಲಾಗಿದೆ. ಆಕೆಯ ಹೇಳಿಕೆಯ ಆಧಾರದ ಮೇಲೆ, ಪೊಲೀಸರು ಕೊಲೆ ಯತ್ನ ಪ್ರಕರಣವನ್ನು ದಾಖಲಿಸಿಕೊಂಡು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಸೋನ್ವಾಲ್‌ನನ್ನು ಡಿಸೆಂಬರ್ 3 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಪ್ರಿಯಾಂಶಿ ತನ್ನ ಹೆತ್ತವರಾದ ರಾಜಶ್ರೀ ಮತ್ತು ಹನುಮಂತ್ ಜೊತೆ ದಹಿಸರ್‌ನಲ್ಲಿ ವಾಸವಿದ್ದಾಳೆ.ರಾಜಶ್ರೀ ವಜ್ರ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆ, ಸೋನ್ವಾಲ್ ಕೀಟ ನಿಯಂತ್ರಣ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದಾರೆ.ನಿರಂತರ ಕೌಟುಂಬಿಕ ಹಿಂಸೆ ಮತ್ತು ಕಿರುಕುಳದಿಂದಾಗಿ ರಾಜಶ್ರೀ ಈಗಾಗಲೇ ಬಾಂದ್ರಾ ನ್ಯಾಯಾಲಯದಲ್ಲಿ ವಿಚ್ಛೇದನ ಅರ್ಜಿಯನ್ನು ಸಲ್ಲಿಸಿದ್ದರು .

ತನ್ನ ತಂದೆ ಹೆಚ್ಚಾಗಿ ತನ್ನ ತಾಯಿಯ ಮೇಲೆ ದೈಹಿಕವಾಗಿ ಹಲ್ಲೆ ಮಾಡುತ್ತಿದ್ದರು, ಕುಡಿದಾಗ ಅವರು ಮನುಷ್ಯರೇ ಆಗಿರುತ್ತಿರಲಿಲ್ಲ. ಶನಿವಾರ, ರಾಜಶ್ರೀ ಮತ್ತು ಪ್ರಿಯಾಂಶಿ ಹುಟ್ಟುಹಬ್ಬವನ್ನು ಆಚರಿಸಲು ರೆಸ್ಟೋರೆಂಟ್​ಗೆ ತೆರಳಿದ್ದರು. ಸೋನ್ವಾಲ್ ಅವರನ್ನು ಮನೆಯಲ್ಲಿಯೇ ಬಿಟ್ಟು ಹೋಗಿದ್ದರು. ಅವರಿಬ್ಬರು ಹಿಂದಿರುಗಿದ ಬಳಿಕ ನಿಂದಿಸಿದ್ದಾರೆ.ವಿಚ್ಛೇದನದ ಕುರಿತು ವಕೀಲರನ್ನು ಸಂಪರ್ಕಿಸಲು ರಾಜಶ್ರೀ ನಲಸೋಪಾರಕ್ಕೆ ಹೋದರು.

ಮತ್ತಷ್ಟು ಓದಿ: ತಾಯಿ ಇಲ್ಲದ 15 ವರ್ಷದ ಬಾಲಕಿಯ ಬರ್ಬರ ಹತ್ಯೆ: ದ್ವೇಷದ ಕಥೆ ಬಿಚ್ಚಿಟ್ಟ SP

ಅವರು ಮನೆಗೆ ಹಿಂದಿರುಗಿದಾಗ, ಮತ್ತೊಂದು ಬಿಸಿ ವಾಗ್ವಾದ ನಡೆಯಿತು. ಘರ್ಷಣೆಯ ಸಮಯದಲ್ಲಿ, ರಾಜಶ್ರೀ ಅವರು ತಮ್ಮ ಮನೆಯನ್ನು ಮಾರಿ ಪ್ರಿಯಾಂಶಿಯೊಂದಿಗೆ ಪುಣೆಗೆ ಸ್ಥಳಾಂತರಗೊಳ್ಳಲು ಉದ್ದೇಶಿಸಿರುವುದಾಗಿ ಸೋನ್ವಾಲ್‌ಗೆ ತಿಳಿಸಿರುವುದಾಗಿ ವರದಿಯಾಗಿದೆ.

ರಾತ್ರಿ 10 ಗಂಟೆ ಸುಮಾರಿಗೆ ಸೋನ್ವಾಲ್ ಮನೆಯಿಂದ ಹೊರಗೆಹೋಗಿದ್ದರು. ನಂತರ ತಾಯಿ ಮತ್ತು ಮಗಳು ಮಲಗಲು ಹೋದರು. ಮಧ್ಯರಾತ್ರಿಯ ಸುಮಾರಿಗೆ ಪ್ರಿಯಾಂಶಿ ಇದ್ದಕ್ಕಿದ್ದಂತೆ ತೀವ್ರ ನೋವಿನಿಂದ ಎಚ್ಚರಗೊಂಡಳು ಮತ್ತು ಅವಳ ಕುತ್ತಿಗೆಯಿಂದ ರಕ್ತಸ್ರಾವವಾಗುವುದನ್ನು ಗಮನಿಸಿದಳು.ಘಾತಕ್ಕೊಳಗಾದ ಅವಳು, ತನ್ನ ತಂದೆ ಬ್ಲೇಡ್ ಹಿಡಿದುಕೊಂಡು ತನ್ನ ತಾಯಿಯ ಬಳಿ ನಿಂತಿರುವುದನ್ನು ನೋಡಿ ಭಯಗೊಂಡಿದ್ದಳು.

ಕೂಡಲೇ ತನ್ನ ತಾಯಿಯನ್ನು ಎಚ್ಚರಗೊಳಿಸಿದ್ದಳು. ಪ್ರಿಯಾಂಶಿಯನ್ನು ಚಿಕಿತ್ಸೆಗಾಗಿ ಶತಾಬ್ದಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯಕೀಯ ಪರೀಕ್ಷೆಯ ನಂತರ, ಪೊಲೀಸರು ಆಕೆಯ ಹೇಳಿಕೆಯನ್ನು ದಾಖಲಿಸಿಕೊಂಡರು, ಇದು ಸೋನ್ವಾಲ್ ವಿರುದ್ಧದ ಪ್ರಕರಣಕ್ಕೆ ಆಧಾರವಾಗಿದೆ.

ನಂತರ ಅಧಿಕಾರಿಗಳು ಆತನನ್ನು ಆ ಸ್ಥಳದಿಂದಲೇ ಬಂಧಿಸಿದ್ದಾರೆ. ದಹಿಸರ್ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಸೆರ್ಜೆರಾವ್ ಪಾಟೀಲ್, ಆರೋಪಿಯ ವಿರುದ್ಧ ಕೊಲೆ ಯತ್ನ ಮತ್ತು ಕೌಟುಂಬಿಕ ಹಿಂಸಾಚಾರಕ್ಕೆ ಸಂಬಂಧಿಸಿದ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ದೃಢಪಡಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ