AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ: ಪತ್ನಿ ಹಾಗೂ ಅಪ್ರಾಪ್ತ ಮಗಳ ಹತ್ಯೆಗೆ ಯತ್ನ, ವ್ಯಕ್ತಿಯ ಬಂಧನ

ಪತ್ನಿ ಹಾಗೂ ಅಪ್ರಾಪ್ತ ಮಗಳ ಹತ್ಯೆ(Murder)ಗೆ ಯತ್ನಿಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈನ ದಹಿಸರ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಹನುಮಂತ್ ಸೋನ್ವಾಲ್ ಎಂಬುವವರು 14 ವರ್ಷದ ಮಗಳು ಪ್ರಿಯಾಂಶಿ ಮೇಲೆ ಹಲ್ಲೆ ನಡೆಸಿದ್ದಾರೆ. ಗಾಯ ಎಷ್ಟು ಆಳವಾಗಿತ್ತೆಂದರೆ ಕುತ್ತಿಗೆಗೆ ಐದು ಹೊಲಿಗೆಗಳನ್ನು ಹಾಕಲಾಗಿದೆ. ಆಕೆಯ ಹೇಳಿಕೆಯ ಆಧಾರದ ಮೇಲೆ, ಪೊಲೀಸರು ಕೊಲೆ ಯತ್ನ ಪ್ರಕರಣವನ್ನು ದಾಖಲಿಸಿಕೊಂಡು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಮುಂಬೈ: ಪತ್ನಿ ಹಾಗೂ ಅಪ್ರಾಪ್ತ ಮಗಳ ಹತ್ಯೆಗೆ ಯತ್ನ, ವ್ಯಕ್ತಿಯ ಬಂಧನ
ಬಂಧನ
ನಯನಾ ರಾಜೀವ್
|

Updated on: Dec 02, 2025 | 1:03 PM

Share

ಮುಂಬೈ, ಡಿಸೆಂಬರ್ 02: ಪತ್ನಿ ಹಾಗೂ ಅಪ್ರಾಪ್ತ ಮಗಳ ಹತ್ಯೆ(Murder)ಗೆ ಯತ್ನಿಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈನ ದಹಿಸರ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಹನುಮಂತ್ ಸೋನ್ವಾಲ್ ಎಂಬುವವರು 14 ವರ್ಷದ ಮಗಳು ಪ್ರಿಯಾಂಶಿ ಮೇಲೆ ಹಲ್ಲೆ ನಡೆಸಿದ್ದಾರೆ. ಗಾಯ ಎಷ್ಟು ಆಳವಾಗಿತ್ತೆಂದರೆ ಕುತ್ತಿಗೆಗೆ ಐದು ಹೊಲಿಗೆಗಳನ್ನು ಹಾಕಲಾಗಿದೆ. ಆಕೆಯ ಹೇಳಿಕೆಯ ಆಧಾರದ ಮೇಲೆ, ಪೊಲೀಸರು ಕೊಲೆ ಯತ್ನ ಪ್ರಕರಣವನ್ನು ದಾಖಲಿಸಿಕೊಂಡು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಸೋನ್ವಾಲ್‌ನನ್ನು ಡಿಸೆಂಬರ್ 3 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಪ್ರಿಯಾಂಶಿ ತನ್ನ ಹೆತ್ತವರಾದ ರಾಜಶ್ರೀ ಮತ್ತು ಹನುಮಂತ್ ಜೊತೆ ದಹಿಸರ್‌ನಲ್ಲಿ ವಾಸವಿದ್ದಾಳೆ.ರಾಜಶ್ರೀ ವಜ್ರ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆ, ಸೋನ್ವಾಲ್ ಕೀಟ ನಿಯಂತ್ರಣ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದಾರೆ.ನಿರಂತರ ಕೌಟುಂಬಿಕ ಹಿಂಸೆ ಮತ್ತು ಕಿರುಕುಳದಿಂದಾಗಿ ರಾಜಶ್ರೀ ಈಗಾಗಲೇ ಬಾಂದ್ರಾ ನ್ಯಾಯಾಲಯದಲ್ಲಿ ವಿಚ್ಛೇದನ ಅರ್ಜಿಯನ್ನು ಸಲ್ಲಿಸಿದ್ದರು .

ತನ್ನ ತಂದೆ ಹೆಚ್ಚಾಗಿ ತನ್ನ ತಾಯಿಯ ಮೇಲೆ ದೈಹಿಕವಾಗಿ ಹಲ್ಲೆ ಮಾಡುತ್ತಿದ್ದರು, ಕುಡಿದಾಗ ಅವರು ಮನುಷ್ಯರೇ ಆಗಿರುತ್ತಿರಲಿಲ್ಲ. ಶನಿವಾರ, ರಾಜಶ್ರೀ ಮತ್ತು ಪ್ರಿಯಾಂಶಿ ಹುಟ್ಟುಹಬ್ಬವನ್ನು ಆಚರಿಸಲು ರೆಸ್ಟೋರೆಂಟ್​ಗೆ ತೆರಳಿದ್ದರು. ಸೋನ್ವಾಲ್ ಅವರನ್ನು ಮನೆಯಲ್ಲಿಯೇ ಬಿಟ್ಟು ಹೋಗಿದ್ದರು. ಅವರಿಬ್ಬರು ಹಿಂದಿರುಗಿದ ಬಳಿಕ ನಿಂದಿಸಿದ್ದಾರೆ.ವಿಚ್ಛೇದನದ ಕುರಿತು ವಕೀಲರನ್ನು ಸಂಪರ್ಕಿಸಲು ರಾಜಶ್ರೀ ನಲಸೋಪಾರಕ್ಕೆ ಹೋದರು.

ಮತ್ತಷ್ಟು ಓದಿ: ತಾಯಿ ಇಲ್ಲದ 15 ವರ್ಷದ ಬಾಲಕಿಯ ಬರ್ಬರ ಹತ್ಯೆ: ದ್ವೇಷದ ಕಥೆ ಬಿಚ್ಚಿಟ್ಟ SP

ಅವರು ಮನೆಗೆ ಹಿಂದಿರುಗಿದಾಗ, ಮತ್ತೊಂದು ಬಿಸಿ ವಾಗ್ವಾದ ನಡೆಯಿತು. ಘರ್ಷಣೆಯ ಸಮಯದಲ್ಲಿ, ರಾಜಶ್ರೀ ಅವರು ತಮ್ಮ ಮನೆಯನ್ನು ಮಾರಿ ಪ್ರಿಯಾಂಶಿಯೊಂದಿಗೆ ಪುಣೆಗೆ ಸ್ಥಳಾಂತರಗೊಳ್ಳಲು ಉದ್ದೇಶಿಸಿರುವುದಾಗಿ ಸೋನ್ವಾಲ್‌ಗೆ ತಿಳಿಸಿರುವುದಾಗಿ ವರದಿಯಾಗಿದೆ.

ರಾತ್ರಿ 10 ಗಂಟೆ ಸುಮಾರಿಗೆ ಸೋನ್ವಾಲ್ ಮನೆಯಿಂದ ಹೊರಗೆಹೋಗಿದ್ದರು. ನಂತರ ತಾಯಿ ಮತ್ತು ಮಗಳು ಮಲಗಲು ಹೋದರು. ಮಧ್ಯರಾತ್ರಿಯ ಸುಮಾರಿಗೆ ಪ್ರಿಯಾಂಶಿ ಇದ್ದಕ್ಕಿದ್ದಂತೆ ತೀವ್ರ ನೋವಿನಿಂದ ಎಚ್ಚರಗೊಂಡಳು ಮತ್ತು ಅವಳ ಕುತ್ತಿಗೆಯಿಂದ ರಕ್ತಸ್ರಾವವಾಗುವುದನ್ನು ಗಮನಿಸಿದಳು.ಘಾತಕ್ಕೊಳಗಾದ ಅವಳು, ತನ್ನ ತಂದೆ ಬ್ಲೇಡ್ ಹಿಡಿದುಕೊಂಡು ತನ್ನ ತಾಯಿಯ ಬಳಿ ನಿಂತಿರುವುದನ್ನು ನೋಡಿ ಭಯಗೊಂಡಿದ್ದಳು.

ಕೂಡಲೇ ತನ್ನ ತಾಯಿಯನ್ನು ಎಚ್ಚರಗೊಳಿಸಿದ್ದಳು. ಪ್ರಿಯಾಂಶಿಯನ್ನು ಚಿಕಿತ್ಸೆಗಾಗಿ ಶತಾಬ್ದಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯಕೀಯ ಪರೀಕ್ಷೆಯ ನಂತರ, ಪೊಲೀಸರು ಆಕೆಯ ಹೇಳಿಕೆಯನ್ನು ದಾಖಲಿಸಿಕೊಂಡರು, ಇದು ಸೋನ್ವಾಲ್ ವಿರುದ್ಧದ ಪ್ರಕರಣಕ್ಕೆ ಆಧಾರವಾಗಿದೆ.

ನಂತರ ಅಧಿಕಾರಿಗಳು ಆತನನ್ನು ಆ ಸ್ಥಳದಿಂದಲೇ ಬಂಧಿಸಿದ್ದಾರೆ. ದಹಿಸರ್ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಸೆರ್ಜೆರಾವ್ ಪಾಟೀಲ್, ಆರೋಪಿಯ ವಿರುದ್ಧ ಕೊಲೆ ಯತ್ನ ಮತ್ತು ಕೌಟುಂಬಿಕ ಹಿಂಸಾಚಾರಕ್ಕೆ ಸಂಬಂಧಿಸಿದ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ದೃಢಪಡಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!