AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2021ರಲ್ಲಿ ಭಾರತದ ರಸ್ತೆಗೆ ಎಲೆಕ್ಟ್ರಿಕ್ ಟ್ರಕ್ ಕಾಲಿಡಲಿರುವ ನಿರೀಕ್ಷೆ

ಜರ್ಮನ್ ಮೂಲದ ಟ್ರಕ್ ಮತ್ತು ಬಸ್ ಉತ್ಪಾದಕ ಕಂಪನಿಯಾಗಿರುವ ಡೈಮ್ಲರ್, 2021ರಲ್ಲಿ ಎಲೆಕ್ಟ್ರಿಕ್ ಟ್ರಕ್​ಗಳನ್ನು ರಸ್ತೆಗಿಳಿಸಲು ಯೋಜನೆ ರೂಪಿಸಿದೆ. ಇದು ಸಾಧ್ಯವಾದರೆ ಭಾರತದಲ್ಲಿ ರಸ್ತೆಗೆ ಇಳಿದ ಮೊದಲ ಎಲೆಕ್ಟ್ರಿಕ್ ಟ್ರಕ್ ಎಂಬ ಹಿರಿಮೆಗೆ ಡೈಮ್ಲರ್ ಪಾತ್ರವಾಗಲಿದೆ.

2021ರಲ್ಲಿ ಭಾರತದ ರಸ್ತೆಗೆ ಎಲೆಕ್ಟ್ರಿಕ್ ಟ್ರಕ್ ಕಾಲಿಡಲಿರುವ ನಿರೀಕ್ಷೆ
ಸಾಂಕೇತಿಕ ಚಿತ್ರ
Follow us
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 15, 2020 | 4:00 PM

ದೆಹಲಿ: ಇತ್ತೀಚಿಗಷ್ಟೇ ಉತ್ತರಾಖಂಡ್ ಸರ್ಕಾರ ಎಲೆಕ್ಟ್ರಿಕ್ ಬಸ್ ಆರಂಭಿಸಿದ ಸುದ್ದಿ ಓದಿದ್ದೇವೆ. ಡೈಮ್ಲರ್ ಎಂಬ ಟ್ರಕ್ ಮತ್ತು ಬಸ್ ಉತ್ಪಾದಕ ಕಂಪನಿ ಈ ಕ್ಷೇತ್ರದಲ್ಲಿ ಇನ್ನೊಂದು ಹೆಜ್ಜೆ ಮುಂದಿಟ್ಟಿದೆ. ಜರ್ಮನ್ ಮೂಲದ ಟ್ರಕ್ ಮತ್ತು ಬಸ್ ಉತ್ಪಾದಕ ಕಂಪನಿಯಾಗಿರುವ ಡೈಮ್ಲರ್, 2021ರಲ್ಲಿ ಎಲೆಕ್ಟ್ರಿಕ್ ಟ್ರಕ್​ಗಳನ್ನು ರಸ್ತೆಗಿಳಿಸಲು ಯೋಜನೆ ರೂಪಿಸಿದೆ. ಇದು ಸಾಧ್ಯವಾದರೆ ಭಾರತದಲ್ಲಿ ರಸ್ತೆಗೆ ಇಳಿದ ಮೊದಲ ಎಲೆಕ್ಟ್ರಿಕ್ ಟ್ರಕ್ ಎಂಬ ಹಿರಿಮೆಗೆ ಡೈಮ್ಲರ್ ಪಾತ್ರವಾಗಲಿದೆ. ಡೈಮ್ಲರ್ ಕಂಪನಿಯು ‘ಭಾರತ್ ಬೆಂಜ್’ ಮತ್ತು ‘ಫುಸೋ’ ಎಂಬ ಹೆಸರಿನಲ್ಲಿ ಭಾರತದಲ್ಲಿ ಬೃಹತ್ ಗಾತ್ರದ ವಾಹನಗಳನ್ನು ಮಾರಾಟ ಮಾಡುತ್ತಿದೆ.

ಕಳೆದ ವಾರ ಎಫ್​ಸಿಸಿಐನ ವಾರ್ಷಿಕ ಸಭೆಯ ನಂತರ ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ವಿಷಯ ಬಹಿರಂಗಪಡಿಸಿದ್ದರು. ಡೈಮ್ಲರ್​​ನ ಭಾಗವಾಗಿರುವ ಮರ್ಸಿಡೀಸ್ ಬೆಂಜ್​ನ ಪ್ರತಿನಿಧಿ ಜೊತೆ ಸಂವಾದ ನಡೆಸಿದ ನಂತರ ಗಡ್ಕರಿ ಈ ವಿಷಯ ತಿಳಿಸಿದ್ದರು.

ಡೈಮ್ಲರ್ ಈಗಾಗಲೇ eCanter ಎಂಬ ಎಲೆಕ್ಟ್ರಿಕ್ ಟ್ರಕ್​ಗಳನ್ನು ಬಿಡುಗಡೆಗೊಳಿಸಿದೆ. 2021ರಲ್ಲಿ ಇದೇ ಸರಣಿಯ ಇನ್ನೊಂದು ಟ್ರಕ್​ ಮಾರುಕಟ್ಟೆಗೆ ಬಿಡಲಿದ್ದೇವೆ ಎಂದು ಸಂಸ್ಥೆ ತಿಳಿಸಿದೆ. ಒಮ್ಮೆ ಚಾರ್ಜ್ ಮಾಡಿದರೆ 100 ಕಿಮೀ ಓಡಿಸಲು ಸಾಧ್ಯವಿರುವ eCanter ಟ್ರಕ್​ 3200 ಕೆಜಿ (3.2 ಟನ್) ಭಾರ ಹೋರುವ ಸಾಮರ್ಥ್ಯ ಹೊಂದಿದೆ. ಭಾರತದಲ್ಲಿ ಆಧುನಿಕ ಟ್ರಕ್ ಉತ್ಪಾದನೆಯಲ್ಲಿ ಭಾರತ್ ಬೆಂಜ್ ಈಗಾಗಲೇ ಮುಂಚೂಣಿಯಲ್ಲಿದೆ. ಭಾರತ್ ಬೆಂಜ್​ನ ಬಿಎಸ್ 5 ಟ್ರಕ್​ಗಳು ಜನಪ್ರಿಯವಾಗಿವೆ. ವಿದೇಶಗಳಿಂದ ಆಮದು ಮಾಡಿಕೊಳ್ಳುತ್ತಿರುವ ತೈಲದ ಪ್ರಮಾಣವನ್ನು ಕಡಿಮೆ ಮಾಡುವ ಚಿಂತನೆ ಸರ್ಕಾರಕ್ಕಿದೆ. ಹೀಗಾಗಿ, ಎಲ್ಲಾ ಬಗೆಯ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಉತ್ತೇಜನ ನೀಡುತ್ತಿದೆ.

ಇನ್ನಿತರ ಟ್ರಕ್ ಉತ್ಪಾದಕ ಕಂಪನಿಗಳಾದ ಮಹೇಂದ್ರ, ಟಾಟಾ ಕಂಪನಿಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದಿಸುವತ್ತ ಹೆಜ್ಜೆ ಹಾಕುವ ನಿರೀಕ್ಷೆಯಿದೆ.

ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ