AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2021ರಲ್ಲಿ ಭಾರತದ ರಸ್ತೆಗೆ ಎಲೆಕ್ಟ್ರಿಕ್ ಟ್ರಕ್ ಕಾಲಿಡಲಿರುವ ನಿರೀಕ್ಷೆ

ಜರ್ಮನ್ ಮೂಲದ ಟ್ರಕ್ ಮತ್ತು ಬಸ್ ಉತ್ಪಾದಕ ಕಂಪನಿಯಾಗಿರುವ ಡೈಮ್ಲರ್, 2021ರಲ್ಲಿ ಎಲೆಕ್ಟ್ರಿಕ್ ಟ್ರಕ್​ಗಳನ್ನು ರಸ್ತೆಗಿಳಿಸಲು ಯೋಜನೆ ರೂಪಿಸಿದೆ. ಇದು ಸಾಧ್ಯವಾದರೆ ಭಾರತದಲ್ಲಿ ರಸ್ತೆಗೆ ಇಳಿದ ಮೊದಲ ಎಲೆಕ್ಟ್ರಿಕ್ ಟ್ರಕ್ ಎಂಬ ಹಿರಿಮೆಗೆ ಡೈಮ್ಲರ್ ಪಾತ್ರವಾಗಲಿದೆ.

2021ರಲ್ಲಿ ಭಾರತದ ರಸ್ತೆಗೆ ಎಲೆಕ್ಟ್ರಿಕ್ ಟ್ರಕ್ ಕಾಲಿಡಲಿರುವ ನಿರೀಕ್ಷೆ
ಸಾಂಕೇತಿಕ ಚಿತ್ರ
guruganesh bhat
| Edited By: |

Updated on: Dec 15, 2020 | 4:00 PM

Share

ದೆಹಲಿ: ಇತ್ತೀಚಿಗಷ್ಟೇ ಉತ್ತರಾಖಂಡ್ ಸರ್ಕಾರ ಎಲೆಕ್ಟ್ರಿಕ್ ಬಸ್ ಆರಂಭಿಸಿದ ಸುದ್ದಿ ಓದಿದ್ದೇವೆ. ಡೈಮ್ಲರ್ ಎಂಬ ಟ್ರಕ್ ಮತ್ತು ಬಸ್ ಉತ್ಪಾದಕ ಕಂಪನಿ ಈ ಕ್ಷೇತ್ರದಲ್ಲಿ ಇನ್ನೊಂದು ಹೆಜ್ಜೆ ಮುಂದಿಟ್ಟಿದೆ. ಜರ್ಮನ್ ಮೂಲದ ಟ್ರಕ್ ಮತ್ತು ಬಸ್ ಉತ್ಪಾದಕ ಕಂಪನಿಯಾಗಿರುವ ಡೈಮ್ಲರ್, 2021ರಲ್ಲಿ ಎಲೆಕ್ಟ್ರಿಕ್ ಟ್ರಕ್​ಗಳನ್ನು ರಸ್ತೆಗಿಳಿಸಲು ಯೋಜನೆ ರೂಪಿಸಿದೆ. ಇದು ಸಾಧ್ಯವಾದರೆ ಭಾರತದಲ್ಲಿ ರಸ್ತೆಗೆ ಇಳಿದ ಮೊದಲ ಎಲೆಕ್ಟ್ರಿಕ್ ಟ್ರಕ್ ಎಂಬ ಹಿರಿಮೆಗೆ ಡೈಮ್ಲರ್ ಪಾತ್ರವಾಗಲಿದೆ. ಡೈಮ್ಲರ್ ಕಂಪನಿಯು ‘ಭಾರತ್ ಬೆಂಜ್’ ಮತ್ತು ‘ಫುಸೋ’ ಎಂಬ ಹೆಸರಿನಲ್ಲಿ ಭಾರತದಲ್ಲಿ ಬೃಹತ್ ಗಾತ್ರದ ವಾಹನಗಳನ್ನು ಮಾರಾಟ ಮಾಡುತ್ತಿದೆ.

ಕಳೆದ ವಾರ ಎಫ್​ಸಿಸಿಐನ ವಾರ್ಷಿಕ ಸಭೆಯ ನಂತರ ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ವಿಷಯ ಬಹಿರಂಗಪಡಿಸಿದ್ದರು. ಡೈಮ್ಲರ್​​ನ ಭಾಗವಾಗಿರುವ ಮರ್ಸಿಡೀಸ್ ಬೆಂಜ್​ನ ಪ್ರತಿನಿಧಿ ಜೊತೆ ಸಂವಾದ ನಡೆಸಿದ ನಂತರ ಗಡ್ಕರಿ ಈ ವಿಷಯ ತಿಳಿಸಿದ್ದರು.

ಡೈಮ್ಲರ್ ಈಗಾಗಲೇ eCanter ಎಂಬ ಎಲೆಕ್ಟ್ರಿಕ್ ಟ್ರಕ್​ಗಳನ್ನು ಬಿಡುಗಡೆಗೊಳಿಸಿದೆ. 2021ರಲ್ಲಿ ಇದೇ ಸರಣಿಯ ಇನ್ನೊಂದು ಟ್ರಕ್​ ಮಾರುಕಟ್ಟೆಗೆ ಬಿಡಲಿದ್ದೇವೆ ಎಂದು ಸಂಸ್ಥೆ ತಿಳಿಸಿದೆ. ಒಮ್ಮೆ ಚಾರ್ಜ್ ಮಾಡಿದರೆ 100 ಕಿಮೀ ಓಡಿಸಲು ಸಾಧ್ಯವಿರುವ eCanter ಟ್ರಕ್​ 3200 ಕೆಜಿ (3.2 ಟನ್) ಭಾರ ಹೋರುವ ಸಾಮರ್ಥ್ಯ ಹೊಂದಿದೆ. ಭಾರತದಲ್ಲಿ ಆಧುನಿಕ ಟ್ರಕ್ ಉತ್ಪಾದನೆಯಲ್ಲಿ ಭಾರತ್ ಬೆಂಜ್ ಈಗಾಗಲೇ ಮುಂಚೂಣಿಯಲ್ಲಿದೆ. ಭಾರತ್ ಬೆಂಜ್​ನ ಬಿಎಸ್ 5 ಟ್ರಕ್​ಗಳು ಜನಪ್ರಿಯವಾಗಿವೆ. ವಿದೇಶಗಳಿಂದ ಆಮದು ಮಾಡಿಕೊಳ್ಳುತ್ತಿರುವ ತೈಲದ ಪ್ರಮಾಣವನ್ನು ಕಡಿಮೆ ಮಾಡುವ ಚಿಂತನೆ ಸರ್ಕಾರಕ್ಕಿದೆ. ಹೀಗಾಗಿ, ಎಲ್ಲಾ ಬಗೆಯ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಉತ್ತೇಜನ ನೀಡುತ್ತಿದೆ.

ಇನ್ನಿತರ ಟ್ರಕ್ ಉತ್ಪಾದಕ ಕಂಪನಿಗಳಾದ ಮಹೇಂದ್ರ, ಟಾಟಾ ಕಂಪನಿಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದಿಸುವತ್ತ ಹೆಜ್ಜೆ ಹಾಕುವ ನಿರೀಕ್ಷೆಯಿದೆ.

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ