AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2021ರಲ್ಲಿ ಭಾರತದ ರಸ್ತೆಗೆ ಎಲೆಕ್ಟ್ರಿಕ್ ಟ್ರಕ್ ಕಾಲಿಡಲಿರುವ ನಿರೀಕ್ಷೆ

ಜರ್ಮನ್ ಮೂಲದ ಟ್ರಕ್ ಮತ್ತು ಬಸ್ ಉತ್ಪಾದಕ ಕಂಪನಿಯಾಗಿರುವ ಡೈಮ್ಲರ್, 2021ರಲ್ಲಿ ಎಲೆಕ್ಟ್ರಿಕ್ ಟ್ರಕ್​ಗಳನ್ನು ರಸ್ತೆಗಿಳಿಸಲು ಯೋಜನೆ ರೂಪಿಸಿದೆ. ಇದು ಸಾಧ್ಯವಾದರೆ ಭಾರತದಲ್ಲಿ ರಸ್ತೆಗೆ ಇಳಿದ ಮೊದಲ ಎಲೆಕ್ಟ್ರಿಕ್ ಟ್ರಕ್ ಎಂಬ ಹಿರಿಮೆಗೆ ಡೈಮ್ಲರ್ ಪಾತ್ರವಾಗಲಿದೆ.

2021ರಲ್ಲಿ ಭಾರತದ ರಸ್ತೆಗೆ ಎಲೆಕ್ಟ್ರಿಕ್ ಟ್ರಕ್ ಕಾಲಿಡಲಿರುವ ನಿರೀಕ್ಷೆ
ಸಾಂಕೇತಿಕ ಚಿತ್ರ
guruganesh bhat
| Edited By: |

Updated on: Dec 15, 2020 | 4:00 PM

Share

ದೆಹಲಿ: ಇತ್ತೀಚಿಗಷ್ಟೇ ಉತ್ತರಾಖಂಡ್ ಸರ್ಕಾರ ಎಲೆಕ್ಟ್ರಿಕ್ ಬಸ್ ಆರಂಭಿಸಿದ ಸುದ್ದಿ ಓದಿದ್ದೇವೆ. ಡೈಮ್ಲರ್ ಎಂಬ ಟ್ರಕ್ ಮತ್ತು ಬಸ್ ಉತ್ಪಾದಕ ಕಂಪನಿ ಈ ಕ್ಷೇತ್ರದಲ್ಲಿ ಇನ್ನೊಂದು ಹೆಜ್ಜೆ ಮುಂದಿಟ್ಟಿದೆ. ಜರ್ಮನ್ ಮೂಲದ ಟ್ರಕ್ ಮತ್ತು ಬಸ್ ಉತ್ಪಾದಕ ಕಂಪನಿಯಾಗಿರುವ ಡೈಮ್ಲರ್, 2021ರಲ್ಲಿ ಎಲೆಕ್ಟ್ರಿಕ್ ಟ್ರಕ್​ಗಳನ್ನು ರಸ್ತೆಗಿಳಿಸಲು ಯೋಜನೆ ರೂಪಿಸಿದೆ. ಇದು ಸಾಧ್ಯವಾದರೆ ಭಾರತದಲ್ಲಿ ರಸ್ತೆಗೆ ಇಳಿದ ಮೊದಲ ಎಲೆಕ್ಟ್ರಿಕ್ ಟ್ರಕ್ ಎಂಬ ಹಿರಿಮೆಗೆ ಡೈಮ್ಲರ್ ಪಾತ್ರವಾಗಲಿದೆ. ಡೈಮ್ಲರ್ ಕಂಪನಿಯು ‘ಭಾರತ್ ಬೆಂಜ್’ ಮತ್ತು ‘ಫುಸೋ’ ಎಂಬ ಹೆಸರಿನಲ್ಲಿ ಭಾರತದಲ್ಲಿ ಬೃಹತ್ ಗಾತ್ರದ ವಾಹನಗಳನ್ನು ಮಾರಾಟ ಮಾಡುತ್ತಿದೆ.

ಕಳೆದ ವಾರ ಎಫ್​ಸಿಸಿಐನ ವಾರ್ಷಿಕ ಸಭೆಯ ನಂತರ ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ವಿಷಯ ಬಹಿರಂಗಪಡಿಸಿದ್ದರು. ಡೈಮ್ಲರ್​​ನ ಭಾಗವಾಗಿರುವ ಮರ್ಸಿಡೀಸ್ ಬೆಂಜ್​ನ ಪ್ರತಿನಿಧಿ ಜೊತೆ ಸಂವಾದ ನಡೆಸಿದ ನಂತರ ಗಡ್ಕರಿ ಈ ವಿಷಯ ತಿಳಿಸಿದ್ದರು.

ಡೈಮ್ಲರ್ ಈಗಾಗಲೇ eCanter ಎಂಬ ಎಲೆಕ್ಟ್ರಿಕ್ ಟ್ರಕ್​ಗಳನ್ನು ಬಿಡುಗಡೆಗೊಳಿಸಿದೆ. 2021ರಲ್ಲಿ ಇದೇ ಸರಣಿಯ ಇನ್ನೊಂದು ಟ್ರಕ್​ ಮಾರುಕಟ್ಟೆಗೆ ಬಿಡಲಿದ್ದೇವೆ ಎಂದು ಸಂಸ್ಥೆ ತಿಳಿಸಿದೆ. ಒಮ್ಮೆ ಚಾರ್ಜ್ ಮಾಡಿದರೆ 100 ಕಿಮೀ ಓಡಿಸಲು ಸಾಧ್ಯವಿರುವ eCanter ಟ್ರಕ್​ 3200 ಕೆಜಿ (3.2 ಟನ್) ಭಾರ ಹೋರುವ ಸಾಮರ್ಥ್ಯ ಹೊಂದಿದೆ. ಭಾರತದಲ್ಲಿ ಆಧುನಿಕ ಟ್ರಕ್ ಉತ್ಪಾದನೆಯಲ್ಲಿ ಭಾರತ್ ಬೆಂಜ್ ಈಗಾಗಲೇ ಮುಂಚೂಣಿಯಲ್ಲಿದೆ. ಭಾರತ್ ಬೆಂಜ್​ನ ಬಿಎಸ್ 5 ಟ್ರಕ್​ಗಳು ಜನಪ್ರಿಯವಾಗಿವೆ. ವಿದೇಶಗಳಿಂದ ಆಮದು ಮಾಡಿಕೊಳ್ಳುತ್ತಿರುವ ತೈಲದ ಪ್ರಮಾಣವನ್ನು ಕಡಿಮೆ ಮಾಡುವ ಚಿಂತನೆ ಸರ್ಕಾರಕ್ಕಿದೆ. ಹೀಗಾಗಿ, ಎಲ್ಲಾ ಬಗೆಯ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಉತ್ತೇಜನ ನೀಡುತ್ತಿದೆ.

ಇನ್ನಿತರ ಟ್ರಕ್ ಉತ್ಪಾದಕ ಕಂಪನಿಗಳಾದ ಮಹೇಂದ್ರ, ಟಾಟಾ ಕಂಪನಿಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದಿಸುವತ್ತ ಹೆಜ್ಜೆ ಹಾಕುವ ನಿರೀಕ್ಷೆಯಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್