AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2021ರಲ್ಲಿ ಭಾರತದ ರಸ್ತೆಗೆ ಎಲೆಕ್ಟ್ರಿಕ್ ಟ್ರಕ್ ಕಾಲಿಡಲಿರುವ ನಿರೀಕ್ಷೆ

ಜರ್ಮನ್ ಮೂಲದ ಟ್ರಕ್ ಮತ್ತು ಬಸ್ ಉತ್ಪಾದಕ ಕಂಪನಿಯಾಗಿರುವ ಡೈಮ್ಲರ್, 2021ರಲ್ಲಿ ಎಲೆಕ್ಟ್ರಿಕ್ ಟ್ರಕ್​ಗಳನ್ನು ರಸ್ತೆಗಿಳಿಸಲು ಯೋಜನೆ ರೂಪಿಸಿದೆ. ಇದು ಸಾಧ್ಯವಾದರೆ ಭಾರತದಲ್ಲಿ ರಸ್ತೆಗೆ ಇಳಿದ ಮೊದಲ ಎಲೆಕ್ಟ್ರಿಕ್ ಟ್ರಕ್ ಎಂಬ ಹಿರಿಮೆಗೆ ಡೈಮ್ಲರ್ ಪಾತ್ರವಾಗಲಿದೆ.

2021ರಲ್ಲಿ ಭಾರತದ ರಸ್ತೆಗೆ ಎಲೆಕ್ಟ್ರಿಕ್ ಟ್ರಕ್ ಕಾಲಿಡಲಿರುವ ನಿರೀಕ್ಷೆ
ಸಾಂಕೇತಿಕ ಚಿತ್ರ
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Dec 15, 2020 | 4:00 PM

Share

ದೆಹಲಿ: ಇತ್ತೀಚಿಗಷ್ಟೇ ಉತ್ತರಾಖಂಡ್ ಸರ್ಕಾರ ಎಲೆಕ್ಟ್ರಿಕ್ ಬಸ್ ಆರಂಭಿಸಿದ ಸುದ್ದಿ ಓದಿದ್ದೇವೆ. ಡೈಮ್ಲರ್ ಎಂಬ ಟ್ರಕ್ ಮತ್ತು ಬಸ್ ಉತ್ಪಾದಕ ಕಂಪನಿ ಈ ಕ್ಷೇತ್ರದಲ್ಲಿ ಇನ್ನೊಂದು ಹೆಜ್ಜೆ ಮುಂದಿಟ್ಟಿದೆ. ಜರ್ಮನ್ ಮೂಲದ ಟ್ರಕ್ ಮತ್ತು ಬಸ್ ಉತ್ಪಾದಕ ಕಂಪನಿಯಾಗಿರುವ ಡೈಮ್ಲರ್, 2021ರಲ್ಲಿ ಎಲೆಕ್ಟ್ರಿಕ್ ಟ್ರಕ್​ಗಳನ್ನು ರಸ್ತೆಗಿಳಿಸಲು ಯೋಜನೆ ರೂಪಿಸಿದೆ. ಇದು ಸಾಧ್ಯವಾದರೆ ಭಾರತದಲ್ಲಿ ರಸ್ತೆಗೆ ಇಳಿದ ಮೊದಲ ಎಲೆಕ್ಟ್ರಿಕ್ ಟ್ರಕ್ ಎಂಬ ಹಿರಿಮೆಗೆ ಡೈಮ್ಲರ್ ಪಾತ್ರವಾಗಲಿದೆ. ಡೈಮ್ಲರ್ ಕಂಪನಿಯು ‘ಭಾರತ್ ಬೆಂಜ್’ ಮತ್ತು ‘ಫುಸೋ’ ಎಂಬ ಹೆಸರಿನಲ್ಲಿ ಭಾರತದಲ್ಲಿ ಬೃಹತ್ ಗಾತ್ರದ ವಾಹನಗಳನ್ನು ಮಾರಾಟ ಮಾಡುತ್ತಿದೆ.

ಕಳೆದ ವಾರ ಎಫ್​ಸಿಸಿಐನ ವಾರ್ಷಿಕ ಸಭೆಯ ನಂತರ ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ವಿಷಯ ಬಹಿರಂಗಪಡಿಸಿದ್ದರು. ಡೈಮ್ಲರ್​​ನ ಭಾಗವಾಗಿರುವ ಮರ್ಸಿಡೀಸ್ ಬೆಂಜ್​ನ ಪ್ರತಿನಿಧಿ ಜೊತೆ ಸಂವಾದ ನಡೆಸಿದ ನಂತರ ಗಡ್ಕರಿ ಈ ವಿಷಯ ತಿಳಿಸಿದ್ದರು.

ಡೈಮ್ಲರ್ ಈಗಾಗಲೇ eCanter ಎಂಬ ಎಲೆಕ್ಟ್ರಿಕ್ ಟ್ರಕ್​ಗಳನ್ನು ಬಿಡುಗಡೆಗೊಳಿಸಿದೆ. 2021ರಲ್ಲಿ ಇದೇ ಸರಣಿಯ ಇನ್ನೊಂದು ಟ್ರಕ್​ ಮಾರುಕಟ್ಟೆಗೆ ಬಿಡಲಿದ್ದೇವೆ ಎಂದು ಸಂಸ್ಥೆ ತಿಳಿಸಿದೆ. ಒಮ್ಮೆ ಚಾರ್ಜ್ ಮಾಡಿದರೆ 100 ಕಿಮೀ ಓಡಿಸಲು ಸಾಧ್ಯವಿರುವ eCanter ಟ್ರಕ್​ 3200 ಕೆಜಿ (3.2 ಟನ್) ಭಾರ ಹೋರುವ ಸಾಮರ್ಥ್ಯ ಹೊಂದಿದೆ. ಭಾರತದಲ್ಲಿ ಆಧುನಿಕ ಟ್ರಕ್ ಉತ್ಪಾದನೆಯಲ್ಲಿ ಭಾರತ್ ಬೆಂಜ್ ಈಗಾಗಲೇ ಮುಂಚೂಣಿಯಲ್ಲಿದೆ. ಭಾರತ್ ಬೆಂಜ್​ನ ಬಿಎಸ್ 5 ಟ್ರಕ್​ಗಳು ಜನಪ್ರಿಯವಾಗಿವೆ. ವಿದೇಶಗಳಿಂದ ಆಮದು ಮಾಡಿಕೊಳ್ಳುತ್ತಿರುವ ತೈಲದ ಪ್ರಮಾಣವನ್ನು ಕಡಿಮೆ ಮಾಡುವ ಚಿಂತನೆ ಸರ್ಕಾರಕ್ಕಿದೆ. ಹೀಗಾಗಿ, ಎಲ್ಲಾ ಬಗೆಯ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಉತ್ತೇಜನ ನೀಡುತ್ತಿದೆ.

ಇನ್ನಿತರ ಟ್ರಕ್ ಉತ್ಪಾದಕ ಕಂಪನಿಗಳಾದ ಮಹೇಂದ್ರ, ಟಾಟಾ ಕಂಪನಿಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದಿಸುವತ್ತ ಹೆಜ್ಜೆ ಹಾಕುವ ನಿರೀಕ್ಷೆಯಿದೆ.

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?