AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಲೈ ಲಾಮಾ ಬಿಟ್ಟು ಬೇರಾರೂ ಉತ್ತರಾಧಿಕಾರಿಯನ್ನು ನಿರ್ಧರಿಸಲು ಸಾಧ್ಯವಿಲ್ಲ; ಚೀನಾಕ್ಕೆ ಭಾರತ ಸ್ಪಷ್ಟ ಸಂದೇಶ

ಶೀಘ್ರದಲ್ಲೇ ನನ್ನ ಉತ್ತರಾಧಿಕಾರಿಯನ್ನು ಘೋಷಿಸಲಾಗುವುದು ಎಂದು ದಲೈ ಲಾಮಾ ಘೋಷಿಸಿದ ಕೂಡಲೆ ಪ್ರತಿಕ್ರಿಯಿಸಿದ್ದ ಚೀನಾ ದಲೈ ಲಾಮಾ ಅವರ ಉತ್ತರಾಧಿಕಾರಿಗೆ ನಮ್ಮ ಸರ್ಕಾರದ ಅನುಮೋದನೆ ಬೇಕು ಎಂದಿದ್ದರು. ದಲೈ ಲಾಮಾ ಅವರು ಟಿಬೆಟಿಯನ್ನರಿಗೆ ಮಾತ್ರವಲ್ಲದೆ ಜಗತ್ತಿನ ಲಕ್ಷಾಂತರ ಅನುಯಾಯಿಗಳಿಗೂ ಬಹಳ ಮಹತ್ವದ ಸ್ಥಾನವನ್ನು ಹೊಂದಿದ್ದಾರೆ. ಅವರ ಉತ್ತರಾಧಿಕಾರಿಯ ಬಗ್ಗೆ ನಿರ್ಧಾರವು ದಲೈ ಲಾಮಾ ಅವರ ಮೇಲಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ದಲೈ ಲಾಮಾ ಬಿಟ್ಟು ಬೇರಾರೂ ಉತ್ತರಾಧಿಕಾರಿಯನ್ನು ನಿರ್ಧರಿಸಲು ಸಾಧ್ಯವಿಲ್ಲ; ಚೀನಾಕ್ಕೆ ಭಾರತ ಸ್ಪಷ್ಟ ಸಂದೇಶ
Dalai Lama
ಸುಷ್ಮಾ ಚಕ್ರೆ
|

Updated on:Jul 03, 2025 | 4:20 PM

Share

ನವದೆಹಲಿ, ಜುಲೈ 3: ದಲೈ ಲಾಮಾ ಅವರ ಮುಂದಿನ ಉತ್ತರಾಧಿಕಾರಿಯನ್ನು ಬೀಜಿಂಗ್ ಅನುಮೋದಿಸಬೇಕು ಎಂಬ ಚೀನಾದ ಪ್ರತಿಪಾದನೆಗೆ ಭಾರತ ಇಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಟಿಬೆಟಿಯನ್ ಆಧ್ಯಾತ್ಮಿಕ ನಾಯಕನಾದ ದಲೈ ಲಾಮಾ ಮಾತ್ರ ಅವರ ಉತ್ತರಾಧಿಕಾರಿಯನ್ನು ನಿರ್ಧರಿಸುವ ಅಧಿಕಾರ ಹೊಂದಿದ್ದಾರೆ ಎಂದು ಹೇಳಿದೆ. ಬೀಜಿಂಗ್ ದಲೈ ಲಾಮಾ ಅವರ ಉತ್ತರಾಧಿಕಾರಿಯನ್ನು ಅನುಮೋದಿಸಬೇಕು ಎಂಬ ಚೀನಾದ ಬೇಡಿಕೆಗೆ ಭಾರತ ಇಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಟಿಬೆಟಿಯನ್ ಆಧ್ಯಾತ್ಮಿಕ ನಾಯಕನನ್ನು ಹೊರತುಪಡಿಸಿ ಬೇರೆ ಯಾರಿಗೂ ಅವರ ಉತ್ತರಾಧಿಕಾರಿಯನ್ನು ನಿರ್ಧರಿಸುವ ಅಧಿಕಾರವಿಲ್ಲ ಎಂದು ಭಾರತ ಪ್ರತಿಪಾದಿಸಿತು.

ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ನೀಡಿರುವ ಹೇಳಿಕೆಯಲ್ಲಿ, “ದಲೈ ಲಾಮಾ ಅವರ ಸ್ಥಾನವು ಟಿಬೆಟಿಯನ್ನರಿಗೆ ಮಾತ್ರವಲ್ಲ, ಪ್ರಪಂಚದಾದ್ಯಂತದ ಅವರ ಎಲ್ಲಾ ಅನುಯಾಯಿಗಳಿಗೆ ಅತ್ಯಂತ ಮಹತ್ವದ್ದಾಗಿದೆ. ಅವರ ಉತ್ತರಾಧಿಕಾರಿಯನ್ನು ನಿರ್ಧರಿಸುವ ಹಕ್ಕು ದಲೈ ಲಾಮಾ ಅವರ ಮೇಲಿದೆ. ಆ ಅಧಿಕಾರ ಬೇರಾರಿಗೂ ಇಲ್ಲ” ಎಂದು ಚೀನಾಗೆ ಚಾಟಿ ಬೀಸಿದ್ದಾರೆ.

ಇದನ್ನೂ ಓದಿ: ಶೀಘ್ರದಲ್ಲೇ ಉತ್ತರಾಧಿಕಾರಿ ಘೋಷಣೆ; ಚೀನಾಗೆ ಸವಾಲೆಸೆದ ದಲೈ ಲಾಮಾ

ದಲೈ ಲಾಮಾ ಅವರ 90ನೇ ಹುಟ್ಟುಹಬ್ಬದ ಕಾರ್ಯಕ್ರಮಗಳಿಗೆ ಹಾಜರಾಗಲು ಭಾರತ ಸರ್ಕಾರದ ಪ್ರತಿನಿಧಿಗಳಾಗಿ ರಿಜಿಜು ಮತ್ತು ಜನತಾದಳ (ಯುನೈಟೆಡ್) ನಾಯಕ ಲಲ್ಲನ್ ಸಿಂಗ್ ಧರ್ಮಶಾಲಾಗೆ ಭೇಟಿ ನೀಡುತ್ತಿದ್ದಾರೆ. “ಇದು ಸಂಪೂರ್ಣವಾಗಿ ಧಾರ್ಮಿಕ ಸಂದರ್ಭ” ಎಂದು ರಿಜಿಜು ಹೇಳಿದ್ದಾರೆ. ದಲೈ ಲಾಮಾ ಅವರ 600 ವರ್ಷಗಳಷ್ಟು ಹಳೆಯದಾದ ಸಂಸ್ಥೆಯು ತಮ್ಮ ಜೀವಿತಾವಧಿಯ ನಂತರವೂ ಮುಂದುವರಿಯುತ್ತದೆ. 15ನೇ ದಲೈ ಲಾಮಾ ಅವರ ಆಯ್ಕೆಯು ಸಂಪೂರ್ಣವಾಗಿ ದಲೈ ಲಾಮಾ ಅವರ ಅಧಿಕೃತ ಕಚೇರಿಯಾದ ಗಾಡೆನ್ ಫೋಡ್ರಾಂಗ್ ಟ್ರಸ್ಟ್‌ನ ಮೇಲಿರುತ್ತದೆ ಎಂದು ಚೀನಾದಿಂದ ಗಡೀಪಾರು ಮಾಡಲಾದ ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಪುನರುಚ್ಚರಿಸಿದ ನಂತರ ಕೇಂದ್ರ ಸಚಿವರ ಈ ಹೇಳಿಕೆಗಳು ಬಂದಿವೆ.

ಇದನ್ನೂ ಓದಿ: ಉತ್ತರಾಧಿಕಾರಿಯನ್ನು ನಾವೇ ಆಯ್ಕೆ ಮಾಡುತ್ತೇವೆ; ದಲೈ ಲಾಮಾಗೆ ಚೀನಾ ಚಾಟಿ

1959ರಲ್ಲಿ ಚೀನಾದ ಆಳ್ವಿಕೆಯ ವಿರುದ್ಧ ವಿಫಲವಾದ ದಂಗೆಯ ನಂತರ ಪಲಾಯನ ಮಾಡಿದ ನಂತರ ದಲೈ ಲಾಮಾ ಭಾರತದಲ್ಲಿ ವಾಸ್ತವ್ಯ ಹೂಡಿದ್ದಾರೆ. ಬೀಜಿಂಗ್ ಅವರನ್ನು ಚೀನಾದಿಂದ ಟಿಬೆಟ್ ಅನ್ನು ವಿಭಜಿಸುವ ಪ್ರತ್ಯೇಕತಾವಾದಿ ಎಂದು ಹಣೆಪಟ್ಟಿ ಕಟ್ಟುತ್ತಲೇ ಇದ್ದರೂ, ದಲೈ ಲಾಮಾ ಅವರನ್ನು ವಿಶ್ವಾದ್ಯಂತ ಅಹಿಂಸೆ, ಕರುಣೆ ಮತ್ತು ಟಿಬೆಟಿಯನ್ ಜನರು ತಮ್ಮ ಸಾಂಸ್ಕೃತಿಕ ಮತ್ತು ಧಾರ್ಮಿಕ ಗುರುತನ್ನು ರಕ್ಷಿಸುವ ಹೋರಾಟದ ಸಂಕೇತವಾಗಿ ನೋಡಲಾಗುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 4:17 pm, Thu, 3 July 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ