AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dalai Lama: ಲಡಾಖ್ ಪ್ರವಾಸದ ಬೆನ್ನಲ್ಲೇ ಚೀನಾಗೆ ಮಹತ್ವದ ಸಂದೇಶ ರವಾನಿಸಿದ ದಲೈ ಲಾಮಾ

ಗುರುವಾರ ಜಮ್ಮುವಿಗೆ ಆಗಮಿಸಿದ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಅವರನ್ನು ಲಡಾಖ್​ನಿಂದ ನೂರಾರು ಜನರು ಸ್ವಾಗತಿಸಿದರು. 14ನೇ ದಲೈ ಲಾಮಾ ಇಂದು ಲೇಹ್‌ಗೆ ತೆರಳಲಿದ್ದಾರೆ. ಅಲ್ಲಿ ಅವರು ಒಂದು ತಿಂಗಳ ಕಾಲ ಉಳಿಯುವ ನಿರೀಕ್ಷೆಯಿದೆ.

Dalai Lama: ಲಡಾಖ್ ಪ್ರವಾಸದ ಬೆನ್ನಲ್ಲೇ ಚೀನಾಗೆ ಮಹತ್ವದ ಸಂದೇಶ ರವಾನಿಸಿದ ದಲೈ ಲಾಮಾ
ದಲೈ ಲಾಮಾ
TV9 Web
| Updated By: ಸುಷ್ಮಾ ಚಕ್ರೆ|

Updated on: Jul 15, 2022 | 11:49 AM

Share

ಶ್ರೀನಗರ: ಲಡಾಖ್​ನಲ್ಲಿರುವ ಗಡಿ ನಿಯಂತ್ರಣ ರೇಖೆಯ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳಲು ಟಿಬೆಟಿಯನ್ ಆಧ್ಯಾತ್ಮಿಕ ಗುರು ದಲೈ ಲಾಮಾ ಸಲಹೆ ನೀಡಿದ್ದಾರೆ. ಭಾರತ 2019ರ ಆಗಸ್ಟ್‌ನಲ್ಲಿ ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿದ ನಂತರ ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಲಡಾಖ್‌ಗೆ ಮೊದಲ ಬಾರಿಗೆ ಭೇಟಿ ನೀಡಿದ್ದಾರೆ. ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಮತ್ತೊಮ್ಮೆ ಪೂರ್ವ ಲಡಾಖ್‌ನಲ್ಲಿನ ನೈಜ ನಿಯಂತ್ರಣ ರೇಖೆಯಲ್ಲಿ (ಎಲ್‌ಎಸಿ) ಭಾರತ ಮತ್ತು ಚೀನಾ ನಡುವೆ ನಡೆಯುತ್ತಿರುವ ಉದ್ವಿಗ್ನತೆಗೆ ಶಾಂತಿಯುತ ಪರಿಹಾರ ಕಂಡುಕೊಳ್ಳಬೇಕೆಂದು ಪ್ರತಿಪಾದಿಸಿದ್ದಾರೆ.

ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ, ಅಥವಾ ಪಿಎಲ್‌ಎ ಮತ್ತು ಪೂರ್ವ ಲಡಾಖ್‌ನಲ್ಲಿನ ಗಡಿ ನಿಯಂತ್ರಣ ರೇಖೆಯ (ಎಲ್‌ಎಸಿ) ನಡುವೆ ಭಾರತೀಯ ಸೇನೆಯ ನಡುವಿನ ಸುದೀರ್ಘ ಬಿಕ್ಕಟ್ಟಿನ ಮಧ್ಯೆ ದಲೈ ಲಾಮಾ ಅವರ ಈ ಭೇಟಿಯಿಂದ ಚೀನಾ ಅಸಮಾಧಾನಗೊಳ್ಳುವ ಸಾಧ್ಯತೆಯಿದೆ. ದಲೈ ಲಾಮಾ ಅವರು ಜಮ್ಮುವನ್ನು ತಲುಪಿದ ಕೂಡಲೇ ಮಾತನಾಡಿದ್ದು, “ಕೆಲವು ಚೀನೀ ಕಠಿಣವಾದಿಗಳು ನನ್ನನ್ನು ಪ್ರತ್ಯೇಕತಾವಾದಿ ಮತ್ತು ಪ್ರತಿಗಾಮಿ ಎಂದು ಪರಿಗಣಿಸುತ್ತಾರೆ. ಯಾವಾಗಲೂ ನನ್ನನ್ನು ಟೀಕಿಸುತ್ತಾರೆ. ಆದರೆ, ಚೀನಿಯರು ದಲೈ ಲಾಮಾ ಅವರು ಸ್ವಾತಂತ್ರ್ಯವನ್ನು ಬಯಸುತ್ತಿಲ್ಲ, ಆದರೆ ಚೀನಾದಲ್ಲಿ ಟಿಬೆಟಿಯನ್ ಬೌದ್ಧ ಸಂಸ್ಕೃತಿಯನ್ನು ಸಂರಕ್ಷಿಸಲು ಅರ್ಥಪೂರ್ಣ ಸ್ವಾಯತ್ತತೆಯನ್ನು ಹೊಂದಿದ್ದಾರೆ ಎಂಬುದನ್ನು ಈಗೀಗ ಆರ್ಥ ಮಾಡಿಕೊಳ್ಳುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದಲೈ ಲಾಮಾ ಹುಟ್ಟುಹಬ್ಬ ಆಚರಣೆಗೆ ಅಡ್ಡಿಪಡಿಸಿದ ಚೀನಾ ಸೈನಿಕರು; ಹಳ್ಳಿಗಳಿಗೆ ನುಗ್ಗಿ ಬ್ಯಾನರ್​, ಧ್ವಜ ಪ್ರದರ್ಶನ

ಗುರುವಾರ ಜಮ್ಮುವಿಗೆ ಆಗಮಿಸಿದ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಅವರನ್ನು ಲಡಾಖ್​ನಿಂದ ನೂರಾರು ಜನರು ಸ್ವಾಗತಿಸಿದರು. 14ನೇ ದಲೈ ಲಾಮಾ ಇಂದು ಲೇಹ್‌ಗೆ ತೆರಳಲಿದ್ದಾರೆ. ಅಲ್ಲಿ ಅವರು ಒಂದು ತಿಂಗಳ ಕಾಲ ಉಳಿಯುವ ನಿರೀಕ್ಷೆಯಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಸಾಂವಿಧಾನಿಕ ಬದಲಾವಣೆಗಳನ್ನು ಮತ್ತು ಲಡಾಖ್ ಅನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿದ್ದನ್ನು ಚೀನಾ ತೀವ್ರವಾಗಿ ವಿರೋಧಿಸಿತ್ತು. ಅದಾದ ಬಳಿಕ 2020ರ ಏಪ್ರಿಲ್ ತಿಂಗಳಲ್ಲಿ ಚೀನೀ ಪಡೆಗಳು LAC ಉದ್ದಕ್ಕೂ ಬೃಹತ್ ಸೈನ್ಯವನ್ನು ನಿರ್ಮಿಸಲು ಪ್ರಾರಂಭಿಸಿದವು. ಅಲ್ಲದೆ, ಪೂರ್ವ ಲಡಾಖ್‌ನಲ್ಲಿ ಭಾರತೀಯ ಪ್ರದೇಶವನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸಿದವು. 2020ರ ಜೂನ್ ತಿಂಗಳಲ್ಲಿ ಗಾಲ್ವಾನ್ ಕಣಿವೆಯಲ್ಲಿ ಘರ್ಷಣೆಗಳು ನಡೆದವು. ಅಲ್ಲಿ 20 ಯೋಧರು ದೇಶಕ್ಕಾಗಿ ತಮ್ಮ ಪ್ರಾಣವನ್ನು ನೀಡಿದರು, ಅನೇಕ ಚೀನೀ ಸೈನಿಕರು ಕೊಲ್ಲಲ್ಪಟ್ಟರು.

ಇದನ್ನೂ ಓದಿ: ಅರುಣಾಚಲ ಪ್ರದೇಶದ ಚೀನಾ ಗಡಿಯಲ್ಲಿ ಅಮೆರಿಕ ನಿರ್ಮಿತ ಫಿರಂಗಿಗಳನ್ನು ನಿಯೋಜಿಸಿದ ಭಾರತ

ಲಡಾಖ್​ನಿಂದ ಸೇನಾ ಪಡೆಗಳನ್ನು ವಿಸರ್ಜಿಸಲು ಮತ್ತು ಮಾತುಕತೆಯ ಮೂಲಕ ಎರಡೂ ದೇಶಗಳ ನಡುವಿನ ಬಿಕ್ಕಟ್ಟನ್ನು ಪರಿಹರಿಸಲು ಒತ್ತಾಯಿಸಿದ ದಲೈ ಲಾಮಾ, ಭಾರತ ಮತ್ತು ಚೀನಾ, ಎರಡು ಜನಸಂಖ್ಯೆ ಹೊಂದಿರುವ ನೆರೆಹೊರೆಯವರು ಮಾತುಕತೆ ಮತ್ತು ಶಾಂತಿಯುತ ವಿಧಾನಗಳ ಮೂಲಕ ಈ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಸಲಹೆ ನೀಡಿದ್ದಾರೆ.

ಅವರ ಭೇಟಿಗೆ ಚೀನಾದ ಆಕ್ಷೇಪದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ದಲೈ ಲಾಮಾ, ಅವರು ಕೋಪಗೊಳ್ಳುವುದು ಸಾಮಾನ್ಯ. ಚೀನೀ ಜನರು ಇದಕ್ಕೆ ಆಕ್ಷೇಪಿಸುತ್ತಿಲ್ಲ. ಹೆಚ್ಚು ಹೆಚ್ಚು ಚೀನಿಯರು ಟಿಬೆಟಿಯನ್ ಬೌದ್ಧಧರ್ಮದಲ್ಲಿ ಆಸಕ್ತಿ ತೋರಿಸುತ್ತಿದ್ದಾರೆ. ಟಿಬೆಟಿಯನ್ ಬೌದ್ಧಧರ್ಮವು ಬಹಳ ವೈಜ್ಞಾನಿಕವಾಗಿದೆ ಎಂದು ಅವರ ಕೆಲವು ವಿದ್ವಾಂಸರು ಅರಿತುಕೊಳ್ಳುತ್ತಿದ್ದಾರೆ ಎಂದಿದ್ದಾರೆ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ