AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರದಲ್ಲೇ ಉತ್ತರಾಧಿಕಾರಿ ಘೋಷಣೆ; ಚೀನಾಗೆ ಸವಾಲೆಸೆದ ದಲೈ ಲಾಮಾ

ದಲೈ ಲಾಮಾ ತಮ್ಮ ಉತ್ತರಾಧಿಕಾರ ಯೋಜನೆಗಳನ್ನು ಬಹಿರಂಗಪಡಿಸಿದ್ದಾರೆ. ಆದರೆ, ಅದಕ್ಕೆ ಚೀನಾ "ನಮ್ಮ ಅನುಮೋದನೆ ಕಡ್ಡಾಯ" ಎಂದು ಹೇಳಿದೆ. ನನ್ನ ಮರಣದ ನಂತರವೂ 600 ವರ್ಷ ಹಳೆಯದಾದ ನಮ್ಮ ಧಾರ್ಮಿಕ ಪರಂಪರೆ ಮುಂದುವರೆಯುತ್ತದೆ. ನನ್ನ ಉತ್ತರಾಧಿಕಾರಿಯನ್ನೂ ಆಯ್ಕೆ ಮಾಡುತ್ತೇವೆ ಎಂದು ಬೌದ್ಧ ಧರ್ಮ ಗುರು ದಲೈ ಲಾಮಾ ಹೇಳಿದ್ದಾರೆ.

ಶೀಘ್ರದಲ್ಲೇ ಉತ್ತರಾಧಿಕಾರಿ ಘೋಷಣೆ; ಚೀನಾಗೆ ಸವಾಲೆಸೆದ ದಲೈ ಲಾಮಾ
Dalai Lama
ಸುಷ್ಮಾ ಚಕ್ರೆ
|

Updated on:Jul 02, 2025 | 3:36 PM

Share

ನವದೆಹಲಿ, ಜುಲೈ 2: ಟಿಬೆಟ್‌ನ ಆಧ್ಯಾತ್ಮಿಕ ನಾಯಕ ದಲೈ ಲಾಮಾ (Dalai Lama) ತಮ್ಮ ಮರಣದ ನಂತರವೂ ಬೌದ್ಧ ಸಂಸ್ಥೆ ಮುಂದುವರಿಯಲಿದೆ ಎಂದು ಹೇಳಿದ್ದಾರೆ. “ದಲೈ ಲಾಮಾ ಅವರ ಸಂಸ್ಥೆ ಮುಂದುವರಿಯುತ್ತದೆ ಎಂದು ನಾನು ದೃಢೀಕರಿಸುತ್ತಿದ್ದೇನೆ. ನನ್ನ ಉತ್ತರಾಧಿಕಾರಿಯನ್ನು ಈ ಸಂಸ್ಥೆ ನಿರ್ಧರಿಸುತ್ತದೆ” ಎಂದು ಅವರು ಭಾರತದ ಧರ್ಮಶಾಲಾ ಪರ್ವತ ಪಟ್ಟಣದಿಂದ ಟಿಬೆಟಿಯನ್ ಭಾಷೆಯಲ್ಲಿ ಪ್ರಸಾರವಾದ ವೀಡಿಯೊದಲ್ಲಿ ಹೇಳಿದ್ದಾರೆ. ಈ ಮೂಲಕ ದಲೈ ಲಾಮಾ ಚೀನಾಗೆ ಸವಾಲು ಹಾಕಿದ್ದಾರೆ. ದಲೈ ಲಾಮಾ ಅವರ 90ನೇ ಹುಟ್ಟುಹಬ್ಬದ ಆಚರಣೆಗೆ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಟಿಬೆಟಿಯನ್ನರು ಸಿದ್ಧತೆ ಮಾಡಿಸಿಕೊಳ್ಳುತ್ತಿದ್ದಾರೆ. ಇದರ ನಡುವೆ ಹೊಸ ದಲೈ ಲಾಮಾ ಅವರ ಹೆಸರು ಘೋಷಣೆಯಾಗುವ ಸಾಧ್ಯತೆಯೂ ಇದೆ.

ಸುಮಾರು 66 ವರ್ಷಗಳಿಂದ ಟಿಬೆಟಿಯನ್ ಸಮುದಾಯವನ್ನು ಧರ್ಮಶಾಲಾದಿಂದ ಮುನ್ನಡೆಸಲಾಗುತ್ತಿದೆ. 1959ರ ದಂಗೆಯ ಬಳಿಕ ಭಾರತದಲ್ಲಿ ಆಶ್ರಯ ಪಡೆದ ದಲೈ ಲಾಮಾ ಇದೀಗ ತಮ್ಮ ಉತ್ತರಾಧಿಕಾರ ಯೋಜನೆಗಳ ಬಗ್ಗೆ ಹೇಳಿದ್ದಾರೆ. ತಮ್ಮ ಆತ್ಮಚರಿತ್ರೆಯಾದ ‘ವಾಯ್ಸ್ ಫಾರ್ ದಿ ವಾಯ್ಸ್‌ಲೆಸ್’ನಲ್ಲಿ ಅವರು ತಮ್ಮ 90ನೇ ಹುಟ್ಟುಹಬ್ಬದ ವೇಳೆ ತಮ್ಮ ಉತ್ತರಾಧಿಕಾರಿ ಯಾರೆಂದು ಬಹಿರಂಗಪಡಿಸುವುದಾಗಿ ಸುಳಿವು ನೀಡಿದ್ದರು.

ಟಿಬೆಟಿಯನ್ ಸಂಪ್ರದಾಯಿಕ ನಂಬಿಕೆ ಪ್ರಕಾರ ಹಿರಿಯ ಬೌದ್ಧ ಸನ್ಯಾಸಿಯ ಆತ್ಮವು ಮರಣದ ಬಳಿಕ ಪುನರ್ಜನ್ಮ ಪಡೆಯುತ್ತದೆ. 1935ರ ಜುಲೈ 6ರಂದು ಈಶಾನ್ಯ ಟಿಬೆಟ್‌ನಲ್ಲಿರುವ ಕೃಷಿ ಕುಟುಂಬದಲ್ಲಿ ಜನಿಸಿದ ಲಾಮೋ ಧೋಂಡಪ್ ಎರಡೇ ವರ್ಷಕ್ಕೆ 13ನೇ ದಲೈ ಲಾಮಾ ಅವರಿಗೆ ಸೇರಿದ ಆಸ್ತಿಗಳನ್ನು ಸ್ಪಷ್ಟವಾಗಿ ಗುರುತಿಸಿದಾಗ ಇದೇ ಪುನರ್ಜನ್ಮ ಎಂದು ಟಿಬೆಟಿಯನ್ ಸರ್ಕಾರ ನೇಮಿಸಿದ ಶೋಧನಾ ತಂಡವು ದೃಢಪಡಿಸಿತು. ಅದಾದ ನಂತರ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸಲಾಯಿತು.

ಇದನ್ನೂ ಓದಿ: Dalai Lama Video: ಬಾಲಕನಿಗೆ ಮುತ್ತಿಟ್ಟು, ತಮ್ಮ ನಾಲಿಗೆ ಚೀಪುವಂತೆ ಹೇಳಿದ ದಲೈ ಲಾಮಾ: ನೆಟ್ಟಿಗರು ಗರಂ

ಟಿಬೆಟ್‌ನ ಗಡಿಪಾರು ಮಾಡಲಾದ ಆಧ್ಯಾತ್ಮಿಕ ನಾಯಕ ಇಂದು ತಾನು ಸತ್ತಾಗ ತನಗೆ ಉತ್ತರಾಧಿಕಾರಿ ಇರುತ್ತಾನೆ ಎಂದು ದೃಢಪಡಿಸಿದ್ದಾರೆ. ದಲೈ ಲಾಮಾ ಅವರ 600 ವರ್ಷಗಳ ಹಳೆಯ ಸಂಸ್ಥೆ ಮುಂದುವರಿಯುತ್ತದೆ ಎಂದು ಜಗತ್ತಿನಾದ್ಯಂತ ಬೌದ್ಧ ಅನುಯಾಯಿಗಳಿಗೆ ಅವರು ಭರವಸೆ ನೀಡಿದರು. ಇದು ಟಿಬೆಟಿಯನ್ನರಿಗೆ ಒಂದು ಮಹತ್ವದ ನಿರ್ಧಾರವಾಗಿದ್ದು, ಅವರಲ್ಲಿ ಅನೇಕರು ನಾಯಕನಿಲ್ಲದ ಭವಿಷ್ಯವನ್ನು ಯೋಚಿಸಿ ಹೆದರುತ್ತಿದ್ದರು. ಟಿಬೆಟಿಯನ್ನರ ಪ್ರಕಾರ, ಟೆನ್ಜಿನ್ ಗ್ಯಾಟ್ಸೊ ದಲೈ ಲಾಮಾ ಅವರ 14ನೇ ಪುನರ್ಜನ್ಮ.

1959ರಲ್ಲಿ ಟಿಬೆಟಿಯನ್ ರಾಜಧಾನಿ ಲಾಸಾದಲ್ಲಿ ಚೀನಾದ ಪಡೆಗಳು ದಂಗೆಯನ್ನು ಹತ್ತಿಕ್ಕಿದಾಗಿನಿಂದ ಅವರು ಮತ್ತು ಸಾವಿರಾರು ಇತರ ಟಿಬೆಟಿಯನ್ನರು ಭಾರತದಲ್ಲಿ ದೇಶಭ್ರಷ್ಟರಾಗಿ ವಾಸಿಸುತ್ತಿದ್ದಾರೆ. ಕಳೆದ 14 ವರ್ಷಗಳಿಂದ ದೇಶಭ್ರಷ್ಟರಾಗಿರುವ ಟಿಬೆಟಿಯನ್ ವಲಸೆಗಾರರು, ಹಿಮಾಚಯ ಪ್ರದೇಶ, ಮಂಗೋಲಿಯಾ, ರಷ್ಯಾ ಮತ್ತು ಚೀನಾದ ಕೆಲವು ಭಾಗಗಳಿಂದ ಬಂದ ಬೌದ್ಧರು ದಲೈ ಲಾಮಾ ಅವರ ಪರಂಪರೆ ಮುಂದುವರಿಯಬೇಕೆಂದು ಬಯಸಿದ್ದಾರೆ. “ಈ ಎಲ್ಲಾ ವಿನಂತಿಗಳಿಗೆ ಅನುಗುಣವಾಗಿ ದಲೈ ಲಾಮಾ ಅವರ ಸಂಸ್ಥೆ ಮುಂದುವರಿಯುತ್ತದೆ ಎಂದು ನಾನು ದೃಢೀಕರಿಸುತ್ತಿದ್ದೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದಲೈ ಲಾಮಾಗೆ ಭಾರತದಾದ್ಯಂತ ಝಡ್ ಕೆಟಗರಿಯ ಭದ್ರತೆ

ಚೀನಾ ದಲೈ ಲಾಮಾ ಅವರನ್ನು ಪ್ರತ್ಯೇಕತಾವಾದಿ ಮತ್ತು ಬಂಡಾಯಗಾರ ಎಂದು ನೋಡುತ್ತದೆ. ಟಿಬೆಟ್ ಸ್ವಾಯತ್ತ ಪ್ರದೇಶದ ಮೇಲೆ ಹೆಚ್ಚಿನ ನಿಯಂತ್ರಣ ಸಾಧಿಸಲು ಚೀನಾ ದಲೈ ಲಾಮಾ ಅವರ ಉತ್ತರಾಧಿಕಾರಿಯನ್ನು ಹೆಸರಿಸುತ್ತದೆ ಎಂದು ದೇಶಭ್ರಷ್ಟರೆನಿಸಿಕೊಂಡಿರುವ ಟಿಬೆಟಿಯನ್ನರು ಭಯಪಡುತ್ತಾರೆ. ದಲೈ ಲಾಮಾ ಈ ಹಿಂದೆ ತಮ್ಮ ಉತ್ತರಾಧಿಕಾರಿ ಚೀನಾದ ಹೊರಗೆ ಜನಿಸುತ್ತಾರೆ ಎಂದು ಹೇಳಿದ್ದರು ಮತ್ತು ಬೀಜಿಂಗ್ ಆಯ್ಕೆ ಮಾಡಿದ ಯಾರನ್ನೇ ಆದರೂ ತಿರಸ್ಕರಿಸುವಂತೆ ಅನುಯಾಯಿಗಳನ್ನು ಒತ್ತಾಯಿಸಿದ್ದರು. ಇದೀಗ ಮತ್ತೆ ದಲೈ ಲಾಮಾ ಚೀನಾಗೆ ಸವಾಲೆಸೆದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 3:33 pm, Wed, 2 July 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ