AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಪ್ರಧಾನ ಕಚೇರಿ ಹೊರಗೆ ಎಎಪಿ ಪ್ರತಿಭಟನೆ, ದಲಿತ ಬಾಲಕನ ಕುಟುಂಬಕ್ಕೆ ₹20 ಲಕ್ಷ ಪರಿಹಾರ ಘೋಷಿಸಿದ ಅಶೋಕ್ ಗೆಹ್ಲೋಟ್

Dalit boy death ಪ್ರಸ್ತುತ ಪ್ರಕರಣದ ತ್ವರಿತ ವಿಚಾರಣೆ ನಡೆಸಲಾಗುವುದು ಎಂದು ಹೇಳಿದ ಗೆಹ್ಲೋಟ್, ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ಧನ ನೀಡುವುದರ ಜತೆಗೆ ಎಐಸಿಸಿಯಿಂದ (AICC) ಸಹಾಯಧನವಾಗಿ ₹20 ಲಕ್ಷ ನೀಡಲಾಗುವುದು.

ಕಾಂಗ್ರೆಸ್ ಪ್ರಧಾನ ಕಚೇರಿ ಹೊರಗೆ ಎಎಪಿ ಪ್ರತಿಭಟನೆ, ದಲಿತ ಬಾಲಕನ ಕುಟುಂಬಕ್ಕೆ ₹20 ಲಕ್ಷ ಪರಿಹಾರ ಘೋಷಿಸಿದ ಅಶೋಕ್ ಗೆಹ್ಲೋಟ್
ಎಎಪಿ ಪ್ರತಿಭಟನೆ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Aug 18, 2022 | 2:55 PM

ಹಲಿ: ಮೇಲ್ಜಾತಿಯವರಿಗಾಗಿ ಇರಿಸಿದ ನೀರಿನ ಪಾತ್ರೆ ಮುಟ್ಟಿದ್ದಕ್ಕಾಗಿ ಶಾಲಾ ಶಿಕ್ಷಕನಿಂದ ಥಳಿತಕ್ಕೊಳಗಾಗಿ ಸಾವಿಗೀಡಾದ ದಲಿತ ಬಾಲಕನ (Dalit boy) ಕುಟುಂಬಕ್ಕೆ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ಗುರುವಾರ ಪರಿಹಾರ ಘೋಷಿಸಿದ್ದಾರೆ. ಪ್ರಸ್ತುತ ಪ್ರಕರಣದ ತ್ವರಿತ ವಿಚಾರಣೆ ನಡೆಸಲಾಗುವುದು ಎಂದು ಹೇಳಿದ ಗೆಹ್ಲೋಟ್, ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ಧನ ನೀಡುವುದರ ಜತೆಗೆ ಎಐಸಿಸಿಯಿಂದ (AICC) ಸಹಾಯಧನವಾಗಿ 20 ಲಕ್ಷ ನೀಡಲಾಗುವುದು. ಕುಟುಂಬದ ಸದಸ್ಯರೊಬ್ಬರಿಗೆ ಕೆಲಸ ನೀಡುವುದರ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಪ್ರಕರಣವನ್ನು ತ್ವರಿತ ವಿಚಾರಣೆ ಮಾಡಲಾಗುವುದು ಎಂದು ಹೇಳಿದ ಸಿಎಂ 9ರ ಹರೆ ಯ ಮುಗ್ಧ ಬಾಲಕನ ಸಾವಿಗೆ ಇಡೀ ದೇಶವೇ ಮರುಗಿದೆ ಎಂದು ಹೇಳಿದ್ದಾರೆ. ಬಾಲಕನ ಸಾವಿನ ಬಗ್ಗೆ ಇತರ ಪಕ್ಷಗಳ ಜತೆ ಕಾಂಗ್ರೆಸ್ ಪಕ್ಷ ಕೂಡಾ ಆಕ್ರೋಶ ವ್ಯಕ್ತ ಪಡಿಸಿದ ಬೆನ್ನಲ್ಲೇ ಗೆಹ್ಲೋಟ್ ಈ ಪರಿಹಾರ ಘೋಷಿಸಿದ್ದಾರೆ.

ಎಸ್​​ಸಿ- ಎಸ್​ಟಿ ಕಾಯ್ದೆ ಪ್ರಕಾರ ಪರಿಹಾರ ಧನ ಜತೆ ಹೆಚ್ಚುವರಿ ಪರಿಹಾರ ಧನವನ್ನು ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ ನೀಡಲಾಗುವುದು. ಎಐಸಿಸಿ ನಿರ್ದೇಶದ ಪ್ರಕಾರ ರಾಜ್ಯ ಕಾಂಗ್ರೆಸ್ ಸಮಿತಿಯಿಂದ ಹೆಚ್ಚುವರಿ ₹20 ಲಕ್ಷ ಪರಿಹಾರ ಧನವನ್ನು ಬಾಲಕನ ಕುಟುಂಬಕ್ಕೆ ನೀಡಲಾಗುವುದು ಎಂದು ಗೆಹ್ಲೋಟ್ ಸರಣಿ ಟ್ಲೀಟ್ ನಲ್ಲಿ ಹೇಳಿದ್ದಾರೆ. ಇದಕ್ಕಿಂತ ಮುಂಚೆ ರಾಜ್ಯ ಸರ್ಕಾ 5 ಲಕ್ಷ ಪರಿಹಾಯ ಧನ ಘೋಷಿಸಿತ್ತು. ಪ್ರಸ್ತುತ ಪ್ರಕರಣ ಬಗ್ಗೆ ತ್ವರಿತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ
Image
BIG NEWS: ದಲಿತರ ಮೇಲಿನ ದೌರ್ಜನ್ಯ: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಪೊಲೀಸ್ ವಶಕ್ಕೆ
Image
ರಾಜಸ್ಥಾನದಲ್ಲಿ ದಲಿತ ಬಾಲಕನ ಸಾವು ಪ್ರಕರಣ: ಶಾಸಕನ ರಾಜೀನಾಮೆ ಬೆನ್ನಲ್ಲೇ 12 ಕೌನ್ಸಿಲರ್​​ಗಳ ರಾಜೀನಾಮೆ
Image
BIG NEWS: ದಲಿತರ ಮೇಲಿನ ದೌರ್ಜನ್ಯ: ರಾಜಸ್ಥಾನದ ಕಾಂಗ್ರೆಸ್ ಶಾಸಕ ಪನಾ ಚಂದ್ ಮೇಘವಾಲ್ ರಾಜೀನಾಮೆ
Image
ನೀರಿನ ಪಾತ್ರೆ ಮುಟ್ಟಿದ್ದಕ್ಕೆ ಶಾಲಾ ಶಿಕ್ಷಕನಿಂದ ಥಳಿತಕ್ಕೊಳಗಾದ ದಲಿತ ಬಾಲಕ ಸಾವು; ರಾಜಸ್ಥಾನ ಸರ್ಕಾರದ ವಿರುದ್ಧ ಬಿಜೆಪಿ, ಬಿಎಸ್​​ಪಿ ಕಿಡಿ

ಏತನ್ಮಧ್ಯೆ, ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಕಾಂಗ್ರೆಸ್ ಪ್ರಧಾನ ಕಚೇರಿ ಹೊರಗೆ ಪ್ರತಿಭಟನೆ ನಡೆಸಿದೆ. ಘೋಷಣೆ ಕೂಗಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಚದುರಿಸಲು ಬಹು ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಪೊಲೀಸರು ಕೆಲವು ಎಎಪಿ ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ರಾಜಸ್ಥಾನದ ಜಲೋರ್‌ನಲ್ಲಿ ಜುಲೈ 20 ರಂದು ಶಾಲೆಯಲ್ಲಿ ನೀರಿನ ಪಾತ್ರೆಯನ್ನು ಮುಟ್ಟಿದ ಆರೋಪದ ಮೇಲೆ ಒಂಬತ್ತು ವರ್ಷದ ದಲಿತ ವಿದ್ಯಾರ್ಥಿಯನ್ನು ಶಿಕ್ಷಕರೊಬ್ಬರು ಥಳಿಸಿದ್ದರು. ಅಹಮದಾಬಾದ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕ ಆಗಸ್ಟ್ 13 ರಂದು ಅಸು ನೀಗಿದ್ದು,ಆರೋಪಿ ಶಿಕ್ಷಕ ಚೈಲ್ ಸಿಂಗ್ (40) ನ್ನು ಬಂಧಿಸಲಾಗಿದೆ.

Published On - 2:11 pm, Thu, 18 August 22

ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು