AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dalit Sister’s Murder: ಲಖಿಂಪುರದಲ್ಲಿ ದಲಿತ ಸಹೋದರಿಯರ ಹತ್ಯೆ ಪ್ರಕರಣ: 6 ಮಂದಿ ಬಂಧನ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ನಿಘಸನ್ ಎಂಬಲ್ಲಿನ ಹೊಲವೊಂದರಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಸಹೋದರಿಯರ ಶವ ಸೆ.14ರಂದು ಸಂಜೆ ಪತ್ತೆಯಾಗಿತ್ತು.

Dalit Sister's Murder: ಲಖಿಂಪುರದಲ್ಲಿ ದಲಿತ ಸಹೋದರಿಯರ ಹತ್ಯೆ ಪ್ರಕರಣ: 6 ಮಂದಿ ಬಂಧನ
Lakhimpur KheriImage Credit source: ANI
TV9 Web
| Edited By: |

Updated on: Sep 15, 2022 | 9:46 AM

Share

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ನಿಘಸನ್ ಎಂಬಲ್ಲಿನ ಹೊಲವೊಂದರಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಸಹೋದರಿಯರ ಶವ ಸೆ.14ರಂದು ಸಂಜೆ ಪತ್ತೆಯಾಗಿತ್ತು. ಇಬ್ಬರೂ ಬಾಲಕಿಯರು ದಲಿತ ಸಮುದಾಯಕ್ಕೆ ಸೇರಿದವರು. ಈ ಪ್ರಕರಣದಲ್ಲಿ ಆರು ಮಂದಿಯನ್ನು ಬಂಧಿಸಲಾಗಿದೆ. ಪೋಕ್ಸೊ ಕಾಯ್ದೆಯಡಿ ಅವರ ಮೇಲೆ ಅತ್ಯಾಚಾರ ಮತ್ತು ಕೊಲೆಯ ಸೆಕ್ಷನ್‌ಗಳನ್ನು ಹಾಕಲಾಗಿದೆ.

ಈ ಘಟನೆ ಬೆಳಕಿಗೆ ಬಂದ ತಕ್ಷಣ ಸ್ಥಳೀಯ ಗ್ರಾಮಸ್ಥರು ನಿಘಾಸನ್‌ನಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ನೆರೆಯ ಗ್ರಾಮದ ಮೂವರು ಯುವಕರು ತಮ್ಮ ಹೆಣ್ಣು ಮಕ್ಕಳನ್ನು ಅಪಹರಿಸಿ ಕೊಂದಿದ್ದಾರೆ ಎಂದು ಬಾಲಕಿಯರ ತಾಯಿ ಆರೋಪಿಸಿದ್ದಾರೆ. ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಈ ವಿಷಯದ ಬಗ್ಗೆ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದೆ.

ಬುಧವಾರ ಸಂಜೆ ನಿಘಸನ್ ಕೊಟ್ವಾಲಿ ಪ್ರದೇಶದ ಗ್ರಾಮದಿಂದ ಸ್ವಲ್ಪ ದೂರದಲ್ಲಿರುವ ಕಬ್ಬಿನ ಗದ್ದೆಯಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಬಾಲಕಿಯರ ಶವಗಳು ಪತ್ತೆಯಾಗಿತ್ತು ಎಂದು ಪೊಲೀಸ್ ಮೂಲಗಳು ಇಲ್ಲಿ ತಿಳಿಸಿವೆ. ಇಬ್ಬರು ಬಾಲಕಿಯರು ದಲಿತ ಸಮುದಾಯಕ್ಕೆ ಸೇರಿದವರು.

ಎಸ್ಪಿ ಸಂಜೀವ್ ಸುಮನ್ ಮತ್ತು ಹೆಚ್ಚುವರಿ ಎಸ್ಪಿ ಅರುಣ್ ಕುಮಾರ್ ಸಿಂಗ್ ಹೆಚ್ಚಿನ ಸಂಖ್ಯೆಯ ಪೊಲೀಸ್ ಪಡೆಗಳೊಂದಿಗೆ ಘಟನಾ ಸ್ಥಳಕ್ಕೆ ಆಗಮಿಸಿ ಆಕ್ರೋಶಗೊಂಡ ಗ್ರಾಮಸ್ಥರಿಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಪಕ್ಕದ ಗ್ರಾಮದ ಮೂವರು ಯುವಕರು ತಮ್ಮ ಹೆಣ್ಣು ಮಕ್ಕಳನ್ನು ತಮ್ಮ ಗುಡಿಸಲು ಬಳಿಯಿಂದ ಅಪಹರಿಸಿ ಕೊಂದಿದ್ದಾರೆ ಎಂದು ಮೃತ ಬಾಲಕಿಯರ ತಾಯಿ ಆರೋಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಮರಣೋತ್ತರ ಪರೀಕ್ಷೆ ವರದಿಯಿಂದ ಮಾತ್ರ ಸಾವಿಗೆ ನಿಜವಾದ ಕಾರಣ ತಿಳಿಯಲಿದೆ ಎಂದು ಹೇಳಿದರು. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಏತನ್ಮಧ್ಯೆ, ಈ ವಿಷಯಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ರಾಜ್ಯ ಸರ್ಕಾರವನ್ನು ಸುತ್ತುವರೆದಿವೆ. ಘಟನೆಯನ್ನು ಹತ್ರಾಸ್ ಘಟನೆಗೆ ಹೋಲಿಸಿದ ಅಖಿಲೇಶ್ ಯಾದವ್ ಟ್ವೀಟ್ ಮಾಡಿದ್ದಾರೆ, “ನಿಘಾಸನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ದಲಿತ ಸಹೋದರಿಯರನ್ನು ಅಪಹರಿಸಿದ ನಂತರ, ಪೊಲೀಸರ ಮೇಲೆ ಅವರ ತಂದೆಯ ಆರೋಪವು ತುಂಬಾ ಗಂಭೀರವಾಗಿದೆ, ಪಂಚನಾಮ ಮತ್ತು ಒಪ್ಪಿಗೆಯಿಲ್ಲದೆ, ಮರಣೋತ್ತರ ಪರೀಕ್ಷೆಯನ್ನು ಮಾಡಲಾಗಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮಾತನಾಡಿ, ಲಖಿಂಪುರದಲ್ಲಿ ಇಬ್ಬರು ಸಹೋದರಿಯರನ್ನು ಕೊಂದ ಘಟನೆ ಹೃದಯವಿದ್ರಾವಕವಾಗಿದೆ. ಹಗಲು ಹೊತ್ತಿನಲ್ಲಿ ಬಾಲಕಿಯರನ್ನು ಅಪಹರಿಸಲಾಗಿದೆ ಎಂದು ಸಂಬಂಧಿಕರು ಹೇಳಿದ್ದಾರೆ.

ಪ್ರತಿನಿತ್ಯ ಪತ್ರಿಕೆ, ಟಿವಿಗಳಲ್ಲಿ ಸುಳ್ಳು ಜಾಹೀರಾತು ನೀಡುವುದರಿಂದ ಕಾನೂನು ಸುವ್ಯವಸ್ಥೆ ಸುಧಾರಿಸುವುದಿಲ್ಲ. ಅಷ್ಟಕ್ಕೂ ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲಿನ ಘೋರ ಅಪರಾಧಗಳು ಏಕೆ ಹೆಚ್ಚುತ್ತಿವೆ? ಸರ್ಕಾರ ಎಚ್ಚೆತ್ತುಕೊಳ್ಳುವುದು ಯಾವಾಗ?’ ಎಂದು ಪ್ರಶ್ನಿಸಿದ್ದಾರೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ