AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದಲ್ಲಿ ದಲಿತ ಮಹಿಳೆಗೆ ಸಾರ್ವಜನಿಕವಾಗಿ ಪೊಲೀಸರಿಂದ ಥಳಿತ: ವಿಡಿಯೋ ವೈರಲ್

ಬಿಹಾರದ ಸೀತಾಮರ್ಹಿಯಲ್ಲಿ ದಲಿತ ಮಹಿಳೆಯೊಬ್ಬರನ್ನು ಸಾರ್ವಜನಿಕವಾಗಿ ಪೋಲೀಸರು ಥಳಿಸಿದ ವಿಡಿಯೋ ಈಗ ಭಾರಿ ವೈರಲ್​​ ಆಗಿದೆ. ಈ ಬಗ್ಗೆ ಅಲ್ಲಿನ ಜನರು ಕಳವಳ ವ್ಯಕ್ತಪಡಿಸಿದ್ದಾರೆ. ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಕಡೆಯ ಗುಂಪಿನ ನಡುವೆ ಮಾರಾಮಾರಿ ನಡೆದಿದೆ. ಸಂದರ್ಭದಲ್ಲಿ ಈ ಸುವ್ಯವಸ್ಥೆಯನ್ನು ಕಾಪಾಡಲು ಅಧಿಕಾರಿಗಳು ಈ ಕ್ರಮವನ್ನು ತೆಗೆದುಕೊಂಡಿದ್ದಾರೆ.

ಬಿಹಾರದಲ್ಲಿ ದಲಿತ ಮಹಿಳೆಗೆ ಸಾರ್ವಜನಿಕವಾಗಿ ಪೊಲೀಸರಿಂದ ಥಳಿತ: ವಿಡಿಯೋ ವೈರಲ್
ಅಕ್ಷಯ್​ ಪಲ್ಲಮಜಲು​​
|

Updated on: Jan 01, 2024 | 12:51 PM

Share

ಪಟ್ನಾ, ಜ.1: ಬಿಹಾರದಲ್ಲಿ ಮಹಿಳೆಯೊಬ್ಬರ ಮೇಲೆ ಮನಬಂದಂತೆ ಪೊಲೀಸ್​​​ ಅಧಿಕಾರಿಯೊಬ್ಬರು ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಬಿಹಾರದ ಸೀತಾಮರ್ಹಿಯಲ್ಲಿ ದಲಿತ ಮಹಿಳೆಯೊಬ್ಬರನ್ನು ಸಾರ್ವಜನಿಕವಾಗಿ ಪೋಲೀಸರು ಥಳಿಸಿದ ವಿಡಿಯೋ ಈಗ ಭಾರಿ ವೈರಲ್​​ ಆಗಿದೆ. ಈ ಬಗ್ಗೆ ಅಲ್ಲಿನ ಜನರು ಕಳವಳ ವ್ಯಕ್ತಪಡಿಸಿದ್ದಾರೆ. ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಕಡೆಯ ಗುಂಪಿನ ನಡುವೆ ಮಾರಾಮಾರಿ ನಡೆದಿದೆ. ಸಂದರ್ಭದಲ್ಲಿ ಈ ಸುವ್ಯವಸ್ಥೆಯನ್ನು ಕಾಪಾಡಲು ಅಧಿಕಾರಿಗಳು ಈ ಕ್ರಮವನ್ನು ತೆಗೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.

ಸುರಸಂದ್ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ರಾಜ್‌ಕಿಶೋರ್ ಸಿಂಗ್ ಅವರು ಮಹಿಳೆಯೊಬ್ಬರಿಗೆ ನಡುರಸ್ತೆಯಲ್ಲಿ ಮನಬಂದಂತೆ ಲಾಠಿ ಬಿಸಿದ್ದಾರೆ. ಸುರಸಂದ್ ಮಾರುಕಟ್ಟೆಯಲ್ಲಿ ಜನಸಮೂಹ ಹೆಚ್ಚಾಗಿದ್ದು ಈ ಸಮಯದಲ್ಲಿ ಇಬ್ಬರು ಮಹಿಳೆಯರ ಜಗಳ ಮಾಡಿಕೊಂಡಿದ್ದಾರೆ. ಈ ಸಮಯದಲ್ಲಿ ಪೊಲೀಸರು, ಸಿಕ್ಕದವರ ಮೇಲೆ ಲಾಠಿ ಚಾರ್ಚ್​​​ ಮಾಡಿರುವ ವಿಡಿಯೋದಲ್ಲಿ ತೋರಿಸಲಾಗಿದೆ.

ಇದೀಗ ಈ ವಿಡಿಯೋದಿಂದ ಸಾರ್ವಜನಿಕರು ಪೊಲೀಸರ ಮೇಲೆ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಯ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ಸೀತಾಮರ್ಹಿ ಪೊಲೀಸರು ತಿಳಿಸಿದ್ದಾರೆ. ಇಬ್ಬರು ಮಹಿಳೆಯರು ರಸ್ತೆಯಲ್ಲಿ ಜಗಳವಾಡುತ್ತಿದ್ದ ಕಾರಣ ಪೊಲೀಸರು ಈ ಕ್ರಮ ತೆಗೆದುಕೊಂಡಿದ್ದಾರೆ ಎಂದು ಪೋಲಿಸರು ಹೇಳಿದ್ದಾರೆ. ಈ ಪ್ರದೇಶದಲ್ಲಿ ಬಾಲಕಿಯೊಬ್ಬಳು ಅಪಹರಣ ಆಗಿದ್ದಾಳೆ, ಈ ಕಾರಣಕ್ಕೆ ಜಗಳ ನಡೆದಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸದನದಲ್ಲಿ ಬಿಜೆಪಿ ಶಾಸಕರುಗಳ ವಿಡಿಯೋ ಗೇಮ್, ಪಾನ್ ಮಸಾಲ ವಿವಾದ: ವಿಡಿಯೋ ವೈರಲ್ ಮಾಡಿದ ಎಸ್ಪಿ ಪಕ್ಷ

ಬಾಲಕಿಯನ್ನು ರಕ್ಷಣೆ ಮಾಡಲಾಗಿದೆ. ನಂತರ ಎರಡು ಕಡೆಯವರನ್ನು ಪೊಲೀಸ್​​​ ಠಾಣೆಗೆ ಕರೆಸಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ಇಬ್ಬರು ಮಹಿಳೆಯರು ಜಗಳ ಮಾಡಿದ್ದಾರೆ. ಇವರಿಬ್ಬರ ಜಗಳ ಟ್ರಾಪಿಕ್​​ ಕಾರಣವಾಗಿದೆ. ಅವರನ್ನು ಚದುರಿಸಲು ನಮ್ಮ ಪೊಲೀಸರು ಈ ಕ್ರಮ ತೆಗೆದುಕೊಂಡಿದ್ದಾರೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ (ಎಸ್‌ಡಿಪಿಒ) ವಿನೋದ್ ಕುಮಾರ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?