AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದಲ್ಲಿ ದಲಿತ ಮಹಿಳೆಗೆ ಸಾರ್ವಜನಿಕವಾಗಿ ಪೊಲೀಸರಿಂದ ಥಳಿತ: ವಿಡಿಯೋ ವೈರಲ್

ಬಿಹಾರದ ಸೀತಾಮರ್ಹಿಯಲ್ಲಿ ದಲಿತ ಮಹಿಳೆಯೊಬ್ಬರನ್ನು ಸಾರ್ವಜನಿಕವಾಗಿ ಪೋಲೀಸರು ಥಳಿಸಿದ ವಿಡಿಯೋ ಈಗ ಭಾರಿ ವೈರಲ್​​ ಆಗಿದೆ. ಈ ಬಗ್ಗೆ ಅಲ್ಲಿನ ಜನರು ಕಳವಳ ವ್ಯಕ್ತಪಡಿಸಿದ್ದಾರೆ. ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಕಡೆಯ ಗುಂಪಿನ ನಡುವೆ ಮಾರಾಮಾರಿ ನಡೆದಿದೆ. ಸಂದರ್ಭದಲ್ಲಿ ಈ ಸುವ್ಯವಸ್ಥೆಯನ್ನು ಕಾಪಾಡಲು ಅಧಿಕಾರಿಗಳು ಈ ಕ್ರಮವನ್ನು ತೆಗೆದುಕೊಂಡಿದ್ದಾರೆ.

ಬಿಹಾರದಲ್ಲಿ ದಲಿತ ಮಹಿಳೆಗೆ ಸಾರ್ವಜನಿಕವಾಗಿ ಪೊಲೀಸರಿಂದ ಥಳಿತ: ವಿಡಿಯೋ ವೈರಲ್
ಅಕ್ಷಯ್​ ಪಲ್ಲಮಜಲು​​
|

Updated on: Jan 01, 2024 | 12:51 PM

Share

ಪಟ್ನಾ, ಜ.1: ಬಿಹಾರದಲ್ಲಿ ಮಹಿಳೆಯೊಬ್ಬರ ಮೇಲೆ ಮನಬಂದಂತೆ ಪೊಲೀಸ್​​​ ಅಧಿಕಾರಿಯೊಬ್ಬರು ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಬಿಹಾರದ ಸೀತಾಮರ್ಹಿಯಲ್ಲಿ ದಲಿತ ಮಹಿಳೆಯೊಬ್ಬರನ್ನು ಸಾರ್ವಜನಿಕವಾಗಿ ಪೋಲೀಸರು ಥಳಿಸಿದ ವಿಡಿಯೋ ಈಗ ಭಾರಿ ವೈರಲ್​​ ಆಗಿದೆ. ಈ ಬಗ್ಗೆ ಅಲ್ಲಿನ ಜನರು ಕಳವಳ ವ್ಯಕ್ತಪಡಿಸಿದ್ದಾರೆ. ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಕಡೆಯ ಗುಂಪಿನ ನಡುವೆ ಮಾರಾಮಾರಿ ನಡೆದಿದೆ. ಸಂದರ್ಭದಲ್ಲಿ ಈ ಸುವ್ಯವಸ್ಥೆಯನ್ನು ಕಾಪಾಡಲು ಅಧಿಕಾರಿಗಳು ಈ ಕ್ರಮವನ್ನು ತೆಗೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.

ಸುರಸಂದ್ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ರಾಜ್‌ಕಿಶೋರ್ ಸಿಂಗ್ ಅವರು ಮಹಿಳೆಯೊಬ್ಬರಿಗೆ ನಡುರಸ್ತೆಯಲ್ಲಿ ಮನಬಂದಂತೆ ಲಾಠಿ ಬಿಸಿದ್ದಾರೆ. ಸುರಸಂದ್ ಮಾರುಕಟ್ಟೆಯಲ್ಲಿ ಜನಸಮೂಹ ಹೆಚ್ಚಾಗಿದ್ದು ಈ ಸಮಯದಲ್ಲಿ ಇಬ್ಬರು ಮಹಿಳೆಯರ ಜಗಳ ಮಾಡಿಕೊಂಡಿದ್ದಾರೆ. ಈ ಸಮಯದಲ್ಲಿ ಪೊಲೀಸರು, ಸಿಕ್ಕದವರ ಮೇಲೆ ಲಾಠಿ ಚಾರ್ಚ್​​​ ಮಾಡಿರುವ ವಿಡಿಯೋದಲ್ಲಿ ತೋರಿಸಲಾಗಿದೆ.

ಇದೀಗ ಈ ವಿಡಿಯೋದಿಂದ ಸಾರ್ವಜನಿಕರು ಪೊಲೀಸರ ಮೇಲೆ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಯ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ಸೀತಾಮರ್ಹಿ ಪೊಲೀಸರು ತಿಳಿಸಿದ್ದಾರೆ. ಇಬ್ಬರು ಮಹಿಳೆಯರು ರಸ್ತೆಯಲ್ಲಿ ಜಗಳವಾಡುತ್ತಿದ್ದ ಕಾರಣ ಪೊಲೀಸರು ಈ ಕ್ರಮ ತೆಗೆದುಕೊಂಡಿದ್ದಾರೆ ಎಂದು ಪೋಲಿಸರು ಹೇಳಿದ್ದಾರೆ. ಈ ಪ್ರದೇಶದಲ್ಲಿ ಬಾಲಕಿಯೊಬ್ಬಳು ಅಪಹರಣ ಆಗಿದ್ದಾಳೆ, ಈ ಕಾರಣಕ್ಕೆ ಜಗಳ ನಡೆದಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸದನದಲ್ಲಿ ಬಿಜೆಪಿ ಶಾಸಕರುಗಳ ವಿಡಿಯೋ ಗೇಮ್, ಪಾನ್ ಮಸಾಲ ವಿವಾದ: ವಿಡಿಯೋ ವೈರಲ್ ಮಾಡಿದ ಎಸ್ಪಿ ಪಕ್ಷ

ಬಾಲಕಿಯನ್ನು ರಕ್ಷಣೆ ಮಾಡಲಾಗಿದೆ. ನಂತರ ಎರಡು ಕಡೆಯವರನ್ನು ಪೊಲೀಸ್​​​ ಠಾಣೆಗೆ ಕರೆಸಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ಇಬ್ಬರು ಮಹಿಳೆಯರು ಜಗಳ ಮಾಡಿದ್ದಾರೆ. ಇವರಿಬ್ಬರ ಜಗಳ ಟ್ರಾಪಿಕ್​​ ಕಾರಣವಾಗಿದೆ. ಅವರನ್ನು ಚದುರಿಸಲು ನಮ್ಮ ಪೊಲೀಸರು ಈ ಕ್ರಮ ತೆಗೆದುಕೊಂಡಿದ್ದಾರೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ (ಎಸ್‌ಡಿಪಿಒ) ವಿನೋದ್ ಕುಮಾರ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ