AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜೀವಂತ ಕೋಳಿಯ ತಲೆ ಕಚ್ಚಿ ವಿಕೃತಿ ಮೆರೆಯುತ್ತಾ ನೃತ್ಯ ಮಾಡಿದ ಡ್ಯಾನ್ಸರ್​; ವಿಡಿಯೋ ವೈರಲ್​​​

ನೃತ್ಯ ಪ್ರದರ್ಶನದ ಸಮಯದಲ್ಲಿ ನೃತ್ಯಗಾರನೊಬ್ಬ ಜೀವಂತ ಕೋಳಿಯನ್ನು ಹಿಡಿದು ಅದರ ಕುತಿಗೆಯನ್ನು ಕಚ್ಚಿ ರಕ್ತ ಹೀರುತ್ತಾ ನೃತ್ಯ ಮಾಡಿದ್ದಾನೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದ್ದು, ನೃತ್ಯ ತಂಡದ ವಿರುದ್ದ ಕೇಸು ದಾಖಲಾಗಿದೆ.

Viral Video: ಜೀವಂತ ಕೋಳಿಯ ತಲೆ ಕಚ್ಚಿ ವಿಕೃತಿ ಮೆರೆಯುತ್ತಾ ನೃತ್ಯ ಮಾಡಿದ ಡ್ಯಾನ್ಸರ್​; ವಿಡಿಯೋ ವೈರಲ್​​​
ಅಕ್ಷತಾ ವರ್ಕಾಡಿ
|

Updated on:Jul 12, 2024 | 4:15 PM

Share

ಆಂಧ್ರಪ್ರದೇಶ: ಅನಕಾಪಲ್ಲಿಯಲ್ಲಿ ವಿಷ್ಣು ಎಂಟರ್‌ಟೈನ್‌ಮೆಂಟ್ ಹೆಸರಿನ ನೃತ್ಯ ತಂಡವೊಂದರ ನೃತ್ಯ ಪ್ರದರ್ಶನ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ತಂಡವು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದು, ಅವರ ಅಭಿನಯವು ವಿವಾದವನ್ನು ಹುಟ್ಟುಹಾಕಿದೆ. ಎಬಿಪಿ ದೇಶಂ ವರದಿಯ ಪ್ರಕಾರ, ನೃತ್ಯ ತಂಡವು ನೃತ್ಯ ಪ್ರದರ್ಶನದ ವೇಳೆ ಜೀವಂತ ಕೋಳಿ ತಲೆಯನ್ನು ಕಚ್ಚಿ ವಿಕೃತಿ ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ. ಪರಿಣಾಮವಾಗಿ ಇದೀಗ ಈ ತಂಡದ ವಿರುದ್ಧ ಪ್ರಕರಣ ದಾಖಲಾಗಿದೆ.

ನೃತ್ಯ ಪ್ರದರ್ಶನದ ಸಮಯದಲ್ಲಿ ನೃತ್ಯಗಾರನೊಬ್ಬ ಜೀವಂತ ಕೋಳಿಯನ್ನು ಹಿಡಿದು ಅದರ ಕತ್ತಿಗೆ ಕಚ್ಚಿ ರಕ್ತ ಹೀರುತ್ತಿರುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋವನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಳ್ಳಲಾಗಿದ್ದು, ವಿಡಿಯೋ ಹಂಚಿಕೊಂಡ ಕೆಲ ಹೊತ್ತಿನಲ್ಲೇ ಎಲ್ಲೆಡೆ ವೈರಲ್​​ ಆಗಿದೆ.

ಇದನ್ನೂ ಓದಿ: ಅಂಬಾನಿ ಮಗನ ಮದುವೆಯ ಫೋಟೋಗ್ರಾಫರ್ ಯಾರು ಗೊತ್ತಾ? ಅವರು ಪಡೆಯುವ ಸಂಭಾವನೆ ಎಷ್ಟು?

ಈ ವೈರಲ್​​​ ವಿಡಿಯೋ ನೆಟ್ಟಿಗರಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಪ್ರಾಣಿ ಹಿಂಸೆಗೈದ ನೃತ್ಯಗಾರನ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳುವಂತೆ ನೆಟ್ಟಿಗರು ಆಗ್ರಹಿಸಿದ್ದಾರೆ. ಪರಿಣಾಮ ನೃತ್ಯ ತಂಡದ ವಿರುದ್ದ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯಿದೆ, 1960 ರ ಸೆಕ್ಷನ್ 11 (1) (ಎ) ಮತ್ತು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 11 (1) (ಎ) ಅಡಿಯಲ್ಲಿ ಕೇಸು ದಾಖಲಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:05 pm, Fri, 12 July 24

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ