AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜೀವಂತ ಕೋಳಿಯ ತಲೆ ಕಚ್ಚಿ ವಿಕೃತಿ ಮೆರೆಯುತ್ತಾ ನೃತ್ಯ ಮಾಡಿದ ಡ್ಯಾನ್ಸರ್​; ವಿಡಿಯೋ ವೈರಲ್​​​

ನೃತ್ಯ ಪ್ರದರ್ಶನದ ಸಮಯದಲ್ಲಿ ನೃತ್ಯಗಾರನೊಬ್ಬ ಜೀವಂತ ಕೋಳಿಯನ್ನು ಹಿಡಿದು ಅದರ ಕುತಿಗೆಯನ್ನು ಕಚ್ಚಿ ರಕ್ತ ಹೀರುತ್ತಾ ನೃತ್ಯ ಮಾಡಿದ್ದಾನೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದ್ದು, ನೃತ್ಯ ತಂಡದ ವಿರುದ್ದ ಕೇಸು ದಾಖಲಾಗಿದೆ.

Viral Video: ಜೀವಂತ ಕೋಳಿಯ ತಲೆ ಕಚ್ಚಿ ವಿಕೃತಿ ಮೆರೆಯುತ್ತಾ ನೃತ್ಯ ಮಾಡಿದ ಡ್ಯಾನ್ಸರ್​; ವಿಡಿಯೋ ವೈರಲ್​​​
ಅಕ್ಷತಾ ವರ್ಕಾಡಿ
|

Updated on:Jul 12, 2024 | 4:15 PM

Share

ಆಂಧ್ರಪ್ರದೇಶ: ಅನಕಾಪಲ್ಲಿಯಲ್ಲಿ ವಿಷ್ಣು ಎಂಟರ್‌ಟೈನ್‌ಮೆಂಟ್ ಹೆಸರಿನ ನೃತ್ಯ ತಂಡವೊಂದರ ನೃತ್ಯ ಪ್ರದರ್ಶನ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ತಂಡವು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದು, ಅವರ ಅಭಿನಯವು ವಿವಾದವನ್ನು ಹುಟ್ಟುಹಾಕಿದೆ. ಎಬಿಪಿ ದೇಶಂ ವರದಿಯ ಪ್ರಕಾರ, ನೃತ್ಯ ತಂಡವು ನೃತ್ಯ ಪ್ರದರ್ಶನದ ವೇಳೆ ಜೀವಂತ ಕೋಳಿ ತಲೆಯನ್ನು ಕಚ್ಚಿ ವಿಕೃತಿ ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ. ಪರಿಣಾಮವಾಗಿ ಇದೀಗ ಈ ತಂಡದ ವಿರುದ್ಧ ಪ್ರಕರಣ ದಾಖಲಾಗಿದೆ.

ನೃತ್ಯ ಪ್ರದರ್ಶನದ ಸಮಯದಲ್ಲಿ ನೃತ್ಯಗಾರನೊಬ್ಬ ಜೀವಂತ ಕೋಳಿಯನ್ನು ಹಿಡಿದು ಅದರ ಕತ್ತಿಗೆ ಕಚ್ಚಿ ರಕ್ತ ಹೀರುತ್ತಿರುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋವನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಳ್ಳಲಾಗಿದ್ದು, ವಿಡಿಯೋ ಹಂಚಿಕೊಂಡ ಕೆಲ ಹೊತ್ತಿನಲ್ಲೇ ಎಲ್ಲೆಡೆ ವೈರಲ್​​ ಆಗಿದೆ.

ಇದನ್ನೂ ಓದಿ: ಅಂಬಾನಿ ಮಗನ ಮದುವೆಯ ಫೋಟೋಗ್ರಾಫರ್ ಯಾರು ಗೊತ್ತಾ? ಅವರು ಪಡೆಯುವ ಸಂಭಾವನೆ ಎಷ್ಟು?

ಈ ವೈರಲ್​​​ ವಿಡಿಯೋ ನೆಟ್ಟಿಗರಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಪ್ರಾಣಿ ಹಿಂಸೆಗೈದ ನೃತ್ಯಗಾರನ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳುವಂತೆ ನೆಟ್ಟಿಗರು ಆಗ್ರಹಿಸಿದ್ದಾರೆ. ಪರಿಣಾಮ ನೃತ್ಯ ತಂಡದ ವಿರುದ್ದ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯಿದೆ, 1960 ರ ಸೆಕ್ಷನ್ 11 (1) (ಎ) ಮತ್ತು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 11 (1) (ಎ) ಅಡಿಯಲ್ಲಿ ಕೇಸು ದಾಖಲಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:05 pm, Fri, 12 July 24

Follow Us
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ