AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜೀವಂತ ಕೋಳಿಯ ತಲೆ ಕಚ್ಚಿ ವಿಕೃತಿ ಮೆರೆಯುತ್ತಾ ನೃತ್ಯ ಮಾಡಿದ ಡ್ಯಾನ್ಸರ್​; ವಿಡಿಯೋ ವೈರಲ್​​​

ನೃತ್ಯ ಪ್ರದರ್ಶನದ ಸಮಯದಲ್ಲಿ ನೃತ್ಯಗಾರನೊಬ್ಬ ಜೀವಂತ ಕೋಳಿಯನ್ನು ಹಿಡಿದು ಅದರ ಕುತಿಗೆಯನ್ನು ಕಚ್ಚಿ ರಕ್ತ ಹೀರುತ್ತಾ ನೃತ್ಯ ಮಾಡಿದ್ದಾನೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದ್ದು, ನೃತ್ಯ ತಂಡದ ವಿರುದ್ದ ಕೇಸು ದಾಖಲಾಗಿದೆ.

Viral Video: ಜೀವಂತ ಕೋಳಿಯ ತಲೆ ಕಚ್ಚಿ ವಿಕೃತಿ ಮೆರೆಯುತ್ತಾ ನೃತ್ಯ ಮಾಡಿದ ಡ್ಯಾನ್ಸರ್​; ವಿಡಿಯೋ ವೈರಲ್​​​
ಅಕ್ಷತಾ ವರ್ಕಾಡಿ
|

Updated on:Jul 12, 2024 | 4:15 PM

Share

ಆಂಧ್ರಪ್ರದೇಶ: ಅನಕಾಪಲ್ಲಿಯಲ್ಲಿ ವಿಷ್ಣು ಎಂಟರ್‌ಟೈನ್‌ಮೆಂಟ್ ಹೆಸರಿನ ನೃತ್ಯ ತಂಡವೊಂದರ ನೃತ್ಯ ಪ್ರದರ್ಶನ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ತಂಡವು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದು, ಅವರ ಅಭಿನಯವು ವಿವಾದವನ್ನು ಹುಟ್ಟುಹಾಕಿದೆ. ಎಬಿಪಿ ದೇಶಂ ವರದಿಯ ಪ್ರಕಾರ, ನೃತ್ಯ ತಂಡವು ನೃತ್ಯ ಪ್ರದರ್ಶನದ ವೇಳೆ ಜೀವಂತ ಕೋಳಿ ತಲೆಯನ್ನು ಕಚ್ಚಿ ವಿಕೃತಿ ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ. ಪರಿಣಾಮವಾಗಿ ಇದೀಗ ಈ ತಂಡದ ವಿರುದ್ಧ ಪ್ರಕರಣ ದಾಖಲಾಗಿದೆ.

ನೃತ್ಯ ಪ್ರದರ್ಶನದ ಸಮಯದಲ್ಲಿ ನೃತ್ಯಗಾರನೊಬ್ಬ ಜೀವಂತ ಕೋಳಿಯನ್ನು ಹಿಡಿದು ಅದರ ಕತ್ತಿಗೆ ಕಚ್ಚಿ ರಕ್ತ ಹೀರುತ್ತಿರುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋವನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಳ್ಳಲಾಗಿದ್ದು, ವಿಡಿಯೋ ಹಂಚಿಕೊಂಡ ಕೆಲ ಹೊತ್ತಿನಲ್ಲೇ ಎಲ್ಲೆಡೆ ವೈರಲ್​​ ಆಗಿದೆ.

ಇದನ್ನೂ ಓದಿ: ಅಂಬಾನಿ ಮಗನ ಮದುವೆಯ ಫೋಟೋಗ್ರಾಫರ್ ಯಾರು ಗೊತ್ತಾ? ಅವರು ಪಡೆಯುವ ಸಂಭಾವನೆ ಎಷ್ಟು?

ಈ ವೈರಲ್​​​ ವಿಡಿಯೋ ನೆಟ್ಟಿಗರಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಪ್ರಾಣಿ ಹಿಂಸೆಗೈದ ನೃತ್ಯಗಾರನ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳುವಂತೆ ನೆಟ್ಟಿಗರು ಆಗ್ರಹಿಸಿದ್ದಾರೆ. ಪರಿಣಾಮ ನೃತ್ಯ ತಂಡದ ವಿರುದ್ದ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯಿದೆ, 1960 ರ ಸೆಕ್ಷನ್ 11 (1) (ಎ) ಮತ್ತು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 11 (1) (ಎ) ಅಡಿಯಲ್ಲಿ ಕೇಸು ದಾಖಲಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:05 pm, Fri, 12 July 24

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ