Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜೀವಂತ ಕೋಳಿಯ ತಲೆ ಕಚ್ಚಿ ವಿಕೃತಿ ಮೆರೆಯುತ್ತಾ ನೃತ್ಯ ಮಾಡಿದ ಡ್ಯಾನ್ಸರ್​; ವಿಡಿಯೋ ವೈರಲ್​​​

ನೃತ್ಯ ಪ್ರದರ್ಶನದ ಸಮಯದಲ್ಲಿ ನೃತ್ಯಗಾರನೊಬ್ಬ ಜೀವಂತ ಕೋಳಿಯನ್ನು ಹಿಡಿದು ಅದರ ಕುತಿಗೆಯನ್ನು ಕಚ್ಚಿ ರಕ್ತ ಹೀರುತ್ತಾ ನೃತ್ಯ ಮಾಡಿದ್ದಾನೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದ್ದು, ನೃತ್ಯ ತಂಡದ ವಿರುದ್ದ ಕೇಸು ದಾಖಲಾಗಿದೆ.

Viral Video: ಜೀವಂತ ಕೋಳಿಯ ತಲೆ ಕಚ್ಚಿ ವಿಕೃತಿ ಮೆರೆಯುತ್ತಾ ನೃತ್ಯ ಮಾಡಿದ ಡ್ಯಾನ್ಸರ್​; ವಿಡಿಯೋ ವೈರಲ್​​​
Follow us
ಅಕ್ಷತಾ ವರ್ಕಾಡಿ
|

Updated on:Jul 12, 2024 | 4:15 PM

ಆಂಧ್ರಪ್ರದೇಶ: ಅನಕಾಪಲ್ಲಿಯಲ್ಲಿ ವಿಷ್ಣು ಎಂಟರ್‌ಟೈನ್‌ಮೆಂಟ್ ಹೆಸರಿನ ನೃತ್ಯ ತಂಡವೊಂದರ ನೃತ್ಯ ಪ್ರದರ್ಶನ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ತಂಡವು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದು, ಅವರ ಅಭಿನಯವು ವಿವಾದವನ್ನು ಹುಟ್ಟುಹಾಕಿದೆ. ಎಬಿಪಿ ದೇಶಂ ವರದಿಯ ಪ್ರಕಾರ, ನೃತ್ಯ ತಂಡವು ನೃತ್ಯ ಪ್ರದರ್ಶನದ ವೇಳೆ ಜೀವಂತ ಕೋಳಿ ತಲೆಯನ್ನು ಕಚ್ಚಿ ವಿಕೃತಿ ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ. ಪರಿಣಾಮವಾಗಿ ಇದೀಗ ಈ ತಂಡದ ವಿರುದ್ಧ ಪ್ರಕರಣ ದಾಖಲಾಗಿದೆ.

ನೃತ್ಯ ಪ್ರದರ್ಶನದ ಸಮಯದಲ್ಲಿ ನೃತ್ಯಗಾರನೊಬ್ಬ ಜೀವಂತ ಕೋಳಿಯನ್ನು ಹಿಡಿದು ಅದರ ಕತ್ತಿಗೆ ಕಚ್ಚಿ ರಕ್ತ ಹೀರುತ್ತಿರುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋವನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಳ್ಳಲಾಗಿದ್ದು, ವಿಡಿಯೋ ಹಂಚಿಕೊಂಡ ಕೆಲ ಹೊತ್ತಿನಲ್ಲೇ ಎಲ್ಲೆಡೆ ವೈರಲ್​​ ಆಗಿದೆ.

ಇದನ್ನೂ ಓದಿ: ಅಂಬಾನಿ ಮಗನ ಮದುವೆಯ ಫೋಟೋಗ್ರಾಫರ್ ಯಾರು ಗೊತ್ತಾ? ಅವರು ಪಡೆಯುವ ಸಂಭಾವನೆ ಎಷ್ಟು?

ಈ ವೈರಲ್​​​ ವಿಡಿಯೋ ನೆಟ್ಟಿಗರಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಪ್ರಾಣಿ ಹಿಂಸೆಗೈದ ನೃತ್ಯಗಾರನ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳುವಂತೆ ನೆಟ್ಟಿಗರು ಆಗ್ರಹಿಸಿದ್ದಾರೆ. ಪರಿಣಾಮ ನೃತ್ಯ ತಂಡದ ವಿರುದ್ದ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯಿದೆ, 1960 ರ ಸೆಕ್ಷನ್ 11 (1) (ಎ) ಮತ್ತು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 11 (1) (ಎ) ಅಡಿಯಲ್ಲಿ ಕೇಸು ದಾಖಲಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:05 pm, Fri, 12 July 24

ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು