Viral Video: ಜೀವಂತ ಕೋಳಿಯ ತಲೆ ಕಚ್ಚಿ ವಿಕೃತಿ ಮೆರೆಯುತ್ತಾ ನೃತ್ಯ ಮಾಡಿದ ಡ್ಯಾನ್ಸರ್​; ವಿಡಿಯೋ ವೈರಲ್​​​

ನೃತ್ಯ ಪ್ರದರ್ಶನದ ಸಮಯದಲ್ಲಿ ನೃತ್ಯಗಾರನೊಬ್ಬ ಜೀವಂತ ಕೋಳಿಯನ್ನು ಹಿಡಿದು ಅದರ ಕುತಿಗೆಯನ್ನು ಕಚ್ಚಿ ರಕ್ತ ಹೀರುತ್ತಾ ನೃತ್ಯ ಮಾಡಿದ್ದಾನೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದ್ದು, ನೃತ್ಯ ತಂಡದ ವಿರುದ್ದ ಕೇಸು ದಾಖಲಾಗಿದೆ.

Viral Video: ಜೀವಂತ ಕೋಳಿಯ ತಲೆ ಕಚ್ಚಿ ವಿಕೃತಿ ಮೆರೆಯುತ್ತಾ ನೃತ್ಯ ಮಾಡಿದ ಡ್ಯಾನ್ಸರ್​; ವಿಡಿಯೋ ವೈರಲ್​​​
Follow us
|

Updated on:Jul 12, 2024 | 4:15 PM

ಆಂಧ್ರಪ್ರದೇಶ: ಅನಕಾಪಲ್ಲಿಯಲ್ಲಿ ವಿಷ್ಣು ಎಂಟರ್‌ಟೈನ್‌ಮೆಂಟ್ ಹೆಸರಿನ ನೃತ್ಯ ತಂಡವೊಂದರ ನೃತ್ಯ ಪ್ರದರ್ಶನ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ತಂಡವು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದು, ಅವರ ಅಭಿನಯವು ವಿವಾದವನ್ನು ಹುಟ್ಟುಹಾಕಿದೆ. ಎಬಿಪಿ ದೇಶಂ ವರದಿಯ ಪ್ರಕಾರ, ನೃತ್ಯ ತಂಡವು ನೃತ್ಯ ಪ್ರದರ್ಶನದ ವೇಳೆ ಜೀವಂತ ಕೋಳಿ ತಲೆಯನ್ನು ಕಚ್ಚಿ ವಿಕೃತಿ ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ. ಪರಿಣಾಮವಾಗಿ ಇದೀಗ ಈ ತಂಡದ ವಿರುದ್ಧ ಪ್ರಕರಣ ದಾಖಲಾಗಿದೆ.

ನೃತ್ಯ ಪ್ರದರ್ಶನದ ಸಮಯದಲ್ಲಿ ನೃತ್ಯಗಾರನೊಬ್ಬ ಜೀವಂತ ಕೋಳಿಯನ್ನು ಹಿಡಿದು ಅದರ ಕತ್ತಿಗೆ ಕಚ್ಚಿ ರಕ್ತ ಹೀರುತ್ತಿರುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋವನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಳ್ಳಲಾಗಿದ್ದು, ವಿಡಿಯೋ ಹಂಚಿಕೊಂಡ ಕೆಲ ಹೊತ್ತಿನಲ್ಲೇ ಎಲ್ಲೆಡೆ ವೈರಲ್​​ ಆಗಿದೆ.

ಇದನ್ನೂ ಓದಿ: ಅಂಬಾನಿ ಮಗನ ಮದುವೆಯ ಫೋಟೋಗ್ರಾಫರ್ ಯಾರು ಗೊತ್ತಾ? ಅವರು ಪಡೆಯುವ ಸಂಭಾವನೆ ಎಷ್ಟು?

ಈ ವೈರಲ್​​​ ವಿಡಿಯೋ ನೆಟ್ಟಿಗರಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಪ್ರಾಣಿ ಹಿಂಸೆಗೈದ ನೃತ್ಯಗಾರನ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳುವಂತೆ ನೆಟ್ಟಿಗರು ಆಗ್ರಹಿಸಿದ್ದಾರೆ. ಪರಿಣಾಮ ನೃತ್ಯ ತಂಡದ ವಿರುದ್ದ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯಿದೆ, 1960 ರ ಸೆಕ್ಷನ್ 11 (1) (ಎ) ಮತ್ತು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 11 (1) (ಎ) ಅಡಿಯಲ್ಲಿ ಕೇಸು ದಾಖಲಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:05 pm, Fri, 12 July 24

ತಾಜಾ ಸುದ್ದಿ
ಪಿಎಸ್​ಐ ಅನುಮಾನಾಸ್ಪದ ಸಾವು: ಸಿಎಂ ವಿರುದ್ಧ ರೊಚ್ಚಿಗೆದ್ದ ಶಾಸಕ ಯತ್ನಾಳ್
ಪಿಎಸ್​ಐ ಅನುಮಾನಾಸ್ಪದ ಸಾವು: ಸಿಎಂ ವಿರುದ್ಧ ರೊಚ್ಚಿಗೆದ್ದ ಶಾಸಕ ಯತ್ನಾಳ್
ದುನಿಯಾ ವಿಜಯ್ ನಿರ್ದೇಶನದಲ್ಲಿ ನಟಿಸುವ ಆಸೆ ವ್ಯಕ್ತಪಡಿಸಿದ ಶಿವಣ್ಣ
ದುನಿಯಾ ವಿಜಯ್ ನಿರ್ದೇಶನದಲ್ಲಿ ನಟಿಸುವ ಆಸೆ ವ್ಯಕ್ತಪಡಿಸಿದ ಶಿವಣ್ಣ
‘ಮಾರ್ಟಿನ್’ ಖದರ್ ಬೇರೆಯದ್ದೇ ರೀತಿ ಇರುತ್ತದೆ: ಧ್ರುವ ಸರ್ಜಾ
‘ಮಾರ್ಟಿನ್’ ಖದರ್ ಬೇರೆಯದ್ದೇ ರೀತಿ ಇರುತ್ತದೆ: ಧ್ರುವ ಸರ್ಜಾ
PSI ಪರಶುರಾಮ್ ಮೃತ ದೇಹ ನೋಡಿ ಕಣ್ಣೀರಿಟ್ಟ ಅಮ್ಮ
PSI ಪರಶುರಾಮ್ ಮೃತ ದೇಹ ನೋಡಿ ಕಣ್ಣೀರಿಟ್ಟ ಅಮ್ಮ
ಊರುಗೋಲಿನ ಸಹಾಯದಿಂದ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಬಿಜೆಪಿ ಕಾರ್ಯಕರ್ತ
ಊರುಗೋಲಿನ ಸಹಾಯದಿಂದ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಬಿಜೆಪಿ ಕಾರ್ಯಕರ್ತ
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ಲ್ಯಾಬ್ ಟೆಕ್ನಿಷಿಯನ್‌; ದಂಗಾದ ರೋಗಿಗಳು
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ಲ್ಯಾಬ್ ಟೆಕ್ನಿಷಿಯನ್‌; ದಂಗಾದ ರೋಗಿಗಳು
ನನ್ನ ಗಂಡನಿಗೆ MLA ಮತ್ತು ಮಗ 30 ಲಕ್ಷಕ್ಕೆ ಟಾರ್ಚರ್ ಕೊಟ್ಟವ್ರೆ ಸರ್
ನನ್ನ ಗಂಡನಿಗೆ MLA ಮತ್ತು ಮಗ 30 ಲಕ್ಷಕ್ಕೆ ಟಾರ್ಚರ್ ಕೊಟ್ಟವ್ರೆ ಸರ್
ಪಾದಯಾತ್ರೆ ಮುಗಿಯುವುದರೊಳಗೆ ಸಿಎಂ ರಾಜೀನಾಮೆ ಕೊಡುತ್ತಾರೆ: ಯಡಿಯೂರಪ್ಪ
ಪಾದಯಾತ್ರೆ ಮುಗಿಯುವುದರೊಳಗೆ ಸಿಎಂ ರಾಜೀನಾಮೆ ಕೊಡುತ್ತಾರೆ: ಯಡಿಯೂರಪ್ಪ
BJP JDS Padayatra: ಮೈಸೂರು ಚಲೋ ಸಮಾವೇಶದಲ್ಲಿ ಪ್ರಹ್ಲಾದ್ ಜೋಶಿ ಭಾಷಣ
BJP JDS Padayatra: ಮೈಸೂರು ಚಲೋ ಸಮಾವೇಶದಲ್ಲಿ ಪ್ರಹ್ಲಾದ್ ಜೋಶಿ ಭಾಷಣ
ನಥಿಂಗ್ ಫೋನ್ ಸಿರೀಸ್​ನಲ್ಲಿ ಬಂತು ಮತ್ತೊಂದು ಸೂಪರ್ ಡಿಸೈನ್ ಫೋನ್
ನಥಿಂಗ್ ಫೋನ್ ಸಿರೀಸ್​ನಲ್ಲಿ ಬಂತು ಮತ್ತೊಂದು ಸೂಪರ್ ಡಿಸೈನ್ ಫೋನ್