AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗಿ ಆದಿತ್ಯನಾಥ್​ ಸಂಪುಟದಲ್ಲಿ ಮುಸ್ಲಿಂ ಸಮುದಾಯದ ಏಕೈಕ ಸಚಿವ ಇವರು; ಕಳೆದ ಬಾರಿ ಇದ್ದವರಿಗಿಲ್ಲ ಸ್ಥಾನ

ಅನ್ಸಾರಿಯವರಿಗೆ ಈಗ 32 ವರ್ಷ. ಲಖನೌ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾಗಿದ್ದಾಗ ಅವರು ಎಬಿವಿಪಿಯಲ್ಲಿ ಸಕ್ರಿಯರಾಗಿದ್ದರು.  ಯೋಗಿ ಸರ್ಕಾರಕ್ಕೆ ಸೇರ್ಪಡೆಯಾದ 31 ಮಂದಿ ಹೊಸಬರಲ್ಲಿ ಇವರೂ ಒಬ್ಬರು.

ಯೋಗಿ ಆದಿತ್ಯನಾಥ್​ ಸಂಪುಟದಲ್ಲಿ ಮುಸ್ಲಿಂ ಸಮುದಾಯದ ಏಕೈಕ ಸಚಿವ ಇವರು; ಕಳೆದ ಬಾರಿ ಇದ್ದವರಿಗಿಲ್ಲ ಸ್ಥಾನ
ಡ್ಯಾನಿಶ್​ ಅನ್ಸಾರಿ
TV9 Web
| Edited By: |

Updated on:Mar 26, 2022 | 7:23 PM

Share

ಉತ್ತರ ಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯನಾಥ್ (Yogi Adityanath)​ ಸಂಪುಟಕ್ಕೆ 52 ಸಚಿವರು ಸೇರ್ಪಡೆಯಾಗಿದ್ದಾರೆ. 2022ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿ ಯೋಗಿ ಆದಿತ್ಯನಾಥ್​ ಸತತ ಎರಡನೇ ಅವಧಿಗೆ ಮುಖ್ಯಮಂತ್ರಿ ಹುದ್ದೆಗೇರಿದ್ದಾರೆ. ಅವರೊಂದಿಗೆ 52 ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಆದರೆ ಈ 52 ಸಚಿವರ ಪೈಕಿ ಒಬ್ಬರು ಮಾತ್ರ ಮುಸ್ಲಿಂ ಸಮುದಾಯಕ್ಕೆ ಸೇರಿದ ಸಚಿವ. ಮುಸ್ಲಿಂ ಸಮುದಾಯಕ್ಕೆ ಸೇರಿದ ಈ ಸಚಿವರ ಹೆಸರು ಡ್ಯಾನಿಶ್​ ಆಜಾದ್ ಅನ್ಸಾರಿ. ಮೂಲತಃ ಬಲ್ಲಿಯಾ ಜಿಲ್ಲೆಯವರು. ಯೋಗಿ ಆದಿತ್ಯನಾಥ್​ ಅವರ ಸರ್ಕಾರದ ಮೊದಲ ಅವಧಿಯಲ್ಲಿ ಮೊಹ್ಸಿನ್​ ರಾಜಾ ಇದ್ದರು. ಈ ಅವಧಿಗೆ ಅವರನ್ನು ಕೈಬಿಟ್ಟು ಡ್ಯಾನಿಶ್​ ಆಜಾದ್​ರನ್ನು ಆಯ್ಕೆ ಮಾಡಲಾಗಿದೆ.

ಅನ್ಸಾರಿಯವರಿಗೆ ಈಗ 32 ವರ್ಷ. ಲಖನೌ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾಗಿದ್ದಾಗ ಅವರು ಎಬಿವಿಪಿಯಲ್ಲಿ ಸಕ್ರಿಯರಾಗಿದ್ದರು.  ಯೋಗಿ ಸರ್ಕಾರದ ಒಟ್ಟು 52 ಸಚಿವರಲ್ಲಿ 31 ಮಂದಿ ಹೊಸಬರು. ಉಳಿದ 21 ಮಂದಿ ಈ ಹಿಂದಿನ ಅವಧಿಯಲ್ಲಿ ಇದ್ದವರೇ ಆಗಿದ್ದಾರೆ.  ಹೀಗೆ ತಮಗೆ ಸಚಿವ ಸ್ಥಾನ ಕೊಟ್ಟ ಬಗ್ಗೆ ಪ್ರತಿಕ್ರಿಯೆ ನೀಡಿದ ಅನ್ಸಾರಿ, ನನಗೆ ಇದು ಅನಿರೀಕ್ಷಿತವಲ್ಲ. ಬಿಜೆಪಿ ಯಾವಾಗಲೂ ಪ್ರತಿಯೊಬ್ಬ ಕಾರ್ಯಕರ್ತನ ಶ್ರಮವನ್ನೂ ಗುರುತಿಸುತ್ತದೆ. ಯಾವ ಕಾರ್ಯಕರ್ತರು ಪಕ್ಷಕ್ಕಾಗಿ ತಮ್ಮನ್ನು ತಾವು ಅರ್ಪಿಸಿಕೊಂಡಿದ್ದಾರೋ, ಅವರಿಗೆ ಪಕ್ಷ ಸ್ಥಾನ-ಮಾನ ನೀಡುತ್ತದೆ ಎಂದು ಹೇಳಿದ್ದಾರೆ.

ಅನ್ಸಾರಿಯವರು ಉತ್ತರ ಪ್ರದೇಶ ಬಿಜೆಪಿ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಕಳೆದ ಅವಧಿಯಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರವಿದ್ದಾಗ 2018ರಲ್ಲಿ ಉರ್ದು ಭಾಷಾ ಸಮಿತಿಗೆ ಸದಸ್ಯರಾಗಿ ನೇಮಕಗೊಂಡರು. ಅಂದರೆ ಅದು ಸಚಿವ ಸ್ಥಾನಮಾನ ಇರುವ ಹುದ್ದೆಯಾಗಿದೆ. 2022ರ ವಿಧಾನಸಭೆ ಚುನಾವಣೆಗೂ ಕೆಲವೇ ದಿನಗಳ ಮೊದಲು ಅವರಿಗೆ ಉತ್ತರ ಪ್ರದೇಶ ಬಿಜೆಪಿ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಯಿತು.  ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ಮತ್ತು ಸಚಿವ ಪ್ರಮಾಣ ವಚನ ಸ್ವೀಕಾರ ಸಮಾರಂಭ ಲಖನೌದ ಏಕನಾ ಸ್ಟೇಡಿಯಂನಲ್ಲಿ ನಡೆಯಿತು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್​ ಶಾ, ರಕ್ಷಣಾ ಸಚಿವ ರಾಜನಾಥ್​ ಸಿಂಗ್​, ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್​, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಸ್ಮೃತಿ ಇರಾನಿ ಇತರರು ಪಾಲ್ಗೊಂಡಿದ್ದರು.

ಇದನ್ನೂ ಓದಿ: Salam pooja: ಟಿಪ್ಪುವಿನಿಂದ ನೆರವು ಪಡೆದ ಎಲ್ಲಾ ಕ್ಷೇತ್ರಗಳಲ್ಲೂ ಸಲಾಂ ಪೂಜೆ ಇದೆ -ಇತಿಹಾಸ ತಜ್ಞರು ಹಳೋದೇನು?

Published On - 7:22 pm, Sat, 26 March 22

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ