AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಾಳದ ಸಚಿವರ ಸೊಸೆಯ ಮೊಬೈಲ್ ಸಂಖ್ಯೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಸುವೇಂದು ಅಧಿಕಾರಿ; ದೂರು ದಾಖಲು

ತೃಣಮೂಲ ಕಾಂಗ್ರೆಸ್ MGNREGS ಅಡಿಯಲ್ಲಿ ಬಾಕಿ ಪಾವತಿಗಳನ್ನು ಒತ್ತಾಯಿಸಲು ಚಳುವಳಿಯನ್ನು ಪ್ರಾರಂಭಿಸಿದೆ. ಶನಿವಾರ, ತೃಣಮೂಲ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರು ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಎಂಜಿಎನ್‌ಆರ್‌ಇಜಿಎ ಪಾವತಿಯನ್ನು ಪಡೆಯದಿರುವವರು ಬಿಜೆಪಿ ರಾಜ್ಯಾಧ್ಯಕ್ಷ ಸುಕಾಂತ ಮಜುಂದಾರ್ ಮತ್ತು ರಾಜ್ಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿಗೆ ಕರೆ ಮಾಡಿ ತಮ್ಮ ಹಣಕ್ಕಾಗಿ ಬೇಡಿಕೆಯಿಡುವಂತೆ ಒತ್ತಾಯಿಸಿದರು.

ಬಂಗಾಳದ ಸಚಿವರ ಸೊಸೆಯ ಮೊಬೈಲ್ ಸಂಖ್ಯೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಸುವೇಂದು ಅಧಿಕಾರಿ; ದೂರು ದಾಖಲು
ಸುವೇಂದು ಅಧಿಕಾರಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Oct 12, 2023 | 3:28 PM

Share

ಕೂಚ್ ಬೆಹಾರ್ ಅಕ್ಟೋಬರ್  12: ಉತ್ತರ ಬಂಗಾಳದ ಅಭಿವೃದ್ಧಿ ಸಚಿವ ಉದಯನ್ ಗುಹಾ (Udayan Guha) ಅವರ ಸೊಸೆ ಅಪೂರ್ಬಾ ಗುಹಾ, ಬಿಜೆಪಿ ನಾಯಕ ಸುವೇಂದು ಅಧಿಕಾರಿ (Suvendu Adhikari) ಮತ್ತು ಅವರ ಬೆಂಬಲಿಗರ ವಿರುದ್ಧ ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ (MGNREGS) ಪಾವತಿಗೆ ಬೇಡಿಕೆಯ ಕುರಿತು ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿಗೆ ಸಂದೇಶ ಕಳುಹಿಸಿದ ನಂತರ ವಿರೋಧ ಪಕ್ಷದ ನಾಯಕ ಆಕೆಯ ಮೊಬೈಲ್ ಸಂಖ್ಯೆಯನ್ನು ಸಾಮಾಜಿಕ ಮಾಧ್ಯಮದಲ್ಲಿ  ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಅಂದಿನಿಂದ ಆಕೆಗೆ ವಾಟ್ಸಾಪ್ ಮತ್ತು ಫೋನ್ ಕರೆಗಳ ಮೂಲಕ ಅಶ್ಲೀಲ ಸಂದೇಶಗಳು ಮತ್ತು ಬೆದರಿಕೆಗಳು ಬರುತ್ತಿವೆ. ಈ ಬಗ್ಗೆ ಫೂಲ್ಬಗಾನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ತೃಣಮೂಲ ಕಾಂಗ್ರೆಸ್ (TMC) MGNREGS ಅಡಿಯಲ್ಲಿ ಬಾಕಿ ಪಾವತಿಗಳನ್ನು ಒತ್ತಾಯಿಸಲು ಚಳುವಳಿಯನ್ನು ಪ್ರಾರಂಭಿಸಿದೆ. ಶನಿವಾರ, ತೃಣಮೂಲ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರು ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಎಂಜಿಎನ್‌ಆರ್‌ಇಜಿಎ ಪಾವತಿಯನ್ನು ಪಡೆಯದಿರುವವರು ಬಿಜೆಪಿ ರಾಜ್ಯಾಧ್ಯಕ್ಷ ಸುಕಾಂತ ಮಜುಂದಾರ್ ಮತ್ತು ರಾಜ್ಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿಗೆ ಕರೆ ಮಾಡಿ ತಮ್ಮ ಹಣಕ್ಕಾಗಿ ಬೇಡಿಕೆಯಿಡುವಂತೆ ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯೆಯಾಗಿ, ಅಪೂರ್ವ ಗುಹಾ ಅವರು ಸುವೇದು ಅಧಿಕಾರಿಗೆ ವಾಟ್ಸಾಪ್‌ನಲ್ಲಿ ನನಗೆ 100 ದಿನಗಳ ಕೆಲಸಕ್ಕೆ ಪಾವತಿ ಮಾಡಬೇಕು ಎಂದು ಸಂದೇಶ ಕಳುಹಿಸಿದ್ದಾರೆ.

ಇದಾದ ನಂತರ ತೃಣಮೂಲ ಕಾಂಗ್ರೆಸ್ ಮೇಲೆ ವಾಗ್ದಾಳಿ ಮಾಡಿದ ಬಿಜೆಪಿ ನಾಯಕ ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಅಪೂರ್ಬಾ ಅವರ ಸಂಖ್ಯೆಯನ್ನು ಪೋಸ್ಟ್ ಮಾಡಿದ್ದಾರೆ.

ಸುವೇಂದು ಅಧಿಕಾರಿ ಅವರು ತಮ್ಮ ಅಧಿಕೃತ ಪುಟದಲ್ಲಿ ನನ್ನ ಫೋನ್ ಸಂಖ್ಯೆಯನ್ನು ಪೋಸ್ಟ್ ಮಾಡಿದ ನಂತರ, ನನಗೆ ನಿಂದನೀಯ ಕರೆಗಳು ಮತ್ತು ಸಂದೇಶಗಳು ಬರುತ್ತಿವೆ. ಅಷ್ಟೇ ಅಲ್ಲ, ಬೆದರಿಕೆ ಕರೆಗಳು ಬರುತ್ತಿರುವ ಕಾರಣ ನನಗೆ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಬೇಕಾಗಿ ಬಂದಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶದಲ್ಲೂ ಜಾತಿ ಗಣತಿ ನಡೆಸಲಾಗುವುದು: ಪ್ರಿಯಾಂಕಾ ಗಾಂಧಿ

ನಾನು ಭಾನುವಾರ ಮತ್ತೆ ಫೋನ್ ಆನ್ ಮಾಡಿದಾಗಲೂ ಅದೇ ರೀತಿಯಲ್ಲಿ ಸಂದೇಶಗಳು ಮತ್ತು ಕರೆಗಳನ್ನು ಬಂದಿವೆ. ಈ ರೀತಿ ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯ ನಂಬರ್ ಪೋಸ್ಟ್ ಮಾಡುವುದನ್ನು ಒಪ್ಪಲಾಗದು. ಹೀಗಾಗಿ ಲಿಖಿತ ದೂರು ನೀಡಿದ್ದೇನೆ’ ಎಂದು ಹೇಳಿದ್ದಾರೆ. ಆದಾಗ್ಯೂ, ಕೂಚ್ ಬೆಹಾರ್ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿರಾಜ್ ಬೋಸ್ ಈ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಇವು ತೃಣಮೂಲ ಕಾಂಗ್ರೆಸ್​​ನ ಸುಳ್ಳು ಕತೆ , ಇವೆಲ್ಲವೂ ಪ್ರಚಾರಕ್ಕಾಗಿ ಮಾಡಿದ್ದು, ಟಿಎಂಸಿ ಜನರಿಗಾಗಿ ಏನೂ ಮಾಡುವ ಉದ್ದೇಶ ಹೊಂದಿಲ್ಲ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ